ಕ್ರೀಡೆ

IND vs AFG 1st t20: ಅಫ್ಘಾನ್‌ ವಿರುದ್ಧ ಅಜೇಯ ಓಟ ಮುಂದುವರೆಸಿದ ಟೀಂ ಇಂಡಿಯಾ!

ಪಂಜಾಬ್‌: ಭಾರತ ಮತ್ತು ಅಫ್ಘಾನಿಸ್ತಾನ್‌ ನಡುವೆ ನಡೆಯುತ್ತಿರುವ ಮೊದಲ ಟಿ೨೦ ಪಂದ್ಯದಲ್ಲಿ, ಶಿವಂ ದುಬೆ ಅವರ ಆಲ್‌ರೌಂಡರ್‌ ಆಟದ ಫಲವಾಗಿ ಟೀಂ ಇಂಡಿಯಾ 6 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಮೂರು ಟಿ20 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುಂದಿದೆ.

ಇಲ್ಲಿನ ಪಂಜಾಬ್‌ ಅಸೋಸಿಯೇಷನ್‌ ಬಿಂದ್ರಾ ಸ್ಟೇಡಿಯಂ ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಅಫ್ಘನ್‌ ಮೇಲಿನ ತನ್ನ ಅಜೇಯ ಓಟ ಮುಂದುವರೆಸಿದೆ. ಈವರೆಗೆ ಟೀಂ ಇಂಡಿಯಾ ಮತ್ತು ಅಫ್ಘನ್‌ ತಂಡಗಳು 6 ಪಂದ್ಯಗಳನ್ನು ಆಡಿದ್ದು, ಭಾರತ 5 ರಲ್ಲಿ ಗೆದ್ದಿದೆ ಅಫ್ಘನ್‌ ಒಂದು ಪಂದ್ಯವನ್ನು ಗೆದ್ದಿಲ್ಲ. ಒಂದು ಪಂದ್ಯ ಟೈನಲ್ಲಿ ಅಂತ್ಯಗೊಂಡಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಅಫ್ಘಾನಿಸ್ತಾನ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 158 ರನ್‌ ಕಲೆಹಾಕಿತು. ಆರಂಭಿಕ ಆಟಗಾರರಾದ ಗುರ್ಬಾಜ್‌ (23) ಮತ್ತು ನಾಯಕ ಜದ್ರಾನ್‌(25) ಉತ್ತಮ ಆರಂಭ ಒದಗಿಸಿದರು. ಅಜ್ಮತ್ತುಲ್ಲಾ ಒಮರಾಜಿ (29) ರನ್‌ ಬಾರಿಸಿ ತಂಡಕ್ಕೆ ಚೇತರಿಕೆ ರನ್‌ ನೀಡಿದರು. ರಹಮತ್‌ ಕೇವಲ 3 ರನ್‌ ಗಳಿಸಿ ನಿರ್ಗಮಿಸಿದರು.

ಮಾಜಿ ನಾಯಕ ನಬಿ (42) ರನ್‌ ಬಾರಿಸಿ ತಂಡದ ಮೊತ್ತ 150 ರ ಗಡಿ ದಾಟಲು ಸಹಕರಿಸಿದರು. ನಜೀಬುಲ್ಲಾ ಜದ್ರಾನ್ (19) ಕೊನೆಯಲ್ಲಿ ಆರ್ಭಟಿಸಿದರು.

ಟೀಂ ಇಂಡಿಯಾ ಪರ ಮುಖೇಶ್‌ ಕುಮಾರ್‌ 33/2, ಅಕ್ಷರ್‌ ಪಟೇಲ್‌ 23/2 ಮತ್ತು ಶಿವಂ ದುಬೆ 9/1 ವಿಕೆಟ್‌ ಪಡೆದರು.

ಇನ್ನು ಅಫ್ಘನ್‌ ನೀಡಿದ 158 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಭಾರತ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ನಾಯಕ ರೋಹಿತ್‌ ಶರ್ಮಾ ಶೂನ್ಯಕ್ಕೆ ನಿರ್ಗಮಿಸಿದರು. ನಂತರ ಜೊತೆಯಾದ ಶುಭ್‌ಮನ್‌ ಗಿಲ್‌ (23) ಮತು ತಿಲಕ್‌ ವರ್ಮಾ (26) ರನ್‌ ಬಾರಿಸಿ ತಂಡಕ್ಕೆ ಚೇತರಿಕೆ ಆಟವಾಡಿದರು. ಜಿತೇಶ್‌ ಶರ್ಮಾ (31) ರನ್‌ ಬಾರಿಸಿದರು.

ಆಲ್‌ರೌಂಡರ್‌ ಶಿವಂ ದುಬೆ 40 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ ಮೂಲಕ 60 ರನ್‌ ಕಲೆ ಹಾಕಿದರು. ರಿಂಕು ಸಿಂಗ್‌ (16) ರನ್‌ ಬಾರಿಸಿ ತಂಡದ ಗೆಲುವಿಗೆ ಕಾರಣರಾದರು. ಟೀಂ ಇಂಡಿಯಾ ಅಂತಿಮವಾಗಿ 17.3 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 159 ರನ್‌ ಕಲೆಹಾಕಿ ಗೆಲುವಿನ ನಗೆ ಬೀರಿತು.

ಅಫ್ಘನ್‌ ಪರ ಮುಜೀಬ್‌ ರಹಮನ್‌ 21/2, ಓಮರಾಜಿ 25/1 ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಶಿವಂ ದುಬೆ

andolanait

Recent Posts

ಸುವರ್ಣಸೌಧದಲ್ಲಿ ನಾಟಿ ಕೋಳಿ ಬಗ್ಗೆ ಸ್ವಾರಸ್ಯಕರ ಚರ್ಚೆ..!

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…

6 mins ago

ಯುವನಿಧಿ | 2.84 ಲಕ್ಷ ಮಂದಿಗೆ 757 ಕೋಟಿ ರೂ.ಆರ್ಥಿಕ ನೆರವು

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…

24 mins ago

ಕೇಬಲ್‌ ಟಿವಿ ಆಪರೇಟರ್‌ ಶುಲ್ಕ ಶೇ.50 ರಷ್ಟು ಕಡಿತ : ಕೆ.ಜೆ.ಜಾರ್ಜ್‌

ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…

49 mins ago

ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…

2 hours ago

ಚಿಕ್ಕಮಗಳೂರಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧಾರ : ಪರಿಸರ ಸಂಘಟನೆಗಳಿಂದ ತೀವ್ರ ವಿರೋಧ

ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…

2 hours ago

ಇತಿಹಾಸ ತಿರುಚಲು ಮೋದಿ ಯತ್ನ : ಗೌರವ್‌ ಗೊಗೊಯ್‌ ಆರೋಪ

ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…

2 hours ago