ದುಬೈ: ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ರೇಲಿಯಾ ಮುಖಾಮುಖಿಯಾಗಲಿದ್ದು, ಫೈನಲ್ನತ್ತ ಎರಡು ತಂಡಗಳು ಚಿತ್ತ ನೆಟ್ಟಿವೆ.
ಐಸಿಸಿ ಟೂರ್ನಿಗಳಲ್ಲಿ ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳ ನಡುವಿನ ಕಾಳಗದಲ್ಲಿ ಆಸೀಸ್ ತಂಡವೇ ಮೇಲುಗೈ ಸಾಧಿಸಿದೆ.
ಭಾರತ ತಂಡವು ತನ್ನ ಗುಂಪು ಹಂತದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಆತ್ಮವಿಶ್ವಾಸದಲ್ಲಿದೆ. ಇದಕ್ಕೆ ಪೂರಕವಾಗಿ ತಂಡದ ಬ್ಯಾಟರ್ಗಳಾದ ಶುಭಮನ್ ಗಿಲ್ ಬಾಂಗ್ಲಾ ವಿರುದ್ಧ ಶತಕ ಬಾರಿಸಿದರೆ, ವಿರಾಟ್ ಪಾಕಿಸ್ತಾನದ ವಿರುದ್ದ ಶತಕ ಬಾರಿಸಿ ಜಯಕ್ಕೆ ಕಾರಣರಾಗಿದ್ದರು.
ಬೌಲಿಂಗ್ ವಿಭಾಗದಲ್ಲಿ ಬಾಂಗ್ಲಾ ವಿರುದ್ಧ ಮೊಹಮ್ಮದ್ ಶಮಿ, ನ್ಯೂಜಿಲೆಂಡ್ ವಿರುದ್ಧ ವರುಣ್ ಚಕ್ರವರ್ತಿ ಹೊರತುಪಡಿಸಿ ಉಳಿದ ಬೌಲರ್ಗಳಿಂದ ಹೇಳಿಕೊಳ್ಳುವಂತ ಪ್ರದರ್ಶನ ಇಲ್ಲಿವರೆಗೂ ಬಂದಿಲ್ಲ.
ಇತ್ತ ಆಸ್ಟ್ರೇಲಿಯಾ ತಂಡ ಅನುಭವಿ ಆಟಗಾರರ ಕೊರತೆ ಎದುರಿಸುತ್ತಿದೆ. ಗಾಯದ ಸಮಸ್ಯೆಯಿಂದ ಜೋಶ್ ಹ್ಯಾಜಲ್ವುಡ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಮಾರ್ಷ್, ಮತ್ತು ಪ್ಯಾಟ್ ಕಮಿನ್ಸ್ ದೂರವುಳಿದಿದ್ದು, ಅಫ್ಗಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಆರಂಭಿಕ ಬ್ಯಾಟರ್ ಮ್ಯಾಥ್ಯು ಶಾರ್ಟ್ ಕೂಡ ಗಾಯಗೊಂಡಿರುವುದು ನಾಯಕ ಸ್ಟೀವ್ ಸ್ಮಿತ್ಗೆ ತಲೆನೋವಾಗಿ ಪರಿಣಮಿಸಿದೆ.
ಬೌಲಿಂಗ್ ವಿಭಾಗದಲ್ಲಿ ಅನುಭವದ ಕೊರತೆ ಎದ್ದು ಕಾಣುತ್ತಿದ್ದು, ಹೊಸ ಆಟಗಾರರನ್ನೇ ನೆಚ್ಚಿಕೊಂಡು ಆಸ್ಟ್ರೇಲಿಯಾ ಕಣಕ್ಕೆ ಇಳಿಯಬೇಕಿದೆ.
ತಂಡಗಳು ಹಿಂತಿವೆ:
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ.
ಆಸ್ರೇಲಿಯಾ: ಸ್ಟೀವ್ ಸ್ಮಿತ್ (ನಾಯಕ), ಜೋಶ್ ಇಂಗ್ಲಿಸ್, ಟ್ರಾವಿಸ್ ಹೆಡ್, ಮಾರ್ನಸ್ ಲಾಬುಶೇನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಗ್ಲೇನ್ ಮ್ಯಾಕ್ಸವೆಲ್, ಬೆನ್ ಡ್ವಾರ್ಶಿಸ್, ನಾಥನ್ ಎಲ್ಲಿಸ್, ಆಡಂ ಜಂಪಾ, ಸ್ಪೆನ್ಸರ್ ಜಾನ್ಸನ್, ಸೀನ್ ಅಬಾಟ್, ಆರನ್ ಹಾರ್ಡಿ, ತನ್ವೀರ್ ಸಂಗಾ, ಕೂಪರ್ ಕೋನ್ನೊಲಿ, ಜೇಕ್-ಫ್ರೇಶರ್ ಮೆಕ್ಗುರ್ಕ್.
ಪಂದ್ಯ ಆರಂಭ: ನಾಳೆ ಮಧ್ಯಾಹ್ನ 2:30 PM
ಸ್ಥಳ: ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣ, ದುಬೈ
ನೇರ ಪ್ರಸಾರ: ಜಿಯೊ ಹಾಟ್ಸ್ಟಾರ್, ಹಾಟ್ಸ್ಟಾರ್ ನೆಟ್ವರ್ಕ್, ಸ್ಟಾರ್ ಸ್ಪೋರ್ಟ್ಸ್
ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ಕೋರ್ಟ್ ನೀಡಿರುವ ಸಮನ್ಸ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ…
ಮೈಸೂರು: ಕ್ಯಾತಮಾರನಹಳ್ಳಿ ಮಸೀದಿ ಬಂದ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ಸೂಚನೆ ಮೇರೆಗೆ ಇಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ಹೊಂದಿದ ವಿಕಲಚೇತನರಿಗೆ ಮುಂರುವ ದಿನಗಳಲ್ಲಿ ವಿಮಾ ಮೊತ್ತನ್ನು ಐದು ಲಕ್ಷ ರೂ.ಗೆ ಏರಿಕೆ…
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಆರೋಪಿ ರನ್ಯಾ ರಾವ್ ಈಗ ತಪ್ಪೊಪ್ಪಿಕೊಂಡಿದ್ದಾರೆ ಎಂಬ…
ಚಂಡೀಗಢ: ಬೈಕ್ನಲ್ಲಿ ಬೆನ್ನಟ್ಟಿ ಶಿವಸೇನಾ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್ನ ಮೊಗಾದಲ್ಲಿ ನಡೆದಿದೆ. ದಾಳಿಯಲ್ಲಿ ಓರ್ವ ಬಾಲಕ…
ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ 50 ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ಸಿನಿಮಾ ರಿ-ರಿಲೀಸ್…