ಕ್ರೀಡೆ

ರಣಜಿ ಟ್ರೋಫಿ 2025: ಮತ್ತೆ ಮುಗ್ಗರಿಸಿದ ಟೀಂ ಇಂಡಿಯಾದ ಸ್ಟಾರ್‌ ಆಟಗಾರರು

ಮುಂಬೈ: ಟೆಸ್ಟ್‌ ಕ್ರಿಕೆಟ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾದ ಸ್ಟಾರ್‌ ಆಟಗಾರರು ಈಗ ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲೂ ಮುಗ್ಗರಿಸಿದ್ದಾರೆ. ಟೀಂ ಇಂಡಿಯಾದ ನಾಯಕ ರೋಹಿತ್‌ ಶರ್ಮಾ, ಶುಭಮನ್‌ ಗಿಲ್‌, ಯಶಸ್ವಿ ಜೈಸ್ವಾಲ್‌, ಮತ್ತು ರಿಷಭ್‌ ಪಂತ್‌ ವೈಫಲ್ಯ ಅನುಭವಿಸಿದ್ದಾರೆ.

ನ್ಯೂಜಿಲೆಂಡ್‌ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಸೋತು ಟೀಕೆಗೆ ಗುರಿಯಾಗಿದ್ದ ಟೀ ಇಂಡಿಯಾದ ಆಟಗಾರರು ದೇಶಿಯ ಕ್ರಿಕೆಟ್‌ನಲ್ಲಿ ಆಡುವುದನ್ನು ಬಿಸಿಸಿಐ ಕಡ್ಡಾಯಗೊಳಿಸಿದೆ. ಆದರೆ ರಣಜಿ ಟ್ರೋಫಿಯಲ್ಲಿ ಆಡಿದ ಆಟಗಾರರು ಮತ್ತೆ ಕಳಪೆ ಪ್ರದರ್ಶನ ನೀಡಿದ್ದಾರೆ.

ರಣಜಿಯಲ್ಲಿ ಮುಂಬೈ ತಂಡದ ಪರ ಆಡುತ್ತಿರುವ ರೋಹಿತ್‌ ಶರ್ಮಾ, ಜಮ್ಮು ಮತ್ತು ಕಾಶ್ಮೀರದ ವಿರುದ್ಧದ ನಡೆದ ಪಂದ್ಯದಲ್ಲಿ ಕೇವಲ 3 ರನ್‌ಗಳಿಸಿ ಔಟ್‌ ಆಗಿದ್ದಾರೆ. ಹಾಗೆಯೇ ಯಶಸ್ವಿ ಜೈಸ್ವಾಲ್‌ ಕೂಡ ಮುಂಬೈ ತಂಡದಲ್ಲಿ ಆಡುತ್ತಿದ್ದು, ಕೇವಲ 4 ರನ್‌ಗಳಿಸಿ ವಿಕೆಟ್‌ ಒಪ್ಪಿಸಿದ್ದಾರೆ.

ರಾಜ್‌ಕೋಟ್‌ನಲ್ಲಿ ಸೌರಾಷ್ಟ್ರ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ತಂಡದ ಪರವಾಗಿ ಆಡುತ್ತಿರುವ ರಿಷಭ್‌ ಪಂತ್‌ ಕೇವಲ 1 ರನ್‌ಗಳಿಸಿ ವಿಕೆಟ್‌ ಒಪ್ಪಿಸಿದರು.

ಮತ್ತೊಂದೆಡೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಪಂಜಾಬ್‌ ಮತ್ತು ಕರ್ನಾಟಕ ತಂಡಗಳ ನಡುವಿನ ಪಂದ್ಯದಲ್ಲಿ ಶೂಭಮನ್‌ ಗಿಲ್‌ ಕೇವಲ 4 ರನ್‌ಗಳಿಸಿ ನಿರ್ಗಮಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago