ಕ್ರೀಡೆ

IND v AUS : ಭಾರತಕ್ಕೆ 4 ರನ್‌ ರೋಚಕ ಜಯ

ಮುಂಬೈ: ರೋಚಕ ಸೂಪರ್‌ ಓವರ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯವನ್ನು 4 ರನ್‌ಗಳಿಂದ ಗೆಲ್ಲುವ  ಮೂಲಕ  5 ಪಂದ್ಯಗಳ ಸರಣಿ 1-1 ರಲ್ಲಿ ಸಮವಾಗಿದೆ.

ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ1 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿತು. 188 ರನ್‌ಗಳ ಗುರಿಯನ್ನು ಪಡೆದ ಭಾರತ 20 ಓವರ್‌ಗಳಲ್ಲಿ 187 ರನ್‌ ಗಳಿಸಿತು. ಪರಿಣಾಮ ಪಂದ್ಯ ಸೂಪರ್‌ ಓವರ್‌ನತ್ತ ತಿರುಗಿತು.

ಸೂಪರ್‌ ಓವರ್‌ ಹೇಗಿತ್ತು?
ಮೊದಲು ಬ್ಯಾಟ್‌ ಮಾಡಿದ ಭಾರತ ಪರ ರಿಚಾ ಘೋಷ್ ಮೊದಲ ಎಸೆತವನ್ನು ಸಿಕ್ಸರ್‌ಗೆ ಅಟ್ಟಿದರೆ ಎರಡನೇ ಎಸೆತದಲ್ಲಿ ಕ್ಯಾಚ್‌ ನೀಡಿ ಔಟಾದರು. ಹೀದರ್ ಗ್ರಹಾಂ ಅವರ ಮೂರನೇ ಎಸೆತದಲ್ಲಿ ಕೌರ್‌ 1 ರನ್‌ ಓಡಿದರು. ನಂತರ ಮೂರು ಎಸೆತಗಳಲ್ಲಿ ಸ್ಮೃತಿ ಮಂಧಾನ 4, 6, 3 ರನ್‌ ಚಚ್ಚಿದ ಪರಿಣಾಮ ಭಾರತ 20 ರನ್‌ ಗಳಿಸಿತು.

ಭಾರತದ ಪರ ರೇಣುಕಾ ಸಿಂಗ್‌ ಬೌಲಿಂಗ್‌ ದಾಳಿಗೆ ಇಳಿದರು. ಮೊದಲ ಎಸೆತದಲ್ಲಿ ಬೌಂಡರಿ, ಎರಡನೇ ಎಸೆತದಲ್ಲಿ ಒಂಟಿ ರನ್‌ ಬಂತು. ಮೂರನೇ ಎಸೆತದಲ್ಲಿ ಗಾರ್ಡ್‌ನರ್‌ ಕ್ಯಾಚ್‌ ನೀಡಿ ಔಟಾದರು. ಮೂರನೇ ಎಸೆತದಲ್ಲಿ ಒಂದು ರನ್‌ ಬಂದರೆ ಕೊನೆಯ ಎರಡು ಎಸೆತವನ್ನು ಹೀಲಿ ಬೌಂಡರಿ ಮತ್ತು ಸಿಕ್ಸರ್‌ಗೆ ಅಟ್ಟಿದರು. ಅಂತಿಮವಾಗಿ ಆಸ್ಟ್ರೇಲಿಯಾ ಸೂಪರ್‌ ಓವರ್‌ನಲ್ಲಿ 16 ರನ್‌ ಮಾತ್ರ ಗಳಿಸಿತು.

ಪಂದ್ಯ ಟೈ ಆಗಿದ್ದು ಹೇಗೆ?
ಹೀದರ್ ಗ್ರಹಾಂ ಅವರ 19ನೇ ಓವರ್‌ನಲ್ಲಿ ಕೇವಲ 4 ರನ್‌ ಬಂದ ಕಾರಣ ಪಂದ್ಯ ರೋಚಕ ಘಟದತ್ತ ತಿರುಗಿತ್ತು. ಭಾರತಕ್ಕೆ ಕೊನೆಯ ಓವರ್‌ನಲ್ಲಿ 14 ರನ್‌ ಬೇಕಿತ್ತು, ಕ್ರೀಸ್‌ನಲ್ಲಿ ರಿಚಾ ಘೋಷ್‌ ಮತ್ತು ದೇವಿಕಾ ವೈದ್ಯಾ ಇದ್ದರು. ಮೊದಲ ಎಸೆತದಲ್ಲಿ ಘೋಷ್‌ 1 ರನ್‌ ಓಡಿದರೆ ಎರಡನೇ ಎಸೆತವನ್ನು ವೈದ್ಯ ಬೌಂಡರಿಗೆ ಅಟ್ಟಿದರು. ಮೂರನೇ ಎಸೆತದಲ್ಲಿ 1 ರನ್‌ ಬಂದರೆ 4 ಮತ್ತು ಐದನೇ ಎಸೆತದಲ್ಲಿ ಘೋಷ್‌ 2 ಮತ್ತು 1 ರನ್‌ ಓಡಿದರು. ಕೊನೆಯ ಎಸೆತವನ್ನು ದೇವಿಕಾ ಬೌಂಡರಿಗೆ ಅಟ್ಟಿದ್ದರಿಂದ ಪಂದ್ಯ ಟೈ ಆಯ್ತು.

andolanait

Recent Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

35 seconds ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

18 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

31 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago