ಕ್ರೀಡೆ

IND V/S ENG ಟಿ20: ಇಂಗ್ಲೆಂಡ್‌ ವಿರುದ್ಧ ಗೆಲುವು ಸಾಧಿಸಿದ ಭಾರತ

ಚೆನ್ನೈ: ನಗರದ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆದ ಎರಡನೇ ಟಿ20 ಪಂದ್ಯದಲ್ಲಿ ತಿಲಕ್‌ ವರ್ಮಾ 72(55) ಅವರ ಅರ್ಧಶತಕದ ನೆರವಿನಿಂದ ಭಾರತ ವಿರೋಚಿತ ಗೆಲುವು ಸಾಧಿಸಿದೆ. ಆ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಗಳಿಸಿದೆ.

ಟಾಸ್‌ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್‌ ಯಾದವ್‌ ಮೊದಲು ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್‌ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 165 ರನ್‌ ಗಳಿಸಿತು. ನಾಯಕ ಜೋಶ್‌ ಬಟ್ಲರ್‌ 45(30) ರನ್‌ ಪೇರಿಸುವ ಮೂಲಕ ಇಂಗ್ಲೆಂಡ್‌ ತಂಡ ಸ್ಪರ್ಧಾತ್ಮಕ ಮೊತ್ತ ಕಲೆಹಾಕುವಲ್ಲಿ ನೆರವಾದರು.

ಟೀಂ ಇಂಡಿಯಾ ಪರ ಅಕ್ಷರ್‌ ಹಾಗೂ ವರುಣ್‌ ಚಕ್ರವರ್ತಿ ತಲಾ 2 ವಿಕೆಟ್‌ ಪಡೆದರೆ, ಉಳಿದವರು ಒಂದೊಂದು ವಿಕೆಟ್‌ ಪಡೆದರು.

ಈ ಗುರಿ ಬೆನ್ನತ್ತಿದ ಭಾರತ ತಂಡ, ತಿಲಕ್‌ ವರ್ಮಾ 72(55) ಅವರ ಅರ್ಧಶತಕದ ನೆರವಿನಿಂದ 19.2 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು ಗುರಿ ತಲುಪಿತು.

ಇಂಗ್ಲೆಂಡ್‌ ಇನ್ನಿಂಗ್ಸ್:‌ ಪಿಲ್‌ ಸಾಲ್ಟ್‌ 4, ಡಕೆಟ್‌ 3, ಜೋಸ್‌ ಬಟ್ಲರ್‌ 45, ಹ್ಯಾರಿ ಬ್ರೂಕ್‌ 13, ಲಿವಿಂಗ್‌ಸ್ಟೋನ್‌ 13, ಸ್ಮಿತ್‌ 22, ಜಾಮಿ ಓವರ್ಟನ್‌ 5, ಬ್ರಿಡನ್‌ ಕಾರ್ಸ್‌ 31, ಆರ್ಚರ್‌ 12, ಅದಿಲ್‌ ರಶೀದ್‌ 10, ಮಾರ್ಕ್‌ ವುಡ್‌ 5.

ಭಾರತದ ಪರ ವರುಣ್‌ ಚಕ್ರವರ್ತಿ ಹಾಗೂ ಅಕ್ಷರ್‌ ಪಟೇಲ್‌ 2 ವಿಕೆಟ್‌ ಮತ್ತು ಅರ್ಷದೀಪ್‌ ಸಿಂಗ್‌, ಹಾರ್ದಿಕ್‌ ಪಾಂಡ್ಯ, ವಾಷಿಂಗ್ಟನ್‌ ಸುಂದರ್‌ ಹಾಗೂ ಅಭಿಷೇಕ್‌ ಶರ್ಮಾ ತಲಾ 1 ವಿಕೆಟ್‌ ಪಡೆದರು.

ಭಾರತದ ಇನ್ನಿಂಗ್ಸ್‌: ಸಂಜು ಸ್ಯಾಮ್ಸನ್‌ 5, ಅಭಿಷೇಕ್‌ ಶರ್ಮಾ 12, ತಿಲಕ್‌ ವರ್ಮಾ 72, ಸೂರ್ಯಕುಮಾರ್‌ ಯಾದವ್‌ 12, ದ್ರುವ್‌ ಜುರೆಲ್‌ 4, ಹಾರ್ದಿಕ್‌ ಪಾಂಡ್ಯ 7, ವಾಷಿಂಗ್ಟನ್‌ ಸುಂದರ್‌ 26, ಅಕ್ಷರ್‌ ಪಟೇಲ್‌ 2, ಅರ್ಷದೀಪ್‌ ಸಿಂಗ್‌ 6, ರವಿ ಬಿಷ್ಣೋಯಿ 9.

ಇಂಗ್ಕೆಂಡ್‌ ಪರ ಬ್ರಿಡನ್‌ ಕಾರ್ಸ್‌ 3 ವಿಕೆಟ್‌ ಹಾಗೂ ಜೋಫ್ರಾ ಆರ್ಚರ್‌, ಮಾರ್ಕ್‌ ವುಡ್‌, ಅದಿಲ್‌ ರಶೀದ್‌, ಹಜಾಮಿ ಓವರ್ಟನ್‌ ಮತ್ತು ಲಿವಿಂಗ್‌ಸ್ಟೋನ್‌ ತಲಾ 1 ವಿಕೆಟ್‌ ಪಡೆದರು.

ಆಂದೋಲನ ಡೆಸ್ಕ್

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

12 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

13 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

13 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

13 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

14 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

22 hours ago