ಕ್ರೀಡೆ

IND v NZ ಮೊದಲ ಏಕದಿನ ಪಂದ್ಯ : ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ

ಹೈದರಾಬಾದ್: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಟೀಮ್ ಇಂಡಿಯಾ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಶ್ರೀಲಂಕಾ ಎದುರಿನ ಸರಣಿ ಜಯದ ಸಂಭ್ರಮದಲ್ಲಿರುವ ಭಾರತ ತಂಡ ಇಂದು ನ್ಯೂಜಿಲೆಂಡ್ ಸವಾಲು ಎದುರಿಸಲು ಸಿದ್ಧವಾಗಿದೆ.  ಆದರೆ, ಬೆನ್ನುನೋವಿನಿಂದಾಗಿ ಮಧ್ಯಮಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಇಲ್ಲದೇ ತಂಡವು ಕಣಕ್ಕಿಳಿಯಲಿದೆ. ಏಕದಿನ ಕ್ರಿಕೆಟ್ ಸರಣಿಯ ಮೂರು ಪಂದ್ಯಗಳಿಗೂ ಶ್ರೇಯಸ್ ಅಲಭ್ಯರಾಗಿದ್ದಾರೆ. ಅವರ ಬದಲಿಗೆ ರಜತ್ ಪಾಟೀದಾರ್ ಅವರು ರೋಹಿತ್‌ ಶರ್ಮಾ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

ಕಳೆದ ಸರಣಿಯಲ್ಲಿ ಮಧ್ಯಮಕ್ರಮಾಂಕದಲ್ಲಿ ಆಡಿದ್ದ ಕೆ.ಎಲ್. ರಾಹುಲ್ ಕೂಡ ವಿಶ್ರಾಂತಿ ಪಡೆದಿದ್ದು, ವಿಕೆಟ್‌ಕೀಪರ್ ಆಗಿ ಇಶಾನ್ ಕಿಶನ್ ಆಡಲಿದ್ದಾರೆ. ನಾಯಕ ರೋಹಿತ್ ಮತ್ತು ಸ್ಥಿರತೆ ಕಾಪಾಡಿಕೊಂಡಿರುವ ಶುಭಮನ್ ಗಿಲ್ ಜೋಡಿಯೇ ಇನಿಂಗ್ಸ್ ಆರಂಭಿಸುವುದು ಖಚಿತ. ಶ್ರೀಲಂಕಾ ಎದುರು ಒಂದು ಅರ್ಧಶತಕ ಹಾಗೂ ಶತಕ ಗಳಿಸಿರುವ ಗಿಲ್ ಆಯ್ಕೆಗಾರರ ವಿಶ್ವಾಸ ಉಳಿಸಿಕೊಂಡಿದ್ದಾರೆ.  ‘ರನ್‌ ಯಂತ್ರ’ ವಿರಾಟ್ ಕೊಹ್ಲಿ ಮತ್ತೆ ತಮ್ಮ ಲಯಕ್ಕೆ ಮರಳಿದ್ದು ಶತಕ ಗಳಿಸಿದ್ದಾರೆ. ಅವರಲ್ಲದೇ ಸೂರ್ಯ ಕುಮಾರ್ ಯಾದವ್, ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಇರುವುದರಿಂದ ಬ್ಯಾಟಿಂಗ್ ವಿಭಾಗ ಬಲಿಷ್ಠವಾಗಿದೆ.  ಬೌಲಿಂಗ್‌ ವಿಭಾಗದಲ್ಲಿ ಸಿರಾಜ್, ಶಮಿ, ಸ್ಪಿನ್ನರ್ ಕುಲದೀಪ್ ಮತ್ತು ಚಾಹಲ್ ಉತ್ತಮ ಲಯದಲ್ಲಿರುವುದು ತಂಡದಲ್ಲಿ ಹುಮ್ಮಸ್ಸು ಹೆಚ್ಚಿಸಿದೆ.  ಕಿವೀಸ್ ಬಳಗದಲ್ಲಿ ಅನುಭವಿಗಳಾದ ಕೇನ್ ವಿಲಿಯಮ್ಸನ್ ಮತ್ತು ಟಿಮ್ ಸೌಥಿ ಅವರು ಈ ಸರಣಿಯಲ್ಲಿ ಆಡುತ್ತಿಲ್ಲ. ಅದರಿಂದಾಗಿ ಟಾಮ್ ಲಥಾಮ್ ನಾಯಕತ್ವ ವಹಿಸುತ್ತಿದ್ದಾರೆ. ನ್ಯೂಜಿಲೆಂಡ್ ತಂಡವು ಪಾಕಿಸ್ತಾನದಲ್ಲಿ ನಡೆದ ಸರಣಿಯಲ್ಲಿ ಆಡಿದ ನಂತರ ಭಾರತಕ್ಕೆ ಬಂದಿಳಿದಿದೆ.

ಪಾಕಿಸ್ತಾನ ವಿರುದ್ಧದ ಸರಣಿಯಲ್ಲಿ ಗ್ಲೆನ್ ಫಿಲಿಪ್ಸ್ ಅಮೋಘವಾಗಿ ಆಡಿದ್ದರು. ಅವರನ್ನು ಕಟ್ಟಿಹಾಕುವುದು ಆತಿಥೇಯ ಬೌಲರ್‌ಗಳ ಮುಂದಿರುವ ಪ್ರಮುಖ ಸವಾಲು.

ತಂಡಗಳು ಇಂತಿವೆ 
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್‌ಕೀಪರ್), ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ನ್ಯೂಜಿಲೆಂಡ್: ಟಾಮ್ ಲಥಾಮ್ (ನಾಯಕ), ಫಿನ್ ಅಲೆನ್, ಡೆವೊನ್ ಕಾನ್ವೆ, ಹೆನ್ರಿ ನಿಕೊಲ್ಸ್, ಡೆರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಬ್ರೆಸ್‌ವೆಲ್, ಮಿಚೆಲ್ ಸ್ಯಾಂಟನರ್, ಹೆನ್ರಿ ಶಿಪ್ಲಿ, ಲಾಕಿ ಫರ್ಗ್ಯುಸನ್, ಬ್ಲೇರ್ ಟಿಕ್ನರ್

andolanait

Recent Posts

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

1 hour ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

2 hours ago

ಸಕಾಲಕ್ಕೆ ಸಿಗದ ಆಂಬುಲೆನ್ಸ್‌ ; ಡೋಲಿಯಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ಕರೆದೊಯ್ದ ಗ್ರಾಮಸ್ಥರು

ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ…

3 hours ago

ಮಾತು ಕೊಟ್ಟಂತೆ ನಡೆದಿದ್ದೇವೆ : ಸಿಎಂ

2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…

3 hours ago

4 ಕೆ.ಜಿಗೂ ಹೆಚ್ಚು ಹೆರಾಯಿನ್‌ ವಶ : ಪಾಕ್‌ ಕಳ್ಳ ಸಾಗಣಿಕೆ ಪ್ರಯತ್ನ ವಿಫಲ

ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…

3 hours ago

ಮದ್ದೂರು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ : ಸಚಿವ ಚಲುವರಾಯಸ್ವಾಮಿ ಭರವಸೆ

ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ‌.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…

3 hours ago