ಕ್ರೀಡೆ

ರಾಮಮಂದಿರ ಉದ್ಘಾಟನೆ: ಶುಭ ಕೋರಿದ ಆಸೀಸ್‌ ಕ್ರಿಕೆಟಿಗ ಡೆವಿಡ್‌ ವಾರ್ನರ್‌!

ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾನ ವಿಗ್ರಹದ ‘ಪ್ರಾಣ ಪ್ರತಿಷ್ಠಾಪನೆಯಾಗಿರುವ ಶುಭ ಸಮಾರಂಭಕ್ಕೆ ಆಸೀಸ್‌ ಕ್ರಿಕೆಟಿಗ ಡೇವಿಡ್ ವಾರ್ನರ್ ಶುಭಾಶಯಗಳನ್ನು ಕೋರಿದ್ದಾರೆ. ವಾರ್ನರ್‌ ತಮ್ಮ ಇಸ್ಟಾಗ್ರಾಮ್‌ ಖಾತೆಯಲ್ಲಿ ‘ಜೈ ಶ್ರೀ ರಾಮ್’ ಘೋಷಣೆಯೊಂದಿಗೆ ತಮ್ಮ ಅಭಿನಂದನಾ ಸಂದೇಶವನ್ನು ಭಾರತೀಯರಿಗೆ ತಿಳಿಸಿದ್ದಾರೆ.

ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶ್ರೀರಾಮಚಂದ್ರನ ಆಗಮನದ ಫೋಟೋವೊಂದನ್ನು ಹಂಚಿಕೊಂಡಿರುವ ವಾರ್ನರ್, ಜೈ ಶ್ರೀರಾಮ್ ಇಂಡಿಯಾ ಎಂದು ಬರೆದುಕೊಂಡಿದ್ದಾರೆ. ಇದೀಗ ಡೇವಿಡ್ ವಾರ್ನರ್ ಅವರ ಈ ಪೋಸ್ಟ್​ಗೆ ಮೆಚ್ಚುಗೆಗಳ ಮಹಾಪೂರವೇ ಹರಿದು ಬರುತ್ತಿದ್ದು, ಎಲ್ಲೆಡೆ ಪ್ರಶಂಸೆಗೆ ಪಾತ್ರವಾಗಿದೆ.

ಟೆಸ್ಟ್‌ಗೆ ವಾರ್ನರ್ ವಿದಾಯ:
ಡೇವಿಡ್ ವಾರ್ನರ್ ಈಗಾಗಲೇ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸಿಡ್ನಿಯಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ಮೂಲಕ ವಾರ್ನರ್ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹಾಗೆಯೇ ಏಕದಿನ ವಿಶ್ವಕಪ್ ಫೈನಲ್ ಬಳಿಕ ಒಡಿಐ ಕ್ರಿಕೆಟ್​ನಿಂದ ಕೂಡ ನಿವೃತ್ತಿ ಘೋಷಿಸಿದ್ದಾರೆ.

ಆಸ್ಟ್ರೇಲಿಯಾ ಪರ 203 ಟೆಸ್ಟ್ ಇನಿಂಗ್ಸ್​ ಆಡಿರುವ ಡೇವಿಡ್ ವಾರ್ನರ್ ಆರಂಭಿಕನ ಸ್ಥಾನದಲ್ಲಿ ಒಟ್ಟು 8786 ರನ್ ಕಲೆಹಾಕಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಆರಂಭಿಕ ಬ್ಯಾಟರ್ ಎಂಬ ದಾಖಲೆಯೊಂದಿಗೆ ವಾರ್ನರ್ ವಿದಾಯ ಹೇಳಿದ್ದರು.

ಏಕದಿನ ವೃತ್ತಿ ಜೀವನ:
ಆಸ್ಟ್ರೇಲಿಯಾ ಪರ 161 ಏಕದಿನ ಇನ್ನಿಂಗ್ಸ್‌ಗಳನ್ನು ಆಡಿರುವ ವಾರ್ನರ್ 45.01 ರ ಸರಾಸರಿಯಲ್ಲಿ ಒಟ್ಟು 6,932 ರನ್ ಗಳಿಸಿದ್ದಾರೆ. ಈ ವೇಳೆ 22 ಶತಕಗಳು ಮತ್ತು 33 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ವಾರ್ನರ್ ಟಿ20 ಕ್ರಿಕೆಟ್​ನಲ್ಲಿ ಮಾತ್ರ ಮುಂದುವರೆಯುತ್ತಿದ್ದಾರೆ. ಒಂದು ವೇಳೆ ಮುಂಬರುವ ಟಿ20 ವಿಶ್ವಕಪ್​ಗಾಗಿ ಆಸ್ಟ್ರೇಲಿಯಾ​ ತಂಡದಲ್ಲಿ ಸ್ಥಾನ ಪಡೆಯದಿದ್ದರೆ ಚುಟುಕು ಕ್ರಿಕೆಟ್​ಗೂ ವಿದಾಯ ಹೇಳಬಹುದು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago