ಕ್ರೀಡೆ

ಸಿಡಬ್ಲ್ಯೂಸಿ-23 ಪ್ರೊಮೋಷನಲ್ ವೀಡಿಯೋದಲ್ಲಿ ಇಮ್ರಾನ್‌ ಖಾನ್‌ ಕೈಬಿಟ್ಟ ಪಿಸಿಬಿ: ಆಕ್ರೋಶದ ಬಳಿಕ ಹೊಸ ವೀಡಿಯೋ

ಇಸ್ಲಾಮಾಬಾದ್ : ಅಕ್ಟೋಬರ್ 5 ರಿಂದ ಭಾರತದಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಗೆ ತಮ್ಮ ತಂಡದ ಪ್ರೊಮೋಷನಲ್ ವೀಡಿಯೋದಲ್ಲಿ ಭಾರಿ ಯಡವಟ್ಟು ಮಾಡಿಕೊಂಡಿದ್ದ ಪಾಕ್ ಕ್ರಿಕೆಟ್ ಮಂಡಳಿ ಈಗ ಅದನ್ನು ಸರಿಪಡಿಸಿಕೊಂಡಿದೆ.

ಹಳೆಯ ಪ್ರೊಮೋಷನಲ್ ವೀಡಿಯೋದಲ್ಲಿ 1992 ರಲ್ಲಿ ವಿಶ್ವಕಪ್ ನ್ನು ಗೆದ್ದ ಪಾಕಿಸ್ತಾನ ತಂಡವನ್ನು ಮುನ್ನಡೆಸಿದ್ದ ಇಮ್ರಾನ್ ಖಾನ್ ಅವರನ್ನು ಈ ಹಿಂದಿನ ವೀಡಿಯೋದಲ್ಲಿ ಕೈಬಿಡಲಾಗಿತ್ತು. ಆದರೆ ಈಗ ಹೊಸ ವೀಡಿಯೋದಲ್ಲಿ ಇಮ್ರಾನ್ ಖಾನ್ ನೇತೃತ್ವದ 1992 ರ ವಿಶ್ವಕಪ್ ತಂಡದ ವೀಡಿಯೋ ತುಣುಕುಗಳನ್ನು ಸೇರಿಸಲಾಗಿದೆ.

ಅಲ್ಲಿನ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಈ ಅಭಿಯಾನದ ವೀಡಿಯೊವನ್ನು ಆಗಸ್ಟ್ 14 ರಂದು ಅಪ್‌ಲೋಡ್ ಮಾಡಲಾಗಿತ್ತು. ಆದರೆ ಅದರಲ್ಲಿ ಇಮ್ರಾನ್ ಖಾನ್ ಇಲ್ಲದೇ ಇದ್ದದ್ದು ಪಾಕ್ ಕ್ರಿಕೆಟ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಹೊಸ ವೀಡಿಯೊ ಇಮ್ರಾನ್ ತನ್ನ ಸಹ ಆಟಗಾರರೊಂದಿಗೆ ವಿಶ್ವಕಪ್ ಗೆಲುವನ್ನು ಆಚರಿಸುತ್ತಿರುವ ಮತ್ತು WC ಟ್ರೋಫಿಯನ್ನು ಹಿಡಿದಿರುವ ಫ್ರೇಮ್‌ಗಳನ್ನು ಒಳಗೊಂಡಿದೆ.

ಗಮನಾರ್ಹವಾಗಿ, ಪಾಕಿಸ್ತಾನದ ಲೆಜೆಂಡರಿ ವೇಗಿ ವಾಸಿಂ ಅಕ್ರಮ್ ಇತ್ತೀಚೆಗೆ ಪೋಸ್ಟ್ ಮಾಡಿದ ವೀಡಿಯೊದಲ್ಲಿ ದೇಶದ ಕ್ರಿಕೆಟ್ ಇತಿಹಾಸದಲ್ಲಿ ಮಾಜಿ ನಾಯಕ ಇಮ್ರಾನ್ ಖಾನ್ ಅವರ ಕೊಡುಗೆಯನ್ನು ನಿರ್ಲಕ್ಷಿಸಿದ್ದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ನ್ನು ಟೀಕಿಸಿದ್ದರು.

andolanait

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

2 hours ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

4 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

4 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

10 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

10 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

11 hours ago