ಮುಂಬೈ: ಟೆಸ್ಟ್ ಕ್ರಿಕೆಟ್ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾದ ಸ್ಟಾರ್ ಆಟಗಾರರು ಈಗ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲೂ ಮುಗ್ಗರಿಸಿದ್ದಾರೆ. ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ, ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಮತ್ತು ರಿಷಭ್ ಪಂತ್ ವೈಫಲ್ಯ ಅನುಭವಿಸಿದ್ದಾರೆ.
ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಸೋತು ಟೀಕೆಗೆ ಗುರಿಯಾಗಿದ್ದ ಟೀ ಇಂಡಿಯಾದ ಆಟಗಾರರು ದೇಶಿಯ ಕ್ರಿಕೆಟ್ನಲ್ಲಿ ಆಡುವುದನ್ನು ಬಿಸಿಸಿಐ ಕಡ್ಡಾಯಗೊಳಿಸಿದೆ. ಆದರೆ ರಣಜಿ ಟ್ರೋಫಿಯಲ್ಲಿ ಆಡಿದ ಆಟಗಾರರು ಮತ್ತೆ ಕಳಪೆ ಪ್ರದರ್ಶನ ನೀಡಿದ್ದಾರೆ.
ರಣಜಿಯಲ್ಲಿ ಮುಂಬೈ ತಂಡದ ಪರ ಆಡುತ್ತಿರುವ ರೋಹಿತ್ ಶರ್ಮಾ, ಜಮ್ಮು ಮತ್ತು ಕಾಶ್ಮೀರದ ವಿರುದ್ಧದ ನಡೆದ ಪಂದ್ಯದಲ್ಲಿ ಕೇವಲ 3 ರನ್ಗಳಿಸಿ ಔಟ್ ಆಗಿದ್ದಾರೆ. ಹಾಗೆಯೇ ಯಶಸ್ವಿ ಜೈಸ್ವಾಲ್ ಕೂಡ ಮುಂಬೈ ತಂಡದಲ್ಲಿ ಆಡುತ್ತಿದ್ದು, ಕೇವಲ 4 ರನ್ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ.
ರಾಜ್ಕೋಟ್ನಲ್ಲಿ ಸೌರಾಷ್ಟ್ರ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ತಂಡದ ಪರವಾಗಿ ಆಡುತ್ತಿರುವ ರಿಷಭ್ ಪಂತ್ ಕೇವಲ 1 ರನ್ಗಳಿಸಿ ವಿಕೆಟ್ ಒಪ್ಪಿಸಿದರು.
ಮತ್ತೊಂದೆಡೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಪಂಜಾಬ್ ಮತ್ತು ಕರ್ನಾಟಕ ತಂಡಗಳ ನಡುವಿನ ಪಂದ್ಯದಲ್ಲಿ ಶೂಭಮನ್ ಗಿಲ್ ಕೇವಲ 4 ರನ್ಗಳಿಸಿ ನಿರ್ಗಮಿಸಿದ್ದಾರೆ.
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…