ಕ್ರೀಡೆ

IND V/S ENG: ಅಭಿಷೇಕ್‌ ಬಿರುಸಿನ ಶತಕ; ಭಾರತಕ್ಕೆ 150 ರನ್‌ಗಳ ಭರ್ಜರಿ ಜಯ

ಮುಂಬೈ: ನಗರದ ವಾಂಖೆಡೆ ಕ್ರೀಡಾಂಗಣದಲ್ಲಿ ಇಂಗ್ಲೆಂಡ್‌ ವಿರುದ್ದ ನಡೆದ T20 ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ತಂಡ 150 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ 5 ಪಂದ್ಯಗಳ T20 ಸರಣಿಯನ್ನು 4-1 ಅಂತರದಲ್ಲಿ ಗೆದ್ದುಕೊಂಡಿದೆ.

ಟಾಸ್‌ ಗೆದ್ದ ಇಂಗ್ಲೆಂಡ್‌ ತಂಡ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಭಾರತ ತಂಡದ ಪರವಾಗಿ ಆರಂಭಿಕರಾಗಿ ಸಂಜು 16(7), ಜೊತೆ ಕ್ರೀಸ್‌ಗಿಳಿದ ಅಭಿಷೇಕ್‌ ಶರ್ಮಾ ಅವರು ಅಕ್ಷರಶಃ ಅಬ್ಬರಿಸಿ 135(54) ಶತಕ ಸಿಡಿಸಿದರು. ಆ ಮೂಲಕ T20 ಕ್ರಿಕೆಟ್‌ನಲ್ಲಿ ಅತೀ ವೇಗವಾಗಿ ಶತಕ ಸಿಡಿಸಿದ ಭಾರತ ತಂಡದ ಎರಡನೇ ಆಟಗಾರ ಎಂಬ ದಾಖಲೆ ತಮ್ಮದಾಗಿಸಿಕೊಂಡರು.

ಅಭಿಷೇಕ್‌ ಅವರ ಶತಕದ ಬಲದಿಂದ ಭಾರತ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 247 ರನ್‌ಗಳ ಬೃಹತ್‌ ಮೊತ್ತ ದಾಖಲಿಸಿತು.

248 ರನ್‌ಗಳ ಬೃಹತ್‌ ಗುರಿ ಬೆನ್ನತ್ತಿದ್ದ ಇಂಗ್ಲೆಂಡ್‌ ತಂಡ 10.3 ಓವರ್‌ಗಳಲ್ಲಿ 97 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಹೀನಾಯ ಸೋಲು ಕಂಡಿತು. ಇಂಗ್ಲೆಂಡ್‌ ಪರ ಏಕಾಂಗಿಯಾಗಿ ಹೋರಾಟ ನಡೆಸಿದ ಫಿಲ್‌ ಸಾಲ್ಟ್‌ 53(23) ಬಿರುಸಿನ ಅರ್ಧಶಕತ ಬಾರಿಸಿದರೆ, ಉಳಿದವರೆಲ್ಲ ಅಲ್ಪ ಮೊತ್ತಕ್ಕೆ ನೆಲ ಕಚ್ಚಿದರು.

ಇಂಗ್ಲೆಂಡ್‌ ತಂಡದ ವಿರುದ್ಧ ಸಂಘಟಿತ ಬೌಲಿಂಗ್‌ ದಾಳಿ ನಡೆಸಿದ ಭಾರತದ ಬೌಲರ್‌ಗಳಾದ ಮೊಹಮ್ಮದ್‌ ಶಮಿ (25/3), ಶಿವಂ ದುಬೆ (11/2), ವರುಣ್‌ ಚಕ್ರವರ್ತಿ (25/2) ಮತ್ತು ಅಭಿಷೇಕ್‌ ಶರ್ಮಾ (3/2) ವಿಕೆಟ್‌ ಪಡೆದು ಮಿಂಚಿದರು.

ಈ ಪಂದ್ಯದ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಅಭಿಷೇಕ್‌  ಶರ್ಮಾ ಪಡೆದರೆ, ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ವರಣ್‌ ಚಕ್ರವರ್ತಿ ತಮ್ಮದಾಗಿಸಿಕೊಂಡರು.

ಆಂದೋಲನ ಡೆಸ್ಕ್

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

1 hour ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

4 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

4 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

5 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

5 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

5 hours ago