ಕ್ರೀಡೆ

IND vs AFG 2nd T20| ಜೈಸ್ವಾಲ್‌-ದುಬೆ ಸ್ಫೋಟಕ ಬ್ಯಾಟಿಂಗ್‌: ಟೀಂ ಇಂಡಿಯಾಗೆ ಸರಣಿ ವಶ

ಇಂದೋರ್: ಆರಂಭಿಕ ದಾಂಡಿಗ ಯಶಸ್ವಿ ಜೈಸ್ವಾಲ್‌, ಶಿವಂ ದುಬೆ ಅವರ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ ಪ್ರವಾಸಿ ಆಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿತು.

ಆ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸತತ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿ ಕೈವಶಪಡಿಸಿಕೊಂಡಿತು.

ಇಂದೋರ್‌ನ ಹೋಳ್ಕರ್‌ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಫ್ಘಾನಿಸ್ತಾನ ನಿಗದಿತ ಓವರ್‌ನಲ್ಲಿ 172 ರನ್ ಕಲೆಹಾಕಿ ಸರ್ವಪತನ ಕಂಡಿತು. ಇದನ್ನು ಚೇಸ್‌ ಮಾಡಿದ ಭಾರತ ತಂಡ 15.4 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 173ರನ್‌ ಬಾರಿಸಿ ಗಲುವಿನ ನಗೆ ಬೀರಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆಫ್ಘಾನಿಸ್ತಾನ ಪರ ಗುರ್ಬಾಜ್ 14, ನಬಿ 57, ಮೊಹಮ್ಮದ್ ನಬಿ 14, ನಜಿಬುಲ್ಲಾ 23 ಹಾಗೂ ಮುಜಿಬ್ 21 ರನ್ ಗಳಿಸಿ ಔಟಾದರು.

ಟೀಂ ಇಂಡಿಯಾ ಪರ ಅರ್ಷದೀಪ್ ಸಿಂಗ್ 3, ರವಿ ಬಿಷ್ಣೋಯ್ ಮತ್ತು ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದರೆ ಶಿವಂ ದುಬೆ 1 ವಿಕೆಟ್ ಕಬಳಿಸಿದರು.

ಇನ್ನು ಆಫ್ಘಾನ್ ನೀಡಿದ 173 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಆರಂಭಿಕ ಆಘಾತ ಅನುಭವಿಸಿತು. ನಾಯಕ ರೋಹಿತ್ ಶರ್ಮಾ ಮತ್ತೊಂದು ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದರು. ಇನ್ನು ವಿರಾಟ್ ಕೊಹ್ಲಿ 29 ರನ್ ಬಾರಿಸಿ ನಿರ್ಗಮಿಸಿದರು. ಆದರೆ ಯುವ ಬ್ಯಾಟರ್‌ಗಳಾದ ಯಶಸ್ವಿ ಜೈಸ್ವಾಲ್ 68 ಹಾಗೂ ಶಿವಂ ದುಬೆ ಅಜೇಯ 63ರನ್‌ ನೆರವಿನಿಂದ ಟೀಂ ಇಂಡಿಯಾ 6 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು.

ಆಫ್ಘಾನ್ ಪರ ಕರೀಂ ಜನತ್ 2, ಫಾರೂಕಿ ಮತ್ತು ನವೀನ್ ಉಲ್ ಹಕ್ ತಲಾ 1 ವಿಕೆಟ್ ಪಡೆದರು.

ಪಂದ್ಯ ಶ್ರೇಷ್ಠ: ಅರ್ಶ್‌ದೀಪ್‌ ಸಿಂಗ್‌

andolanait

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

9 mins ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

2 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

3 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

3 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

3 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

3 hours ago