ಕ್ರೀಡೆ

IND v/s AUS: ಫೈನಲ್‌ನತ್ತ ಎರಡು ಟೀಂಗಳ ಚಿತ್ತ

ದುಬೈ: ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ಮತ್ತು ಆಸ್ರೇಲಿಯಾ ಮುಖಾಮುಖಿಯಾಗಲಿದ್ದು, ಫೈನಲ್‌ನತ್ತ ಎರಡು ತಂಡಗಳು ಚಿತ್ತ ನೆಟ್ಟಿವೆ.

ಐಸಿಸಿ ಟೂರ್ನಿಗಳಲ್ಲಿ ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳ ನಡುವಿನ ಕಾಳಗದಲ್ಲಿ ಆಸೀಸ್‌ ತಂಡವೇ ಮೇಲುಗೈ ಸಾಧಿಸಿದೆ.

ಭಾರತ ತಂಡವು ತನ್ನ ಗುಂಪು ಹಂತದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಆತ್ಮವಿಶ್ವಾಸದಲ್ಲಿದೆ. ಇದಕ್ಕೆ ಪೂರಕವಾಗಿ ತಂಡದ ಬ್ಯಾಟರ್‌ಗಳಾದ ಶುಭಮನ್‌ ಗಿಲ್‌ ಬಾಂಗ್ಲಾ ವಿರುದ್ಧ ಶತಕ ಬಾರಿಸಿದರೆ, ವಿರಾಟ್‌ ಪಾಕಿಸ್ತಾನದ ವಿರುದ್ದ ಶತಕ ಬಾರಿಸಿ ಜಯಕ್ಕೆ ಕಾರಣರಾಗಿದ್ದರು.

ಬೌಲಿಂಗ್‌ ವಿಭಾಗದಲ್ಲಿ ಬಾಂಗ್ಲಾ ವಿರುದ್ಧ ಮೊಹಮ್ಮದ್‌ ಶಮಿ, ನ್ಯೂಜಿಲೆಂಡ್‌ ವಿರುದ್ಧ ವರುಣ್‌ ಚಕ್ರವರ್ತಿ ಹೊರತುಪಡಿಸಿ ಉಳಿದ ಬೌಲರ್‌ಗಳಿಂದ ಹೇಳಿಕೊಳ್ಳುವಂತ ಪ್ರದರ್ಶನ ಇಲ್ಲಿವರೆಗೂ ಬಂದಿಲ್ಲ.

ಇತ್ತ ಆಸ್ಟ್ರೇಲಿಯಾ ತಂಡ ಅನುಭವಿ ಆಟಗಾರರ ಕೊರತೆ ಎದುರಿಸುತ್ತಿದೆ. ಗಾಯದ ಸಮಸ್ಯೆಯಿಂದ ಜೋಶ್‌ ಹ್ಯಾಜಲ್‌ವುಡ್‌, ಮಿಚೆಲ್‌ ಸ್ಟಾರ್ಕ್‌, ಮಿಚೆಲ್‌ ಮಾರ್ಷ್‌, ಮತ್ತು ಪ್ಯಾಟ್‌ ಕಮಿನ್ಸ್‌ ದೂರವುಳಿದಿದ್ದು, ಅಫ್ಗಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಆರಂಭಿಕ ಬ್ಯಾಟರ್‌ ಮ್ಯಾಥ್ಯು ಶಾರ್ಟ್‌ ಕೂಡ ಗಾಯಗೊಂಡಿರುವುದು ನಾಯಕ ಸ್ಟೀವ್‌ ಸ್ಮಿತ್‌ಗೆ ತಲೆನೋವಾಗಿ ಪರಿಣಮಿಸಿದೆ.

ಬೌಲಿಂಗ್‌ ವಿಭಾಗದಲ್ಲಿ ಅನುಭವದ ಕೊರತೆ ಎದ್ದು ಕಾಣುತ್ತಿದ್ದು, ಹೊಸ ಆಟಗಾರರನ್ನೇ ನೆಚ್ಚಿಕೊಂಡು ಆಸ್ಟ್ರೇಲಿಯಾ ಕಣಕ್ಕೆ ಇಳಿಯಬೇಕಿದೆ.

ತಂಡಗಳು ಹಿಂತಿವೆ:

ಭಾರತ: ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಕೆಎಲ್‌ ರಾಹುಲ್‌ (ವಿಕೆಟ್‌ ಕೀಪರ್‌), ಅಕ್ಷರ್‌ ಪಟೇಲ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್‌ ಶಮಿ, ಕುಲದೀಪ್‌ ಯಾದವ್‌, ವರುಣ್‌ ಚಕ್ರವರ್ತಿ, ರಿಷಭ್‌ ಪಂತ್‌, ವಾಷಿಂಗ್ಟನ್‌ ಸುಂದರ್‌, ಅರ್ಷದೀಪ್‌ ಸಿಂಗ್‌, ಹರ್ಷಿತ್‌ ರಾಣಾ.

ಆಸ್ರೇಲಿಯಾ: ಸ್ಟೀವ್‌ ಸ್ಮಿತ್‌ (ನಾಯಕ), ಜೋಶ್‌ ಇಂಗ್ಲಿಸ್‌, ಟ್ರಾವಿಸ್‌ ಹೆಡ್‌, ಮಾರ್ನಸ್‌ ಲಾಬುಶೇನ್‌, ಅಲೆಕ್ಸ್‌ ಕ್ಯಾರಿ (ವಿಕೆಟ್‌ ಕೀಪರ್‌), ಗ್ಲೇನ್‌ ಮ್ಯಾಕ್ಸವೆಲ್‌, ಬೆನ್‌ ಡ್ವಾರ್ಶಿಸ್‌, ನಾಥನ್‌ ಎಲ್ಲಿಸ್‌, ಆಡಂ ಜಂಪಾ, ಸ್ಪೆನ್ಸರ್‌ ಜಾನ್ಸನ್‌, ಸೀನ್‌ ಅಬಾಟ್‌, ಆರನ್‌ ಹಾರ್ಡಿ, ತನ್ವೀರ್‌ ಸಂಗಾ, ಕೂಪರ್‌ ಕೋನ್ನೊಲಿ, ಜೇಕ್‌-ಫ್ರೇಶರ್‌ ಮೆಕ್‌ಗುರ್ಕ್‌.

ಪಂದ್ಯ ಆರಂಭ: ನಾಳೆ ಮಧ್ಯಾಹ್ನ 2:30 PM

ಸ್ಥಳ: ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣ, ದುಬೈ

ನೇರ ಪ್ರಸಾರ: ಜಿಯೊ ಹಾಟ್‌ಸ್ಟಾರ್‌, ಹಾಟ್‌ಸ್ಟಾರ್‌ ನೆಟ್‌ವರ್ಕ್‌, ಸ್ಟಾರ್‌ ಸ್ಪೋರ್ಟ್ಸ್‌

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

52 mins ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

54 mins ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

56 mins ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

58 mins ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

60 mins ago

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…

1 hour ago