ಕ್ರೀಡೆ

IND v AUS : ಭಾರತಕ್ಕೆ 4 ರನ್‌ ರೋಚಕ ಜಯ

ಮುಂಬೈ: ರೋಚಕ ಸೂಪರ್‌ ಓವರ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯವನ್ನು 4 ರನ್‌ಗಳಿಂದ ಗೆಲ್ಲುವ  ಮೂಲಕ  5 ಪಂದ್ಯಗಳ ಸರಣಿ 1-1 ರಲ್ಲಿ ಸಮವಾಗಿದೆ.

ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ1 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿತು. 188 ರನ್‌ಗಳ ಗುರಿಯನ್ನು ಪಡೆದ ಭಾರತ 20 ಓವರ್‌ಗಳಲ್ಲಿ 187 ರನ್‌ ಗಳಿಸಿತು. ಪರಿಣಾಮ ಪಂದ್ಯ ಸೂಪರ್‌ ಓವರ್‌ನತ್ತ ತಿರುಗಿತು.

ಸೂಪರ್‌ ಓವರ್‌ ಹೇಗಿತ್ತು?
ಮೊದಲು ಬ್ಯಾಟ್‌ ಮಾಡಿದ ಭಾರತ ಪರ ರಿಚಾ ಘೋಷ್ ಮೊದಲ ಎಸೆತವನ್ನು ಸಿಕ್ಸರ್‌ಗೆ ಅಟ್ಟಿದರೆ ಎರಡನೇ ಎಸೆತದಲ್ಲಿ ಕ್ಯಾಚ್‌ ನೀಡಿ ಔಟಾದರು. ಹೀದರ್ ಗ್ರಹಾಂ ಅವರ ಮೂರನೇ ಎಸೆತದಲ್ಲಿ ಕೌರ್‌ 1 ರನ್‌ ಓಡಿದರು. ನಂತರ ಮೂರು ಎಸೆತಗಳಲ್ಲಿ ಸ್ಮೃತಿ ಮಂಧಾನ 4, 6, 3 ರನ್‌ ಚಚ್ಚಿದ ಪರಿಣಾಮ ಭಾರತ 20 ರನ್‌ ಗಳಿಸಿತು.

ಭಾರತದ ಪರ ರೇಣುಕಾ ಸಿಂಗ್‌ ಬೌಲಿಂಗ್‌ ದಾಳಿಗೆ ಇಳಿದರು. ಮೊದಲ ಎಸೆತದಲ್ಲಿ ಬೌಂಡರಿ, ಎರಡನೇ ಎಸೆತದಲ್ಲಿ ಒಂಟಿ ರನ್‌ ಬಂತು. ಮೂರನೇ ಎಸೆತದಲ್ಲಿ ಗಾರ್ಡ್‌ನರ್‌ ಕ್ಯಾಚ್‌ ನೀಡಿ ಔಟಾದರು. ಮೂರನೇ ಎಸೆತದಲ್ಲಿ ಒಂದು ರನ್‌ ಬಂದರೆ ಕೊನೆಯ ಎರಡು ಎಸೆತವನ್ನು ಹೀಲಿ ಬೌಂಡರಿ ಮತ್ತು ಸಿಕ್ಸರ್‌ಗೆ ಅಟ್ಟಿದರು. ಅಂತಿಮವಾಗಿ ಆಸ್ಟ್ರೇಲಿಯಾ ಸೂಪರ್‌ ಓವರ್‌ನಲ್ಲಿ 16 ರನ್‌ ಮಾತ್ರ ಗಳಿಸಿತು.

ಪಂದ್ಯ ಟೈ ಆಗಿದ್ದು ಹೇಗೆ?
ಹೀದರ್ ಗ್ರಹಾಂ ಅವರ 19ನೇ ಓವರ್‌ನಲ್ಲಿ ಕೇವಲ 4 ರನ್‌ ಬಂದ ಕಾರಣ ಪಂದ್ಯ ರೋಚಕ ಘಟದತ್ತ ತಿರುಗಿತ್ತು. ಭಾರತಕ್ಕೆ ಕೊನೆಯ ಓವರ್‌ನಲ್ಲಿ 14 ರನ್‌ ಬೇಕಿತ್ತು, ಕ್ರೀಸ್‌ನಲ್ಲಿ ರಿಚಾ ಘೋಷ್‌ ಮತ್ತು ದೇವಿಕಾ ವೈದ್ಯಾ ಇದ್ದರು. ಮೊದಲ ಎಸೆತದಲ್ಲಿ ಘೋಷ್‌ 1 ರನ್‌ ಓಡಿದರೆ ಎರಡನೇ ಎಸೆತವನ್ನು ವೈದ್ಯ ಬೌಂಡರಿಗೆ ಅಟ್ಟಿದರು. ಮೂರನೇ ಎಸೆತದಲ್ಲಿ 1 ರನ್‌ ಬಂದರೆ 4 ಮತ್ತು ಐದನೇ ಎಸೆತದಲ್ಲಿ ಘೋಷ್‌ 2 ಮತ್ತು 1 ರನ್‌ ಓಡಿದರು. ಕೊನೆಯ ಎಸೆತವನ್ನು ದೇವಿಕಾ ಬೌಂಡರಿಗೆ ಅಟ್ಟಿದ್ದರಿಂದ ಪಂದ್ಯ ಟೈ ಆಯ್ತು.

andolanait

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

7 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

10 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

10 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

10 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

11 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

12 hours ago