ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾನ ವಿಗ್ರಹದ ‘ಪ್ರಾಣ ಪ್ರತಿಷ್ಠಾಪನೆಯಾಗಿರುವ ಶುಭ ಸಮಾರಂಭಕ್ಕೆ ಆಸೀಸ್ ಕ್ರಿಕೆಟಿಗ ಡೇವಿಡ್ ವಾರ್ನರ್ ಶುಭಾಶಯಗಳನ್ನು ಕೋರಿದ್ದಾರೆ. ವಾರ್ನರ್ ತಮ್ಮ ಇಸ್ಟಾಗ್ರಾಮ್ ಖಾತೆಯಲ್ಲಿ ‘ಜೈ ಶ್ರೀ ರಾಮ್’ ಘೋಷಣೆಯೊಂದಿಗೆ ತಮ್ಮ ಅಭಿನಂದನಾ ಸಂದೇಶವನ್ನು ಭಾರತೀಯರಿಗೆ ತಿಳಿಸಿದ್ದಾರೆ.
ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶ್ರೀರಾಮಚಂದ್ರನ ಆಗಮನದ ಫೋಟೋವೊಂದನ್ನು ಹಂಚಿಕೊಂಡಿರುವ ವಾರ್ನರ್, ಜೈ ಶ್ರೀರಾಮ್ ಇಂಡಿಯಾ ಎಂದು ಬರೆದುಕೊಂಡಿದ್ದಾರೆ. ಇದೀಗ ಡೇವಿಡ್ ವಾರ್ನರ್ ಅವರ ಈ ಪೋಸ್ಟ್ಗೆ ಮೆಚ್ಚುಗೆಗಳ ಮಹಾಪೂರವೇ ಹರಿದು ಬರುತ್ತಿದ್ದು, ಎಲ್ಲೆಡೆ ಪ್ರಶಂಸೆಗೆ ಪಾತ್ರವಾಗಿದೆ.
ಟೆಸ್ಟ್ಗೆ ವಾರ್ನರ್ ವಿದಾಯ:
ಡೇವಿಡ್ ವಾರ್ನರ್ ಈಗಾಗಲೇ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಸಿಡ್ನಿಯಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ಮೂಲಕ ವಾರ್ನರ್ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದರು. ಹಾಗೆಯೇ ಏಕದಿನ ವಿಶ್ವಕಪ್ ಫೈನಲ್ ಬಳಿಕ ಒಡಿಐ ಕ್ರಿಕೆಟ್ನಿಂದ ಕೂಡ ನಿವೃತ್ತಿ ಘೋಷಿಸಿದ್ದಾರೆ.
ಆಸ್ಟ್ರೇಲಿಯಾ ಪರ 203 ಟೆಸ್ಟ್ ಇನಿಂಗ್ಸ್ ಆಡಿರುವ ಡೇವಿಡ್ ವಾರ್ನರ್ ಆರಂಭಿಕನ ಸ್ಥಾನದಲ್ಲಿ ಒಟ್ಟು 8786 ರನ್ ಕಲೆಹಾಕಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ಪರ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಬಾರಿಸಿದ ಆರಂಭಿಕ ಬ್ಯಾಟರ್ ಎಂಬ ದಾಖಲೆಯೊಂದಿಗೆ ವಾರ್ನರ್ ವಿದಾಯ ಹೇಳಿದ್ದರು.
ಏಕದಿನ ವೃತ್ತಿ ಜೀವನ:
ಆಸ್ಟ್ರೇಲಿಯಾ ಪರ 161 ಏಕದಿನ ಇನ್ನಿಂಗ್ಸ್ಗಳನ್ನು ಆಡಿರುವ ವಾರ್ನರ್ 45.01 ರ ಸರಾಸರಿಯಲ್ಲಿ ಒಟ್ಟು 6,932 ರನ್ ಗಳಿಸಿದ್ದಾರೆ. ಈ ವೇಳೆ 22 ಶತಕಗಳು ಮತ್ತು 33 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ವಾರ್ನರ್ ಟಿ20 ಕ್ರಿಕೆಟ್ನಲ್ಲಿ ಮಾತ್ರ ಮುಂದುವರೆಯುತ್ತಿದ್ದಾರೆ. ಒಂದು ವೇಳೆ ಮುಂಬರುವ ಟಿ20 ವಿಶ್ವಕಪ್ಗಾಗಿ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆಯದಿದ್ದರೆ ಚುಟುಕು ಕ್ರಿಕೆಟ್ಗೂ ವಿದಾಯ ಹೇಳಬಹುದು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…