ನಾಗ್ಪುರ: ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿ (ಫೆ.6) ಇದೇ ಗುರುವಾರದಂದು ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರಂಭವಾಗಲಿದೆ.
ಇದೇ ತಿಂಗಳು ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ ಕೂಡ ಇರುವುದರಿಂದ ಭಾರತ ತಂಡದ ಪ್ರಮುಖ ಆಟಗಾರರು ಫಾರ್ಮ್ ಕಂಡುಕೊಳ್ಳಲು ಈ ಸರಣಿಯು ಉತ್ತಮ ಅವಕಾಶವಾಗಿದೆ.
ಈ ಹಿಂದೆ ನಡೆದ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ವಿರುದ್ಧದ ಸರಣಿಗಳಲ್ಲಿ ಹಾಗೂ ದೇಶಿ ಟೂರ್ನಿ ರಣಜಿಯಲ್ಲೂ ತಂಡದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಐಯ್ಯರ್, ಶುಭಮನ್ ಗಿಲ್ ಸೇರಿದಂತೆ ಟೀಂ ಇಂಡಿಯಾದ ಅನೇಕ ಆಟಗಾರರು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದರು. ಇದೀಗ ಉತ್ತಮ ಅವಕಾಶವಿದ್ದು ಈ ಸರಣಿಯಲ್ಲಿ ಮತ್ತೆ ಲಯಕ್ಕೆ ಬರುವ ವಿಶ್ವಾಸದಲ್ಲಿದ್ದಾರೆ.
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಐಯ್ಯರ್, ಕೆಎಲ್ ರಾಹುಲ್, ರಿಷಬ್ ಪಂತ್, ಯಶಸ್ವಿ ಜೈಸ್ವಾಲ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ.
ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…
2023ರಿಂದ "ಮಾತೋಶ್ರೀ ಫೌಂಡೇಶನ್"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…