ಕ್ರೀಡೆ

IND vs AFG 1st t20: ಅಫ್ಘಾನ್‌ ವಿರುದ್ಧ ಅಜೇಯ ಓಟ ಮುಂದುವರೆಸಿದ ಟೀಂ ಇಂಡಿಯಾ!

ಪಂಜಾಬ್‌: ಭಾರತ ಮತ್ತು ಅಫ್ಘಾನಿಸ್ತಾನ್‌ ನಡುವೆ ನಡೆಯುತ್ತಿರುವ ಮೊದಲ ಟಿ೨೦ ಪಂದ್ಯದಲ್ಲಿ, ಶಿವಂ ದುಬೆ ಅವರ ಆಲ್‌ರೌಂಡರ್‌ ಆಟದ ಫಲವಾಗಿ ಟೀಂ ಇಂಡಿಯಾ 6 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಮೂರು ಟಿ20 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುಂದಿದೆ.

ಇಲ್ಲಿನ ಪಂಜಾಬ್‌ ಅಸೋಸಿಯೇಷನ್‌ ಬಿಂದ್ರಾ ಸ್ಟೇಡಿಯಂ ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಅಫ್ಘನ್‌ ಮೇಲಿನ ತನ್ನ ಅಜೇಯ ಓಟ ಮುಂದುವರೆಸಿದೆ. ಈವರೆಗೆ ಟೀಂ ಇಂಡಿಯಾ ಮತ್ತು ಅಫ್ಘನ್‌ ತಂಡಗಳು 6 ಪಂದ್ಯಗಳನ್ನು ಆಡಿದ್ದು, ಭಾರತ 5 ರಲ್ಲಿ ಗೆದ್ದಿದೆ ಅಫ್ಘನ್‌ ಒಂದು ಪಂದ್ಯವನ್ನು ಗೆದ್ದಿಲ್ಲ. ಒಂದು ಪಂದ್ಯ ಟೈನಲ್ಲಿ ಅಂತ್ಯಗೊಂಡಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಅಫ್ಘಾನಿಸ್ತಾನ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 158 ರನ್‌ ಕಲೆಹಾಕಿತು. ಆರಂಭಿಕ ಆಟಗಾರರಾದ ಗುರ್ಬಾಜ್‌ (23) ಮತ್ತು ನಾಯಕ ಜದ್ರಾನ್‌(25) ಉತ್ತಮ ಆರಂಭ ಒದಗಿಸಿದರು. ಅಜ್ಮತ್ತುಲ್ಲಾ ಒಮರಾಜಿ (29) ರನ್‌ ಬಾರಿಸಿ ತಂಡಕ್ಕೆ ಚೇತರಿಕೆ ರನ್‌ ನೀಡಿದರು. ರಹಮತ್‌ ಕೇವಲ 3 ರನ್‌ ಗಳಿಸಿ ನಿರ್ಗಮಿಸಿದರು.

ಮಾಜಿ ನಾಯಕ ನಬಿ (42) ರನ್‌ ಬಾರಿಸಿ ತಂಡದ ಮೊತ್ತ 150 ರ ಗಡಿ ದಾಟಲು ಸಹಕರಿಸಿದರು. ನಜೀಬುಲ್ಲಾ ಜದ್ರಾನ್ (19) ಕೊನೆಯಲ್ಲಿ ಆರ್ಭಟಿಸಿದರು.

ಟೀಂ ಇಂಡಿಯಾ ಪರ ಮುಖೇಶ್‌ ಕುಮಾರ್‌ 33/2, ಅಕ್ಷರ್‌ ಪಟೇಲ್‌ 23/2 ಮತ್ತು ಶಿವಂ ದುಬೆ 9/1 ವಿಕೆಟ್‌ ಪಡೆದರು.

ಇನ್ನು ಅಫ್ಘನ್‌ ನೀಡಿದ 158 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಭಾರತ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ನಾಯಕ ರೋಹಿತ್‌ ಶರ್ಮಾ ಶೂನ್ಯಕ್ಕೆ ನಿರ್ಗಮಿಸಿದರು. ನಂತರ ಜೊತೆಯಾದ ಶುಭ್‌ಮನ್‌ ಗಿಲ್‌ (23) ಮತು ತಿಲಕ್‌ ವರ್ಮಾ (26) ರನ್‌ ಬಾರಿಸಿ ತಂಡಕ್ಕೆ ಚೇತರಿಕೆ ಆಟವಾಡಿದರು. ಜಿತೇಶ್‌ ಶರ್ಮಾ (31) ರನ್‌ ಬಾರಿಸಿದರು.

ಆಲ್‌ರೌಂಡರ್‌ ಶಿವಂ ದುಬೆ 40 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ ಮೂಲಕ 60 ರನ್‌ ಕಲೆ ಹಾಕಿದರು. ರಿಂಕು ಸಿಂಗ್‌ (16) ರನ್‌ ಬಾರಿಸಿ ತಂಡದ ಗೆಲುವಿಗೆ ಕಾರಣರಾದರು. ಟೀಂ ಇಂಡಿಯಾ ಅಂತಿಮವಾಗಿ 17.3 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 159 ರನ್‌ ಕಲೆಹಾಕಿ ಗೆಲುವಿನ ನಗೆ ಬೀರಿತು.

ಅಫ್ಘನ್‌ ಪರ ಮುಜೀಬ್‌ ರಹಮನ್‌ 21/2, ಓಮರಾಜಿ 25/1 ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಶಿವಂ ದುಬೆ

andolanait

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

8 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

11 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

11 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

12 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

12 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

12 hours ago