ಕ್ರೀಡೆ

IND v AUS : ಭಾರತಕ್ಕೆ 4 ರನ್‌ ರೋಚಕ ಜಯ

ಮುಂಬೈ: ರೋಚಕ ಸೂಪರ್‌ ಓವರ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯವನ್ನು 4 ರನ್‌ಗಳಿಂದ ಗೆಲ್ಲುವ  ಮೂಲಕ  5 ಪಂದ್ಯಗಳ ಸರಣಿ 1-1 ರಲ್ಲಿ ಸಮವಾಗಿದೆ.

ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ1 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿತು. 188 ರನ್‌ಗಳ ಗುರಿಯನ್ನು ಪಡೆದ ಭಾರತ 20 ಓವರ್‌ಗಳಲ್ಲಿ 187 ರನ್‌ ಗಳಿಸಿತು. ಪರಿಣಾಮ ಪಂದ್ಯ ಸೂಪರ್‌ ಓವರ್‌ನತ್ತ ತಿರುಗಿತು.

ಸೂಪರ್‌ ಓವರ್‌ ಹೇಗಿತ್ತು?
ಮೊದಲು ಬ್ಯಾಟ್‌ ಮಾಡಿದ ಭಾರತ ಪರ ರಿಚಾ ಘೋಷ್ ಮೊದಲ ಎಸೆತವನ್ನು ಸಿಕ್ಸರ್‌ಗೆ ಅಟ್ಟಿದರೆ ಎರಡನೇ ಎಸೆತದಲ್ಲಿ ಕ್ಯಾಚ್‌ ನೀಡಿ ಔಟಾದರು. ಹೀದರ್ ಗ್ರಹಾಂ ಅವರ ಮೂರನೇ ಎಸೆತದಲ್ಲಿ ಕೌರ್‌ 1 ರನ್‌ ಓಡಿದರು. ನಂತರ ಮೂರು ಎಸೆತಗಳಲ್ಲಿ ಸ್ಮೃತಿ ಮಂಧಾನ 4, 6, 3 ರನ್‌ ಚಚ್ಚಿದ ಪರಿಣಾಮ ಭಾರತ 20 ರನ್‌ ಗಳಿಸಿತು.

ಭಾರತದ ಪರ ರೇಣುಕಾ ಸಿಂಗ್‌ ಬೌಲಿಂಗ್‌ ದಾಳಿಗೆ ಇಳಿದರು. ಮೊದಲ ಎಸೆತದಲ್ಲಿ ಬೌಂಡರಿ, ಎರಡನೇ ಎಸೆತದಲ್ಲಿ ಒಂಟಿ ರನ್‌ ಬಂತು. ಮೂರನೇ ಎಸೆತದಲ್ಲಿ ಗಾರ್ಡ್‌ನರ್‌ ಕ್ಯಾಚ್‌ ನೀಡಿ ಔಟಾದರು. ಮೂರನೇ ಎಸೆತದಲ್ಲಿ ಒಂದು ರನ್‌ ಬಂದರೆ ಕೊನೆಯ ಎರಡು ಎಸೆತವನ್ನು ಹೀಲಿ ಬೌಂಡರಿ ಮತ್ತು ಸಿಕ್ಸರ್‌ಗೆ ಅಟ್ಟಿದರು. ಅಂತಿಮವಾಗಿ ಆಸ್ಟ್ರೇಲಿಯಾ ಸೂಪರ್‌ ಓವರ್‌ನಲ್ಲಿ 16 ರನ್‌ ಮಾತ್ರ ಗಳಿಸಿತು.

ಪಂದ್ಯ ಟೈ ಆಗಿದ್ದು ಹೇಗೆ?
ಹೀದರ್ ಗ್ರಹಾಂ ಅವರ 19ನೇ ಓವರ್‌ನಲ್ಲಿ ಕೇವಲ 4 ರನ್‌ ಬಂದ ಕಾರಣ ಪಂದ್ಯ ರೋಚಕ ಘಟದತ್ತ ತಿರುಗಿತ್ತು. ಭಾರತಕ್ಕೆ ಕೊನೆಯ ಓವರ್‌ನಲ್ಲಿ 14 ರನ್‌ ಬೇಕಿತ್ತು, ಕ್ರೀಸ್‌ನಲ್ಲಿ ರಿಚಾ ಘೋಷ್‌ ಮತ್ತು ದೇವಿಕಾ ವೈದ್ಯಾ ಇದ್ದರು. ಮೊದಲ ಎಸೆತದಲ್ಲಿ ಘೋಷ್‌ 1 ರನ್‌ ಓಡಿದರೆ ಎರಡನೇ ಎಸೆತವನ್ನು ವೈದ್ಯ ಬೌಂಡರಿಗೆ ಅಟ್ಟಿದರು. ಮೂರನೇ ಎಸೆತದಲ್ಲಿ 1 ರನ್‌ ಬಂದರೆ 4 ಮತ್ತು ಐದನೇ ಎಸೆತದಲ್ಲಿ ಘೋಷ್‌ 2 ಮತ್ತು 1 ರನ್‌ ಓಡಿದರು. ಕೊನೆಯ ಎಸೆತವನ್ನು ದೇವಿಕಾ ಬೌಂಡರಿಗೆ ಅಟ್ಟಿದ್ದರಿಂದ ಪಂದ್ಯ ಟೈ ಆಯ್ತು.

andolanait

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

5 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

5 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

5 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

5 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

5 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago