ಕ್ರೀಡೆ

ರಾಮಮಂದಿರ ಉದ್ಘಾಟನೆ: ಶುಭ ಕೋರಿದ ಆಸೀಸ್‌ ಕ್ರಿಕೆಟಿಗ ಡೆವಿಡ್‌ ವಾರ್ನರ್‌!

ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾನ ವಿಗ್ರಹದ ‘ಪ್ರಾಣ ಪ್ರತಿಷ್ಠಾಪನೆಯಾಗಿರುವ ಶುಭ ಸಮಾರಂಭಕ್ಕೆ ಆಸೀಸ್‌ ಕ್ರಿಕೆಟಿಗ ಡೇವಿಡ್ ವಾರ್ನರ್ ಶುಭಾಶಯಗಳನ್ನು ಕೋರಿದ್ದಾರೆ. ವಾರ್ನರ್‌ ತಮ್ಮ ಇಸ್ಟಾಗ್ರಾಮ್‌ ಖಾತೆಯಲ್ಲಿ ‘ಜೈ ಶ್ರೀ ರಾಮ್’ ಘೋಷಣೆಯೊಂದಿಗೆ ತಮ್ಮ ಅಭಿನಂದನಾ ಸಂದೇಶವನ್ನು ಭಾರತೀಯರಿಗೆ ತಿಳಿಸಿದ್ದಾರೆ.

ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶ್ರೀರಾಮಚಂದ್ರನ ಆಗಮನದ ಫೋಟೋವೊಂದನ್ನು ಹಂಚಿಕೊಂಡಿರುವ ವಾರ್ನರ್, ಜೈ ಶ್ರೀರಾಮ್ ಇಂಡಿಯಾ ಎಂದು ಬರೆದುಕೊಂಡಿದ್ದಾರೆ. ಇದೀಗ ಡೇವಿಡ್ ವಾರ್ನರ್ ಅವರ ಈ ಪೋಸ್ಟ್​ಗೆ ಮೆಚ್ಚುಗೆಗಳ ಮಹಾಪೂರವೇ ಹರಿದು ಬರುತ್ತಿದ್ದು, ಎಲ್ಲೆಡೆ ಪ್ರಶಂಸೆಗೆ ಪಾತ್ರವಾಗಿದೆ.

ಟೆಸ್ಟ್‌ಗೆ ವಾರ್ನರ್ ವಿದಾಯ:
ಡೇವಿಡ್ ವಾರ್ನರ್ ಈಗಾಗಲೇ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸಿಡ್ನಿಯಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ಮೂಲಕ ವಾರ್ನರ್ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹಾಗೆಯೇ ಏಕದಿನ ವಿಶ್ವಕಪ್ ಫೈನಲ್ ಬಳಿಕ ಒಡಿಐ ಕ್ರಿಕೆಟ್​ನಿಂದ ಕೂಡ ನಿವೃತ್ತಿ ಘೋಷಿಸಿದ್ದಾರೆ.

ಆಸ್ಟ್ರೇಲಿಯಾ ಪರ 203 ಟೆಸ್ಟ್ ಇನಿಂಗ್ಸ್​ ಆಡಿರುವ ಡೇವಿಡ್ ವಾರ್ನರ್ ಆರಂಭಿಕನ ಸ್ಥಾನದಲ್ಲಿ ಒಟ್ಟು 8786 ರನ್ ಕಲೆಹಾಕಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಆರಂಭಿಕ ಬ್ಯಾಟರ್ ಎಂಬ ದಾಖಲೆಯೊಂದಿಗೆ ವಾರ್ನರ್ ವಿದಾಯ ಹೇಳಿದ್ದರು.

ಏಕದಿನ ವೃತ್ತಿ ಜೀವನ:
ಆಸ್ಟ್ರೇಲಿಯಾ ಪರ 161 ಏಕದಿನ ಇನ್ನಿಂಗ್ಸ್‌ಗಳನ್ನು ಆಡಿರುವ ವಾರ್ನರ್ 45.01 ರ ಸರಾಸರಿಯಲ್ಲಿ ಒಟ್ಟು 6,932 ರನ್ ಗಳಿಸಿದ್ದಾರೆ. ಈ ವೇಳೆ 22 ಶತಕಗಳು ಮತ್ತು 33 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ವಾರ್ನರ್ ಟಿ20 ಕ್ರಿಕೆಟ್​ನಲ್ಲಿ ಮಾತ್ರ ಮುಂದುವರೆಯುತ್ತಿದ್ದಾರೆ. ಒಂದು ವೇಳೆ ಮುಂಬರುವ ಟಿ20 ವಿಶ್ವಕಪ್​ಗಾಗಿ ಆಸ್ಟ್ರೇಲಿಯಾ​ ತಂಡದಲ್ಲಿ ಸ್ಥಾನ ಪಡೆಯದಿದ್ದರೆ ಚುಟುಕು ಕ್ರಿಕೆಟ್​ಗೂ ವಿದಾಯ ಹೇಳಬಹುದು.

andolanait

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

2 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

2 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

2 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

2 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

3 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

3 hours ago