ಕ್ರೀಡೆ

IND v AUS : ಭಾರತಕ್ಕೆ 4 ರನ್‌ ರೋಚಕ ಜಯ

ಮುಂಬೈ: ರೋಚಕ ಸೂಪರ್‌ ಓವರ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯವನ್ನು 4 ರನ್‌ಗಳಿಂದ ಗೆಲ್ಲುವ  ಮೂಲಕ  5 ಪಂದ್ಯಗಳ ಸರಣಿ 1-1 ರಲ್ಲಿ ಸಮವಾಗಿದೆ.

ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ1 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿತು. 188 ರನ್‌ಗಳ ಗುರಿಯನ್ನು ಪಡೆದ ಭಾರತ 20 ಓವರ್‌ಗಳಲ್ಲಿ 187 ರನ್‌ ಗಳಿಸಿತು. ಪರಿಣಾಮ ಪಂದ್ಯ ಸೂಪರ್‌ ಓವರ್‌ನತ್ತ ತಿರುಗಿತು.

ಸೂಪರ್‌ ಓವರ್‌ ಹೇಗಿತ್ತು?
ಮೊದಲು ಬ್ಯಾಟ್‌ ಮಾಡಿದ ಭಾರತ ಪರ ರಿಚಾ ಘೋಷ್ ಮೊದಲ ಎಸೆತವನ್ನು ಸಿಕ್ಸರ್‌ಗೆ ಅಟ್ಟಿದರೆ ಎರಡನೇ ಎಸೆತದಲ್ಲಿ ಕ್ಯಾಚ್‌ ನೀಡಿ ಔಟಾದರು. ಹೀದರ್ ಗ್ರಹಾಂ ಅವರ ಮೂರನೇ ಎಸೆತದಲ್ಲಿ ಕೌರ್‌ 1 ರನ್‌ ಓಡಿದರು. ನಂತರ ಮೂರು ಎಸೆತಗಳಲ್ಲಿ ಸ್ಮೃತಿ ಮಂಧಾನ 4, 6, 3 ರನ್‌ ಚಚ್ಚಿದ ಪರಿಣಾಮ ಭಾರತ 20 ರನ್‌ ಗಳಿಸಿತು.

ಭಾರತದ ಪರ ರೇಣುಕಾ ಸಿಂಗ್‌ ಬೌಲಿಂಗ್‌ ದಾಳಿಗೆ ಇಳಿದರು. ಮೊದಲ ಎಸೆತದಲ್ಲಿ ಬೌಂಡರಿ, ಎರಡನೇ ಎಸೆತದಲ್ಲಿ ಒಂಟಿ ರನ್‌ ಬಂತು. ಮೂರನೇ ಎಸೆತದಲ್ಲಿ ಗಾರ್ಡ್‌ನರ್‌ ಕ್ಯಾಚ್‌ ನೀಡಿ ಔಟಾದರು. ಮೂರನೇ ಎಸೆತದಲ್ಲಿ ಒಂದು ರನ್‌ ಬಂದರೆ ಕೊನೆಯ ಎರಡು ಎಸೆತವನ್ನು ಹೀಲಿ ಬೌಂಡರಿ ಮತ್ತು ಸಿಕ್ಸರ್‌ಗೆ ಅಟ್ಟಿದರು. ಅಂತಿಮವಾಗಿ ಆಸ್ಟ್ರೇಲಿಯಾ ಸೂಪರ್‌ ಓವರ್‌ನಲ್ಲಿ 16 ರನ್‌ ಮಾತ್ರ ಗಳಿಸಿತು.

ಪಂದ್ಯ ಟೈ ಆಗಿದ್ದು ಹೇಗೆ?
ಹೀದರ್ ಗ್ರಹಾಂ ಅವರ 19ನೇ ಓವರ್‌ನಲ್ಲಿ ಕೇವಲ 4 ರನ್‌ ಬಂದ ಕಾರಣ ಪಂದ್ಯ ರೋಚಕ ಘಟದತ್ತ ತಿರುಗಿತ್ತು. ಭಾರತಕ್ಕೆ ಕೊನೆಯ ಓವರ್‌ನಲ್ಲಿ 14 ರನ್‌ ಬೇಕಿತ್ತು, ಕ್ರೀಸ್‌ನಲ್ಲಿ ರಿಚಾ ಘೋಷ್‌ ಮತ್ತು ದೇವಿಕಾ ವೈದ್ಯಾ ಇದ್ದರು. ಮೊದಲ ಎಸೆತದಲ್ಲಿ ಘೋಷ್‌ 1 ರನ್‌ ಓಡಿದರೆ ಎರಡನೇ ಎಸೆತವನ್ನು ವೈದ್ಯ ಬೌಂಡರಿಗೆ ಅಟ್ಟಿದರು. ಮೂರನೇ ಎಸೆತದಲ್ಲಿ 1 ರನ್‌ ಬಂದರೆ 4 ಮತ್ತು ಐದನೇ ಎಸೆತದಲ್ಲಿ ಘೋಷ್‌ 2 ಮತ್ತು 1 ರನ್‌ ಓಡಿದರು. ಕೊನೆಯ ಎಸೆತವನ್ನು ದೇವಿಕಾ ಬೌಂಡರಿಗೆ ಅಟ್ಟಿದ್ದರಿಂದ ಪಂದ್ಯ ಟೈ ಆಯ್ತು.

andolanait

Recent Posts

ನಾಳೆ ಸಾರಿಗೆ ಮುಷ್ಕರ : ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿಯ…

23 mins ago

ವಿಧಾನಸೌಧದಲ್ಲಿ ಮಾಧ್ಯಮಕ್ಕೆ ಇನ್ನಷ್ಟು ನಿರ್ಬಂಧ

ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು…

49 mins ago

ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…

2 hours ago

ಮೈಸೂರು | ಸ್ವಚ್ಛ ಸರ್ವೇಕ್ಷಣೆ ; ಜಾಥಾ ನಡೆಸಿ ಜನರಿಗೆ ಜಾಗೃತಿ

ಮೈಸೂರು : ಸ್ವಚ್ಛ ಸರ್ವೇಕ್ಷಣೆ-2026ರ ಅಂಗವಾಗಿ ನಗರಪಾಲಿಕೆ ವತಿಯಿಂದ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆ ಕುರಿತು ವಿದ್ಯಾರ್ಥಿಗಳಿಂದ ಜಾಥಾ ಹಾಗೂ…

2 hours ago

ಜ್ಞಾನದ ಜೊತೆ ಕೌಶಲವೂ ಮುಖ್ಯ : ಪರೀಕ್ಷಾಂಗ ಕುಲಸಚಿವ ನಾಗರಾಜು ಅಭಿಮತ

ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,…

2 hours ago

ಡಿ.ಕೆ.ಶಿವಕುಮಾರ್‌ ನಿಯತ್ತಿನ ಸೈನಿಕ: ಶಾಸಕ ರವಿಕುಮಾರ್‌ ಗಣಿಗ ಬ್ಯಾಟಿಂಗ್‌

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ…

4 hours ago