ಕ್ರೀಡೆ

IND vs AFG 1st t20: ಅಫ್ಘಾನ್‌ ವಿರುದ್ಧ ಅಜೇಯ ಓಟ ಮುಂದುವರೆಸಿದ ಟೀಂ ಇಂಡಿಯಾ!

ಪಂಜಾಬ್‌: ಭಾರತ ಮತ್ತು ಅಫ್ಘಾನಿಸ್ತಾನ್‌ ನಡುವೆ ನಡೆಯುತ್ತಿರುವ ಮೊದಲ ಟಿ೨೦ ಪಂದ್ಯದಲ್ಲಿ, ಶಿವಂ ದುಬೆ ಅವರ ಆಲ್‌ರೌಂಡರ್‌ ಆಟದ ಫಲವಾಗಿ ಟೀಂ ಇಂಡಿಯಾ 6 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಮೂರು ಟಿ20 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುಂದಿದೆ.

ಇಲ್ಲಿನ ಪಂಜಾಬ್‌ ಅಸೋಸಿಯೇಷನ್‌ ಬಿಂದ್ರಾ ಸ್ಟೇಡಿಯಂ ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಅಫ್ಘನ್‌ ಮೇಲಿನ ತನ್ನ ಅಜೇಯ ಓಟ ಮುಂದುವರೆಸಿದೆ. ಈವರೆಗೆ ಟೀಂ ಇಂಡಿಯಾ ಮತ್ತು ಅಫ್ಘನ್‌ ತಂಡಗಳು 6 ಪಂದ್ಯಗಳನ್ನು ಆಡಿದ್ದು, ಭಾರತ 5 ರಲ್ಲಿ ಗೆದ್ದಿದೆ ಅಫ್ಘನ್‌ ಒಂದು ಪಂದ್ಯವನ್ನು ಗೆದ್ದಿಲ್ಲ. ಒಂದು ಪಂದ್ಯ ಟೈನಲ್ಲಿ ಅಂತ್ಯಗೊಂಡಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಅಫ್ಘಾನಿಸ್ತಾನ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 158 ರನ್‌ ಕಲೆಹಾಕಿತು. ಆರಂಭಿಕ ಆಟಗಾರರಾದ ಗುರ್ಬಾಜ್‌ (23) ಮತ್ತು ನಾಯಕ ಜದ್ರಾನ್‌(25) ಉತ್ತಮ ಆರಂಭ ಒದಗಿಸಿದರು. ಅಜ್ಮತ್ತುಲ್ಲಾ ಒಮರಾಜಿ (29) ರನ್‌ ಬಾರಿಸಿ ತಂಡಕ್ಕೆ ಚೇತರಿಕೆ ರನ್‌ ನೀಡಿದರು. ರಹಮತ್‌ ಕೇವಲ 3 ರನ್‌ ಗಳಿಸಿ ನಿರ್ಗಮಿಸಿದರು.

ಮಾಜಿ ನಾಯಕ ನಬಿ (42) ರನ್‌ ಬಾರಿಸಿ ತಂಡದ ಮೊತ್ತ 150 ರ ಗಡಿ ದಾಟಲು ಸಹಕರಿಸಿದರು. ನಜೀಬುಲ್ಲಾ ಜದ್ರಾನ್ (19) ಕೊನೆಯಲ್ಲಿ ಆರ್ಭಟಿಸಿದರು.

ಟೀಂ ಇಂಡಿಯಾ ಪರ ಮುಖೇಶ್‌ ಕುಮಾರ್‌ 33/2, ಅಕ್ಷರ್‌ ಪಟೇಲ್‌ 23/2 ಮತ್ತು ಶಿವಂ ದುಬೆ 9/1 ವಿಕೆಟ್‌ ಪಡೆದರು.

ಇನ್ನು ಅಫ್ಘನ್‌ ನೀಡಿದ 158 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಭಾರತ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ನಾಯಕ ರೋಹಿತ್‌ ಶರ್ಮಾ ಶೂನ್ಯಕ್ಕೆ ನಿರ್ಗಮಿಸಿದರು. ನಂತರ ಜೊತೆಯಾದ ಶುಭ್‌ಮನ್‌ ಗಿಲ್‌ (23) ಮತು ತಿಲಕ್‌ ವರ್ಮಾ (26) ರನ್‌ ಬಾರಿಸಿ ತಂಡಕ್ಕೆ ಚೇತರಿಕೆ ಆಟವಾಡಿದರು. ಜಿತೇಶ್‌ ಶರ್ಮಾ (31) ರನ್‌ ಬಾರಿಸಿದರು.

ಆಲ್‌ರೌಂಡರ್‌ ಶಿವಂ ದುಬೆ 40 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ ಮೂಲಕ 60 ರನ್‌ ಕಲೆ ಹಾಕಿದರು. ರಿಂಕು ಸಿಂಗ್‌ (16) ರನ್‌ ಬಾರಿಸಿ ತಂಡದ ಗೆಲುವಿಗೆ ಕಾರಣರಾದರು. ಟೀಂ ಇಂಡಿಯಾ ಅಂತಿಮವಾಗಿ 17.3 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 159 ರನ್‌ ಕಲೆಹಾಕಿ ಗೆಲುವಿನ ನಗೆ ಬೀರಿತು.

ಅಫ್ಘನ್‌ ಪರ ಮುಜೀಬ್‌ ರಹಮನ್‌ 21/2, ಓಮರಾಜಿ 25/1 ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಶಿವಂ ದುಬೆ

andolanait

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರು ವಾರದ ಅಂಕಣ | ಬದಲಾಗಿದೆ ರಾಜ್ಯ ರಾಜಕಾರಣದ ಸೂತ್ರ

ರಾಜ್ಯ ರಾಜಕಾರಣ ಮಗ್ಗಲು ಬದಲಿಸಿದೆ. ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಅವರು ಕೆಳಗಿಳಿದು ಡಿ.ಕೆ.ಶಿವಕುಮಾರ್ ಬಂದು ಕೂರುವ ಬೆಳವಣಿಗೆಯೊಂದಿಗೆ ರಾಜ್ಯ ರಾಜಕಾರಣದ…

2 hours ago

ಸಂಪಾದಕೀಯ | ಡಿ.ಕೆ.ಶಿವಕುಮಾರ್‌ ಅವರ ಮುಂದಿದೆ ಸವಾಲುಗಳು

ಕರ್ನಾಟಕದ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಿ, ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ…

2 hours ago

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

19 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

22 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

1 day ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

1 day ago