ಕ್ರೀಡೆ

IND v AUS : ಭಾರತಕ್ಕೆ 4 ರನ್‌ ರೋಚಕ ಜಯ

ಮುಂಬೈ: ರೋಚಕ ಸೂಪರ್‌ ಓವರ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯವನ್ನು 4 ರನ್‌ಗಳಿಂದ ಗೆಲ್ಲುವ  ಮೂಲಕ  5 ಪಂದ್ಯಗಳ ಸರಣಿ 1-1 ರಲ್ಲಿ ಸಮವಾಗಿದೆ.

ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ1 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿತು. 188 ರನ್‌ಗಳ ಗುರಿಯನ್ನು ಪಡೆದ ಭಾರತ 20 ಓವರ್‌ಗಳಲ್ಲಿ 187 ರನ್‌ ಗಳಿಸಿತು. ಪರಿಣಾಮ ಪಂದ್ಯ ಸೂಪರ್‌ ಓವರ್‌ನತ್ತ ತಿರುಗಿತು.

ಸೂಪರ್‌ ಓವರ್‌ ಹೇಗಿತ್ತು?
ಮೊದಲು ಬ್ಯಾಟ್‌ ಮಾಡಿದ ಭಾರತ ಪರ ರಿಚಾ ಘೋಷ್ ಮೊದಲ ಎಸೆತವನ್ನು ಸಿಕ್ಸರ್‌ಗೆ ಅಟ್ಟಿದರೆ ಎರಡನೇ ಎಸೆತದಲ್ಲಿ ಕ್ಯಾಚ್‌ ನೀಡಿ ಔಟಾದರು. ಹೀದರ್ ಗ್ರಹಾಂ ಅವರ ಮೂರನೇ ಎಸೆತದಲ್ಲಿ ಕೌರ್‌ 1 ರನ್‌ ಓಡಿದರು. ನಂತರ ಮೂರು ಎಸೆತಗಳಲ್ಲಿ ಸ್ಮೃತಿ ಮಂಧಾನ 4, 6, 3 ರನ್‌ ಚಚ್ಚಿದ ಪರಿಣಾಮ ಭಾರತ 20 ರನ್‌ ಗಳಿಸಿತು.

ಭಾರತದ ಪರ ರೇಣುಕಾ ಸಿಂಗ್‌ ಬೌಲಿಂಗ್‌ ದಾಳಿಗೆ ಇಳಿದರು. ಮೊದಲ ಎಸೆತದಲ್ಲಿ ಬೌಂಡರಿ, ಎರಡನೇ ಎಸೆತದಲ್ಲಿ ಒಂಟಿ ರನ್‌ ಬಂತು. ಮೂರನೇ ಎಸೆತದಲ್ಲಿ ಗಾರ್ಡ್‌ನರ್‌ ಕ್ಯಾಚ್‌ ನೀಡಿ ಔಟಾದರು. ಮೂರನೇ ಎಸೆತದಲ್ಲಿ ಒಂದು ರನ್‌ ಬಂದರೆ ಕೊನೆಯ ಎರಡು ಎಸೆತವನ್ನು ಹೀಲಿ ಬೌಂಡರಿ ಮತ್ತು ಸಿಕ್ಸರ್‌ಗೆ ಅಟ್ಟಿದರು. ಅಂತಿಮವಾಗಿ ಆಸ್ಟ್ರೇಲಿಯಾ ಸೂಪರ್‌ ಓವರ್‌ನಲ್ಲಿ 16 ರನ್‌ ಮಾತ್ರ ಗಳಿಸಿತು.

ಪಂದ್ಯ ಟೈ ಆಗಿದ್ದು ಹೇಗೆ?
ಹೀದರ್ ಗ್ರಹಾಂ ಅವರ 19ನೇ ಓವರ್‌ನಲ್ಲಿ ಕೇವಲ 4 ರನ್‌ ಬಂದ ಕಾರಣ ಪಂದ್ಯ ರೋಚಕ ಘಟದತ್ತ ತಿರುಗಿತ್ತು. ಭಾರತಕ್ಕೆ ಕೊನೆಯ ಓವರ್‌ನಲ್ಲಿ 14 ರನ್‌ ಬೇಕಿತ್ತು, ಕ್ರೀಸ್‌ನಲ್ಲಿ ರಿಚಾ ಘೋಷ್‌ ಮತ್ತು ದೇವಿಕಾ ವೈದ್ಯಾ ಇದ್ದರು. ಮೊದಲ ಎಸೆತದಲ್ಲಿ ಘೋಷ್‌ 1 ರನ್‌ ಓಡಿದರೆ ಎರಡನೇ ಎಸೆತವನ್ನು ವೈದ್ಯ ಬೌಂಡರಿಗೆ ಅಟ್ಟಿದರು. ಮೂರನೇ ಎಸೆತದಲ್ಲಿ 1 ರನ್‌ ಬಂದರೆ 4 ಮತ್ತು ಐದನೇ ಎಸೆತದಲ್ಲಿ ಘೋಷ್‌ 2 ಮತ್ತು 1 ರನ್‌ ಓಡಿದರು. ಕೊನೆಯ ಎಸೆತವನ್ನು ದೇವಿಕಾ ಬೌಂಡರಿಗೆ ಅಟ್ಟಿದ್ದರಿಂದ ಪಂದ್ಯ ಟೈ ಆಯ್ತು.

andolanait

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

2 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

3 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

4 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

4 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

4 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

5 hours ago