ಕ್ರೀಡೆ

IND vs AFG 2nd T20| ಜೈಸ್ವಾಲ್‌-ದುಬೆ ಸ್ಫೋಟಕ ಬ್ಯಾಟಿಂಗ್‌: ಟೀಂ ಇಂಡಿಯಾಗೆ ಸರಣಿ ವಶ

ಇಂದೋರ್: ಆರಂಭಿಕ ದಾಂಡಿಗ ಯಶಸ್ವಿ ಜೈಸ್ವಾಲ್‌, ಶಿವಂ ದುಬೆ ಅವರ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ ಪ್ರವಾಸಿ ಆಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿತು.

ಆ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸತತ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿ ಕೈವಶಪಡಿಸಿಕೊಂಡಿತು.

ಇಂದೋರ್‌ನ ಹೋಳ್ಕರ್‌ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಫ್ಘಾನಿಸ್ತಾನ ನಿಗದಿತ ಓವರ್‌ನಲ್ಲಿ 172 ರನ್ ಕಲೆಹಾಕಿ ಸರ್ವಪತನ ಕಂಡಿತು. ಇದನ್ನು ಚೇಸ್‌ ಮಾಡಿದ ಭಾರತ ತಂಡ 15.4 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 173ರನ್‌ ಬಾರಿಸಿ ಗಲುವಿನ ನಗೆ ಬೀರಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆಫ್ಘಾನಿಸ್ತಾನ ಪರ ಗುರ್ಬಾಜ್ 14, ನಬಿ 57, ಮೊಹಮ್ಮದ್ ನಬಿ 14, ನಜಿಬುಲ್ಲಾ 23 ಹಾಗೂ ಮುಜಿಬ್ 21 ರನ್ ಗಳಿಸಿ ಔಟಾದರು.

ಟೀಂ ಇಂಡಿಯಾ ಪರ ಅರ್ಷದೀಪ್ ಸಿಂಗ್ 3, ರವಿ ಬಿಷ್ಣೋಯ್ ಮತ್ತು ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದರೆ ಶಿವಂ ದುಬೆ 1 ವಿಕೆಟ್ ಕಬಳಿಸಿದರು.

ಇನ್ನು ಆಫ್ಘಾನ್ ನೀಡಿದ 173 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಆರಂಭಿಕ ಆಘಾತ ಅನುಭವಿಸಿತು. ನಾಯಕ ರೋಹಿತ್ ಶರ್ಮಾ ಮತ್ತೊಂದು ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದರು. ಇನ್ನು ವಿರಾಟ್ ಕೊಹ್ಲಿ 29 ರನ್ ಬಾರಿಸಿ ನಿರ್ಗಮಿಸಿದರು. ಆದರೆ ಯುವ ಬ್ಯಾಟರ್‌ಗಳಾದ ಯಶಸ್ವಿ ಜೈಸ್ವಾಲ್ 68 ಹಾಗೂ ಶಿವಂ ದುಬೆ ಅಜೇಯ 63ರನ್‌ ನೆರವಿನಿಂದ ಟೀಂ ಇಂಡಿಯಾ 6 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು.

ಆಫ್ಘಾನ್ ಪರ ಕರೀಂ ಜನತ್ 2, ಫಾರೂಕಿ ಮತ್ತು ನವೀನ್ ಉಲ್ ಹಕ್ ತಲಾ 1 ವಿಕೆಟ್ ಪಡೆದರು.

ಪಂದ್ಯ ಶ್ರೇಷ್ಠ: ಅರ್ಶ್‌ದೀಪ್‌ ಸಿಂಗ್‌

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago