ಕ್ರೀಡೆ

IND V/S ENG: ಅಭಿಷೇಕ್‌ ಬಿರುಸಿನ ಶತಕ; ಭಾರತಕ್ಕೆ 150 ರನ್‌ಗಳ ಭರ್ಜರಿ ಜಯ

ಮುಂಬೈ: ನಗರದ ವಾಂಖೆಡೆ ಕ್ರೀಡಾಂಗಣದಲ್ಲಿ ಇಂಗ್ಲೆಂಡ್‌ ವಿರುದ್ದ ನಡೆದ T20 ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ತಂಡ 150 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ 5 ಪಂದ್ಯಗಳ T20 ಸರಣಿಯನ್ನು 4-1 ಅಂತರದಲ್ಲಿ ಗೆದ್ದುಕೊಂಡಿದೆ.

ಟಾಸ್‌ ಗೆದ್ದ ಇಂಗ್ಲೆಂಡ್‌ ತಂಡ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಭಾರತ ತಂಡದ ಪರವಾಗಿ ಆರಂಭಿಕರಾಗಿ ಸಂಜು 16(7), ಜೊತೆ ಕ್ರೀಸ್‌ಗಿಳಿದ ಅಭಿಷೇಕ್‌ ಶರ್ಮಾ ಅವರು ಅಕ್ಷರಶಃ ಅಬ್ಬರಿಸಿ 135(54) ಶತಕ ಸಿಡಿಸಿದರು. ಆ ಮೂಲಕ T20 ಕ್ರಿಕೆಟ್‌ನಲ್ಲಿ ಅತೀ ವೇಗವಾಗಿ ಶತಕ ಸಿಡಿಸಿದ ಭಾರತ ತಂಡದ ಎರಡನೇ ಆಟಗಾರ ಎಂಬ ದಾಖಲೆ ತಮ್ಮದಾಗಿಸಿಕೊಂಡರು.

ಅಭಿಷೇಕ್‌ ಅವರ ಶತಕದ ಬಲದಿಂದ ಭಾರತ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 247 ರನ್‌ಗಳ ಬೃಹತ್‌ ಮೊತ್ತ ದಾಖಲಿಸಿತು.

248 ರನ್‌ಗಳ ಬೃಹತ್‌ ಗುರಿ ಬೆನ್ನತ್ತಿದ್ದ ಇಂಗ್ಲೆಂಡ್‌ ತಂಡ 10.3 ಓವರ್‌ಗಳಲ್ಲಿ 97 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಹೀನಾಯ ಸೋಲು ಕಂಡಿತು. ಇಂಗ್ಲೆಂಡ್‌ ಪರ ಏಕಾಂಗಿಯಾಗಿ ಹೋರಾಟ ನಡೆಸಿದ ಫಿಲ್‌ ಸಾಲ್ಟ್‌ 53(23) ಬಿರುಸಿನ ಅರ್ಧಶಕತ ಬಾರಿಸಿದರೆ, ಉಳಿದವರೆಲ್ಲ ಅಲ್ಪ ಮೊತ್ತಕ್ಕೆ ನೆಲ ಕಚ್ಚಿದರು.

ಇಂಗ್ಲೆಂಡ್‌ ತಂಡದ ವಿರುದ್ಧ ಸಂಘಟಿತ ಬೌಲಿಂಗ್‌ ದಾಳಿ ನಡೆಸಿದ ಭಾರತದ ಬೌಲರ್‌ಗಳಾದ ಮೊಹಮ್ಮದ್‌ ಶಮಿ (25/3), ಶಿವಂ ದುಬೆ (11/2), ವರುಣ್‌ ಚಕ್ರವರ್ತಿ (25/2) ಮತ್ತು ಅಭಿಷೇಕ್‌ ಶರ್ಮಾ (3/2) ವಿಕೆಟ್‌ ಪಡೆದು ಮಿಂಚಿದರು.

ಈ ಪಂದ್ಯದ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಅಭಿಷೇಕ್‌  ಶರ್ಮಾ ಪಡೆದರೆ, ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ವರಣ್‌ ಚಕ್ರವರ್ತಿ ತಮ್ಮದಾಗಿಸಿಕೊಂಡರು.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

8 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

8 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

9 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

9 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago