ಕ್ರೀಡೆ

IND v AUS : ಭಾರತಕ್ಕೆ 4 ರನ್‌ ರೋಚಕ ಜಯ

ಮುಂಬೈ: ರೋಚಕ ಸೂಪರ್‌ ಓವರ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯವನ್ನು 4 ರನ್‌ಗಳಿಂದ ಗೆಲ್ಲುವ  ಮೂಲಕ  5 ಪಂದ್ಯಗಳ ಸರಣಿ 1-1 ರಲ್ಲಿ ಸಮವಾಗಿದೆ.

ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ1 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿತು. 188 ರನ್‌ಗಳ ಗುರಿಯನ್ನು ಪಡೆದ ಭಾರತ 20 ಓವರ್‌ಗಳಲ್ಲಿ 187 ರನ್‌ ಗಳಿಸಿತು. ಪರಿಣಾಮ ಪಂದ್ಯ ಸೂಪರ್‌ ಓವರ್‌ನತ್ತ ತಿರುಗಿತು.

ಸೂಪರ್‌ ಓವರ್‌ ಹೇಗಿತ್ತು?
ಮೊದಲು ಬ್ಯಾಟ್‌ ಮಾಡಿದ ಭಾರತ ಪರ ರಿಚಾ ಘೋಷ್ ಮೊದಲ ಎಸೆತವನ್ನು ಸಿಕ್ಸರ್‌ಗೆ ಅಟ್ಟಿದರೆ ಎರಡನೇ ಎಸೆತದಲ್ಲಿ ಕ್ಯಾಚ್‌ ನೀಡಿ ಔಟಾದರು. ಹೀದರ್ ಗ್ರಹಾಂ ಅವರ ಮೂರನೇ ಎಸೆತದಲ್ಲಿ ಕೌರ್‌ 1 ರನ್‌ ಓಡಿದರು. ನಂತರ ಮೂರು ಎಸೆತಗಳಲ್ಲಿ ಸ್ಮೃತಿ ಮಂಧಾನ 4, 6, 3 ರನ್‌ ಚಚ್ಚಿದ ಪರಿಣಾಮ ಭಾರತ 20 ರನ್‌ ಗಳಿಸಿತು.

ಭಾರತದ ಪರ ರೇಣುಕಾ ಸಿಂಗ್‌ ಬೌಲಿಂಗ್‌ ದಾಳಿಗೆ ಇಳಿದರು. ಮೊದಲ ಎಸೆತದಲ್ಲಿ ಬೌಂಡರಿ, ಎರಡನೇ ಎಸೆತದಲ್ಲಿ ಒಂಟಿ ರನ್‌ ಬಂತು. ಮೂರನೇ ಎಸೆತದಲ್ಲಿ ಗಾರ್ಡ್‌ನರ್‌ ಕ್ಯಾಚ್‌ ನೀಡಿ ಔಟಾದರು. ಮೂರನೇ ಎಸೆತದಲ್ಲಿ ಒಂದು ರನ್‌ ಬಂದರೆ ಕೊನೆಯ ಎರಡು ಎಸೆತವನ್ನು ಹೀಲಿ ಬೌಂಡರಿ ಮತ್ತು ಸಿಕ್ಸರ್‌ಗೆ ಅಟ್ಟಿದರು. ಅಂತಿಮವಾಗಿ ಆಸ್ಟ್ರೇಲಿಯಾ ಸೂಪರ್‌ ಓವರ್‌ನಲ್ಲಿ 16 ರನ್‌ ಮಾತ್ರ ಗಳಿಸಿತು.

ಪಂದ್ಯ ಟೈ ಆಗಿದ್ದು ಹೇಗೆ?
ಹೀದರ್ ಗ್ರಹಾಂ ಅವರ 19ನೇ ಓವರ್‌ನಲ್ಲಿ ಕೇವಲ 4 ರನ್‌ ಬಂದ ಕಾರಣ ಪಂದ್ಯ ರೋಚಕ ಘಟದತ್ತ ತಿರುಗಿತ್ತು. ಭಾರತಕ್ಕೆ ಕೊನೆಯ ಓವರ್‌ನಲ್ಲಿ 14 ರನ್‌ ಬೇಕಿತ್ತು, ಕ್ರೀಸ್‌ನಲ್ಲಿ ರಿಚಾ ಘೋಷ್‌ ಮತ್ತು ದೇವಿಕಾ ವೈದ್ಯಾ ಇದ್ದರು. ಮೊದಲ ಎಸೆತದಲ್ಲಿ ಘೋಷ್‌ 1 ರನ್‌ ಓಡಿದರೆ ಎರಡನೇ ಎಸೆತವನ್ನು ವೈದ್ಯ ಬೌಂಡರಿಗೆ ಅಟ್ಟಿದರು. ಮೂರನೇ ಎಸೆತದಲ್ಲಿ 1 ರನ್‌ ಬಂದರೆ 4 ಮತ್ತು ಐದನೇ ಎಸೆತದಲ್ಲಿ ಘೋಷ್‌ 2 ಮತ್ತು 1 ರನ್‌ ಓಡಿದರು. ಕೊನೆಯ ಎಸೆತವನ್ನು ದೇವಿಕಾ ಬೌಂಡರಿಗೆ ಅಟ್ಟಿದ್ದರಿಂದ ಪಂದ್ಯ ಟೈ ಆಯ್ತು.

andolanait

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

11 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

12 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

12 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

12 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

12 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

12 hours ago