ಕ್ರೀಡೆ

ಭಾರತೀಯರಿಗೆ ಭಾರೀ ನಿರಾಸೆ; 2026ರ ಕಾಮನ್‌ವೆಲ್ತ್‌ ಕ್ರೀಡಾಕೂಟದಿಂದ ಕ್ರಿಕೆಟ್‌, ಹಾಕಿ ಔಟ್!‌

ಲಂಡನ್:‌ 2026ಕ್ಕೆ ಸ್ಕಾಟ್ಲೆಂಡ್‌ನ ಗ್ಲಾಸ್ಗೊದಲ್ಲಿ ನಡೆಯಲಿರುವ 23ನೇ ಕಾಮನ್‌ವೆಲ್ತ್‌ ಗೇಮ್ಸ್‌ ಕ್ರೀಡಾಕೂಟದಿಂದ ಕ್ರಿಕೆಟ್‌ ಸೇರಿದಂತೆ 10 ಕ್ರೀಡೆಗಳನ್ನು ಕೈಬಿಡಲಾಗಿದೆ ಎಂದು ವರದಿಯಾಗಿದೆ.

2026ರ ಕಾಮನ್‌ವೆಲ್ತ್‌ ಕ್ರೀಡಾಕೂಟವನ್ನು ಬಜೆಟ್‌ ಸ್ನೇಹಿಗೊಳಿಸುವ ಉದ್ದೇಶದಿಂದ ಕ್ರಿಕೆಟ್‌, ಹಾಕಿ, ಬ್ಯಾಡ್ಮಿಂಟನ್, ಕುಸ್ತಿ ಹಾಗೂ ಶೂಟಿಂಗ್‌ ಸೇರಿದಂತೆ 10 ಕ್ರೀಡೆಗಳನ್ನು ಕೈಬಿಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಈ ನಿರ್ಧಾರ ಭಾರತದ ಮೇಲೆ ಪ್ರಭಾವ ಬೀರಲಿದ್ದು, ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಪದಕ ಗೆಲ್ಲುವ ಸಾಧ್ಯತೆ ಇದೆ. ಏಕೆಂದರೆ ಈ ಬಾರಿ ಹೊರಗಿಡಲಾಗಿರುವ ಹತ್ತು ಕ್ರೀಡೆಗಳಲ್ಲಿ ಭಾರತ ಉತ್ತಮ ಪ್ರದರ್ಶನ ತೋರುವ ಸಾಮರ್ಥ್ಯ ಹೊಂದಿತ್ತು. ಹೀಗೆ ಭಾರತ ಬಲಿಷ್ಠವಾಗಿರುವ ಕ್ರೀಡೆಗಳನ್ನು ಕ್ರೀಡಾಕೂಟದಿಂದ ತೆಗೆದುಹಾಕಿರುವುದು ಹಿನ್ನಡೆಯನ್ನುಂಟುಮಾಡಿದಂತಾಗಿದೆ.

ಯಾವ ಹತ್ತು ಕ್ರೀಡೆಗಳು ಕಾಮನ್‌ವೆಲ್ತ್‌ನಲ್ಲಿ ಇರುವುದಿಲ್ಲ; ಹಾಕಿ, ಕ್ರಿಕೆಟ್‌, ಟೇಬಲ್‌ ಟೆನಿಸ್‌, ಕುಸ್ತಿ, ಬ್ಯಾಡ್ಮಿಂಟನ್‌, ರಗ್ಬಿ ಸೆವೆನ್ಸ್‌, ಬೀಚ್‌ ವಾಲಿಬಾಲ್‌, ಮೌಂಟೈನ್‌ ಬೈಕಿಂಗ್‌, ಸ್ಕ್ವಾಷ್‌ ಮತ್ತು ರಿಥೆಮಿಕ್‌ ಜಿಮ್ನಾಸ್ಟಿಕ್.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

1 hour ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

2 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

3 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

4 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

4 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

8 hours ago