ಕ್ರೀಡೆ

IND V/S ENG ಟಿ20: ಇಂಗ್ಲೆಂಡ್‌ ವಿರುದ್ಧ ಗೆಲುವು ಸಾಧಿಸಿದ ಭಾರತ

ಚೆನ್ನೈ: ನಗರದ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆದ ಎರಡನೇ ಟಿ20 ಪಂದ್ಯದಲ್ಲಿ ತಿಲಕ್‌ ವರ್ಮಾ 72(55) ಅವರ ಅರ್ಧಶತಕದ ನೆರವಿನಿಂದ ಭಾರತ ವಿರೋಚಿತ ಗೆಲುವು ಸಾಧಿಸಿದೆ. ಆ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಗಳಿಸಿದೆ.

ಟಾಸ್‌ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್‌ ಯಾದವ್‌ ಮೊದಲು ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್‌ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 165 ರನ್‌ ಗಳಿಸಿತು. ನಾಯಕ ಜೋಶ್‌ ಬಟ್ಲರ್‌ 45(30) ರನ್‌ ಪೇರಿಸುವ ಮೂಲಕ ಇಂಗ್ಲೆಂಡ್‌ ತಂಡ ಸ್ಪರ್ಧಾತ್ಮಕ ಮೊತ್ತ ಕಲೆಹಾಕುವಲ್ಲಿ ನೆರವಾದರು.

ಟೀಂ ಇಂಡಿಯಾ ಪರ ಅಕ್ಷರ್‌ ಹಾಗೂ ವರುಣ್‌ ಚಕ್ರವರ್ತಿ ತಲಾ 2 ವಿಕೆಟ್‌ ಪಡೆದರೆ, ಉಳಿದವರು ಒಂದೊಂದು ವಿಕೆಟ್‌ ಪಡೆದರು.

ಈ ಗುರಿ ಬೆನ್ನತ್ತಿದ ಭಾರತ ತಂಡ, ತಿಲಕ್‌ ವರ್ಮಾ 72(55) ಅವರ ಅರ್ಧಶತಕದ ನೆರವಿನಿಂದ 19.2 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು ಗುರಿ ತಲುಪಿತು.

ಇಂಗ್ಲೆಂಡ್‌ ಇನ್ನಿಂಗ್ಸ್:‌ ಪಿಲ್‌ ಸಾಲ್ಟ್‌ 4, ಡಕೆಟ್‌ 3, ಜೋಸ್‌ ಬಟ್ಲರ್‌ 45, ಹ್ಯಾರಿ ಬ್ರೂಕ್‌ 13, ಲಿವಿಂಗ್‌ಸ್ಟೋನ್‌ 13, ಸ್ಮಿತ್‌ 22, ಜಾಮಿ ಓವರ್ಟನ್‌ 5, ಬ್ರಿಡನ್‌ ಕಾರ್ಸ್‌ 31, ಆರ್ಚರ್‌ 12, ಅದಿಲ್‌ ರಶೀದ್‌ 10, ಮಾರ್ಕ್‌ ವುಡ್‌ 5.

ಭಾರತದ ಪರ ವರುಣ್‌ ಚಕ್ರವರ್ತಿ ಹಾಗೂ ಅಕ್ಷರ್‌ ಪಟೇಲ್‌ 2 ವಿಕೆಟ್‌ ಮತ್ತು ಅರ್ಷದೀಪ್‌ ಸಿಂಗ್‌, ಹಾರ್ದಿಕ್‌ ಪಾಂಡ್ಯ, ವಾಷಿಂಗ್ಟನ್‌ ಸುಂದರ್‌ ಹಾಗೂ ಅಭಿಷೇಕ್‌ ಶರ್ಮಾ ತಲಾ 1 ವಿಕೆಟ್‌ ಪಡೆದರು.

ಭಾರತದ ಇನ್ನಿಂಗ್ಸ್‌: ಸಂಜು ಸ್ಯಾಮ್ಸನ್‌ 5, ಅಭಿಷೇಕ್‌ ಶರ್ಮಾ 12, ತಿಲಕ್‌ ವರ್ಮಾ 72, ಸೂರ್ಯಕುಮಾರ್‌ ಯಾದವ್‌ 12, ದ್ರುವ್‌ ಜುರೆಲ್‌ 4, ಹಾರ್ದಿಕ್‌ ಪಾಂಡ್ಯ 7, ವಾಷಿಂಗ್ಟನ್‌ ಸುಂದರ್‌ 26, ಅಕ್ಷರ್‌ ಪಟೇಲ್‌ 2, ಅರ್ಷದೀಪ್‌ ಸಿಂಗ್‌ 6, ರವಿ ಬಿಷ್ಣೋಯಿ 9.

ಇಂಗ್ಕೆಂಡ್‌ ಪರ ಬ್ರಿಡನ್‌ ಕಾರ್ಸ್‌ 3 ವಿಕೆಟ್‌ ಹಾಗೂ ಜೋಫ್ರಾ ಆರ್ಚರ್‌, ಮಾರ್ಕ್‌ ವುಡ್‌, ಅದಿಲ್‌ ರಶೀದ್‌, ಹಜಾಮಿ ಓವರ್ಟನ್‌ ಮತ್ತು ಲಿವಿಂಗ್‌ಸ್ಟೋನ್‌ ತಲಾ 1 ವಿಕೆಟ್‌ ಪಡೆದರು.

ಆಂದೋಲನ ಡೆಸ್ಕ್

Recent Posts

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

12 mins ago

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…

24 mins ago

ರಾಜ್ಯದಲ್ಲಿ ಹೆಚ್ಚಿದ ಗರಿಷ್ಠ ತಾಪಮಾನ: ಚರ್ಮದ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…

1 hour ago

ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ: ಭಾವುಕ ಪೋಸ್ಟ್‌ ಹಾಕಿದ ರಾಘವೇಂದ್ರ

ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…

2 hours ago

ಓದುಗರ ಪತ್ರ: ಐದು ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಪರಿಷ್ಕರಿಸಿ

ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…

2 hours ago

ಓದುಗರ ಪತ್ರ: ಮ್ಯಾನ್ ಹೋಲ್ ಸ್ವಚ್ಛಗೊಳಿಸಿ

ಮೈಸೂರಿನ ಝಾನ್ಸಿ ಲಕ್ಷ್ಮೀಬಾಯಿ (ಜೆಎಲ್‌ಬಿ) ರಸ್ತೆಯಲ್ಲಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಕಚೇರಿಯ ಮುಂದಿರುವ ಫುಟ್‌ಪಾತ್‌ನಲ್ಲಿರುವ ಮ್ಯಾನ್ ಹೋಲ್‌ನಲ್ಲಿ ಕಸ…

2 hours ago