ಕ್ರೀಡೆ

IND v AUS : ಭಾರತಕ್ಕೆ 4 ರನ್‌ ರೋಚಕ ಜಯ

ಮುಂಬೈ: ರೋಚಕ ಸೂಪರ್‌ ಓವರ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯವನ್ನು 4 ರನ್‌ಗಳಿಂದ ಗೆಲ್ಲುವ  ಮೂಲಕ  5 ಪಂದ್ಯಗಳ ಸರಣಿ 1-1 ರಲ್ಲಿ ಸಮವಾಗಿದೆ.

ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ1 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿತು. 188 ರನ್‌ಗಳ ಗುರಿಯನ್ನು ಪಡೆದ ಭಾರತ 20 ಓವರ್‌ಗಳಲ್ಲಿ 187 ರನ್‌ ಗಳಿಸಿತು. ಪರಿಣಾಮ ಪಂದ್ಯ ಸೂಪರ್‌ ಓವರ್‌ನತ್ತ ತಿರುಗಿತು.

ಸೂಪರ್‌ ಓವರ್‌ ಹೇಗಿತ್ತು?
ಮೊದಲು ಬ್ಯಾಟ್‌ ಮಾಡಿದ ಭಾರತ ಪರ ರಿಚಾ ಘೋಷ್ ಮೊದಲ ಎಸೆತವನ್ನು ಸಿಕ್ಸರ್‌ಗೆ ಅಟ್ಟಿದರೆ ಎರಡನೇ ಎಸೆತದಲ್ಲಿ ಕ್ಯಾಚ್‌ ನೀಡಿ ಔಟಾದರು. ಹೀದರ್ ಗ್ರಹಾಂ ಅವರ ಮೂರನೇ ಎಸೆತದಲ್ಲಿ ಕೌರ್‌ 1 ರನ್‌ ಓಡಿದರು. ನಂತರ ಮೂರು ಎಸೆತಗಳಲ್ಲಿ ಸ್ಮೃತಿ ಮಂಧಾನ 4, 6, 3 ರನ್‌ ಚಚ್ಚಿದ ಪರಿಣಾಮ ಭಾರತ 20 ರನ್‌ ಗಳಿಸಿತು.

ಭಾರತದ ಪರ ರೇಣುಕಾ ಸಿಂಗ್‌ ಬೌಲಿಂಗ್‌ ದಾಳಿಗೆ ಇಳಿದರು. ಮೊದಲ ಎಸೆತದಲ್ಲಿ ಬೌಂಡರಿ, ಎರಡನೇ ಎಸೆತದಲ್ಲಿ ಒಂಟಿ ರನ್‌ ಬಂತು. ಮೂರನೇ ಎಸೆತದಲ್ಲಿ ಗಾರ್ಡ್‌ನರ್‌ ಕ್ಯಾಚ್‌ ನೀಡಿ ಔಟಾದರು. ಮೂರನೇ ಎಸೆತದಲ್ಲಿ ಒಂದು ರನ್‌ ಬಂದರೆ ಕೊನೆಯ ಎರಡು ಎಸೆತವನ್ನು ಹೀಲಿ ಬೌಂಡರಿ ಮತ್ತು ಸಿಕ್ಸರ್‌ಗೆ ಅಟ್ಟಿದರು. ಅಂತಿಮವಾಗಿ ಆಸ್ಟ್ರೇಲಿಯಾ ಸೂಪರ್‌ ಓವರ್‌ನಲ್ಲಿ 16 ರನ್‌ ಮಾತ್ರ ಗಳಿಸಿತು.

ಪಂದ್ಯ ಟೈ ಆಗಿದ್ದು ಹೇಗೆ?
ಹೀದರ್ ಗ್ರಹಾಂ ಅವರ 19ನೇ ಓವರ್‌ನಲ್ಲಿ ಕೇವಲ 4 ರನ್‌ ಬಂದ ಕಾರಣ ಪಂದ್ಯ ರೋಚಕ ಘಟದತ್ತ ತಿರುಗಿತ್ತು. ಭಾರತಕ್ಕೆ ಕೊನೆಯ ಓವರ್‌ನಲ್ಲಿ 14 ರನ್‌ ಬೇಕಿತ್ತು, ಕ್ರೀಸ್‌ನಲ್ಲಿ ರಿಚಾ ಘೋಷ್‌ ಮತ್ತು ದೇವಿಕಾ ವೈದ್ಯಾ ಇದ್ದರು. ಮೊದಲ ಎಸೆತದಲ್ಲಿ ಘೋಷ್‌ 1 ರನ್‌ ಓಡಿದರೆ ಎರಡನೇ ಎಸೆತವನ್ನು ವೈದ್ಯ ಬೌಂಡರಿಗೆ ಅಟ್ಟಿದರು. ಮೂರನೇ ಎಸೆತದಲ್ಲಿ 1 ರನ್‌ ಬಂದರೆ 4 ಮತ್ತು ಐದನೇ ಎಸೆತದಲ್ಲಿ ಘೋಷ್‌ 2 ಮತ್ತು 1 ರನ್‌ ಓಡಿದರು. ಕೊನೆಯ ಎಸೆತವನ್ನು ದೇವಿಕಾ ಬೌಂಡರಿಗೆ ಅಟ್ಟಿದ್ದರಿಂದ ಪಂದ್ಯ ಟೈ ಆಯ್ತು.

andolanait

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

2 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

2 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

2 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

2 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

4 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

5 hours ago