ಕ್ರೀಡೆ

ರಾಮಮಂದಿರ ಉದ್ಘಾಟನೆ: ಶುಭ ಕೋರಿದ ಆಸೀಸ್‌ ಕ್ರಿಕೆಟಿಗ ಡೆವಿಡ್‌ ವಾರ್ನರ್‌!

ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾನ ವಿಗ್ರಹದ ‘ಪ್ರಾಣ ಪ್ರತಿಷ್ಠಾಪನೆಯಾಗಿರುವ ಶುಭ ಸಮಾರಂಭಕ್ಕೆ ಆಸೀಸ್‌ ಕ್ರಿಕೆಟಿಗ ಡೇವಿಡ್ ವಾರ್ನರ್ ಶುಭಾಶಯಗಳನ್ನು ಕೋರಿದ್ದಾರೆ. ವಾರ್ನರ್‌ ತಮ್ಮ ಇಸ್ಟಾಗ್ರಾಮ್‌ ಖಾತೆಯಲ್ಲಿ ‘ಜೈ ಶ್ರೀ ರಾಮ್’ ಘೋಷಣೆಯೊಂದಿಗೆ ತಮ್ಮ ಅಭಿನಂದನಾ ಸಂದೇಶವನ್ನು ಭಾರತೀಯರಿಗೆ ತಿಳಿಸಿದ್ದಾರೆ.

ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶ್ರೀರಾಮಚಂದ್ರನ ಆಗಮನದ ಫೋಟೋವೊಂದನ್ನು ಹಂಚಿಕೊಂಡಿರುವ ವಾರ್ನರ್, ಜೈ ಶ್ರೀರಾಮ್ ಇಂಡಿಯಾ ಎಂದು ಬರೆದುಕೊಂಡಿದ್ದಾರೆ. ಇದೀಗ ಡೇವಿಡ್ ವಾರ್ನರ್ ಅವರ ಈ ಪೋಸ್ಟ್​ಗೆ ಮೆಚ್ಚುಗೆಗಳ ಮಹಾಪೂರವೇ ಹರಿದು ಬರುತ್ತಿದ್ದು, ಎಲ್ಲೆಡೆ ಪ್ರಶಂಸೆಗೆ ಪಾತ್ರವಾಗಿದೆ.

ಟೆಸ್ಟ್‌ಗೆ ವಾರ್ನರ್ ವಿದಾಯ:
ಡೇವಿಡ್ ವಾರ್ನರ್ ಈಗಾಗಲೇ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸಿಡ್ನಿಯಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ಮೂಲಕ ವಾರ್ನರ್ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹಾಗೆಯೇ ಏಕದಿನ ವಿಶ್ವಕಪ್ ಫೈನಲ್ ಬಳಿಕ ಒಡಿಐ ಕ್ರಿಕೆಟ್​ನಿಂದ ಕೂಡ ನಿವೃತ್ತಿ ಘೋಷಿಸಿದ್ದಾರೆ.

ಆಸ್ಟ್ರೇಲಿಯಾ ಪರ 203 ಟೆಸ್ಟ್ ಇನಿಂಗ್ಸ್​ ಆಡಿರುವ ಡೇವಿಡ್ ವಾರ್ನರ್ ಆರಂಭಿಕನ ಸ್ಥಾನದಲ್ಲಿ ಒಟ್ಟು 8786 ರನ್ ಕಲೆಹಾಕಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಆರಂಭಿಕ ಬ್ಯಾಟರ್ ಎಂಬ ದಾಖಲೆಯೊಂದಿಗೆ ವಾರ್ನರ್ ವಿದಾಯ ಹೇಳಿದ್ದರು.

ಏಕದಿನ ವೃತ್ತಿ ಜೀವನ:
ಆಸ್ಟ್ರೇಲಿಯಾ ಪರ 161 ಏಕದಿನ ಇನ್ನಿಂಗ್ಸ್‌ಗಳನ್ನು ಆಡಿರುವ ವಾರ್ನರ್ 45.01 ರ ಸರಾಸರಿಯಲ್ಲಿ ಒಟ್ಟು 6,932 ರನ್ ಗಳಿಸಿದ್ದಾರೆ. ಈ ವೇಳೆ 22 ಶತಕಗಳು ಮತ್ತು 33 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ವಾರ್ನರ್ ಟಿ20 ಕ್ರಿಕೆಟ್​ನಲ್ಲಿ ಮಾತ್ರ ಮುಂದುವರೆಯುತ್ತಿದ್ದಾರೆ. ಒಂದು ವೇಳೆ ಮುಂಬರುವ ಟಿ20 ವಿಶ್ವಕಪ್​ಗಾಗಿ ಆಸ್ಟ್ರೇಲಿಯಾ​ ತಂಡದಲ್ಲಿ ಸ್ಥಾನ ಪಡೆಯದಿದ್ದರೆ ಚುಟುಕು ಕ್ರಿಕೆಟ್​ಗೂ ವಿದಾಯ ಹೇಳಬಹುದು.

andolanait

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

5 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

5 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

6 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

7 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

8 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

9 hours ago