ಕ್ರೀಡೆ

IND vs AFG 1st t20: ಅಫ್ಘಾನ್‌ ವಿರುದ್ಧ ಅಜೇಯ ಓಟ ಮುಂದುವರೆಸಿದ ಟೀಂ ಇಂಡಿಯಾ!

ಪಂಜಾಬ್‌: ಭಾರತ ಮತ್ತು ಅಫ್ಘಾನಿಸ್ತಾನ್‌ ನಡುವೆ ನಡೆಯುತ್ತಿರುವ ಮೊದಲ ಟಿ೨೦ ಪಂದ್ಯದಲ್ಲಿ, ಶಿವಂ ದುಬೆ ಅವರ ಆಲ್‌ರೌಂಡರ್‌ ಆಟದ ಫಲವಾಗಿ ಟೀಂ ಇಂಡಿಯಾ 6 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಮೂರು ಟಿ20 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುಂದಿದೆ.

ಇಲ್ಲಿನ ಪಂಜಾಬ್‌ ಅಸೋಸಿಯೇಷನ್‌ ಬಿಂದ್ರಾ ಸ್ಟೇಡಿಯಂ ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಅಫ್ಘನ್‌ ಮೇಲಿನ ತನ್ನ ಅಜೇಯ ಓಟ ಮುಂದುವರೆಸಿದೆ. ಈವರೆಗೆ ಟೀಂ ಇಂಡಿಯಾ ಮತ್ತು ಅಫ್ಘನ್‌ ತಂಡಗಳು 6 ಪಂದ್ಯಗಳನ್ನು ಆಡಿದ್ದು, ಭಾರತ 5 ರಲ್ಲಿ ಗೆದ್ದಿದೆ ಅಫ್ಘನ್‌ ಒಂದು ಪಂದ್ಯವನ್ನು ಗೆದ್ದಿಲ್ಲ. ಒಂದು ಪಂದ್ಯ ಟೈನಲ್ಲಿ ಅಂತ್ಯಗೊಂಡಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಅಫ್ಘಾನಿಸ್ತಾನ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 158 ರನ್‌ ಕಲೆಹಾಕಿತು. ಆರಂಭಿಕ ಆಟಗಾರರಾದ ಗುರ್ಬಾಜ್‌ (23) ಮತ್ತು ನಾಯಕ ಜದ್ರಾನ್‌(25) ಉತ್ತಮ ಆರಂಭ ಒದಗಿಸಿದರು. ಅಜ್ಮತ್ತುಲ್ಲಾ ಒಮರಾಜಿ (29) ರನ್‌ ಬಾರಿಸಿ ತಂಡಕ್ಕೆ ಚೇತರಿಕೆ ರನ್‌ ನೀಡಿದರು. ರಹಮತ್‌ ಕೇವಲ 3 ರನ್‌ ಗಳಿಸಿ ನಿರ್ಗಮಿಸಿದರು.

ಮಾಜಿ ನಾಯಕ ನಬಿ (42) ರನ್‌ ಬಾರಿಸಿ ತಂಡದ ಮೊತ್ತ 150 ರ ಗಡಿ ದಾಟಲು ಸಹಕರಿಸಿದರು. ನಜೀಬುಲ್ಲಾ ಜದ್ರಾನ್ (19) ಕೊನೆಯಲ್ಲಿ ಆರ್ಭಟಿಸಿದರು.

ಟೀಂ ಇಂಡಿಯಾ ಪರ ಮುಖೇಶ್‌ ಕುಮಾರ್‌ 33/2, ಅಕ್ಷರ್‌ ಪಟೇಲ್‌ 23/2 ಮತ್ತು ಶಿವಂ ದುಬೆ 9/1 ವಿಕೆಟ್‌ ಪಡೆದರು.

ಇನ್ನು ಅಫ್ಘನ್‌ ನೀಡಿದ 158 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಭಾರತ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ನಾಯಕ ರೋಹಿತ್‌ ಶರ್ಮಾ ಶೂನ್ಯಕ್ಕೆ ನಿರ್ಗಮಿಸಿದರು. ನಂತರ ಜೊತೆಯಾದ ಶುಭ್‌ಮನ್‌ ಗಿಲ್‌ (23) ಮತು ತಿಲಕ್‌ ವರ್ಮಾ (26) ರನ್‌ ಬಾರಿಸಿ ತಂಡಕ್ಕೆ ಚೇತರಿಕೆ ಆಟವಾಡಿದರು. ಜಿತೇಶ್‌ ಶರ್ಮಾ (31) ರನ್‌ ಬಾರಿಸಿದರು.

ಆಲ್‌ರೌಂಡರ್‌ ಶಿವಂ ದುಬೆ 40 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ ಮೂಲಕ 60 ರನ್‌ ಕಲೆ ಹಾಕಿದರು. ರಿಂಕು ಸಿಂಗ್‌ (16) ರನ್‌ ಬಾರಿಸಿ ತಂಡದ ಗೆಲುವಿಗೆ ಕಾರಣರಾದರು. ಟೀಂ ಇಂಡಿಯಾ ಅಂತಿಮವಾಗಿ 17.3 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 159 ರನ್‌ ಕಲೆಹಾಕಿ ಗೆಲುವಿನ ನಗೆ ಬೀರಿತು.

ಅಫ್ಘನ್‌ ಪರ ಮುಜೀಬ್‌ ರಹಮನ್‌ 21/2, ಓಮರಾಜಿ 25/1 ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಶಿವಂ ದುಬೆ

andolanait

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

9 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

22 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

24 hours ago