ಇಂದೋರ್: ಆರಂಭಿಕ ದಾಂಡಿಗ ಯಶಸ್ವಿ ಜೈಸ್ವಾಲ್, ಶಿವಂ ದುಬೆ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಪ್ರವಾಸಿ ಆಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ಗಳ ಅಂತರದ ಗೆಲುವು ದಾಖಲಿಸಿತು.
ಆ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸತತ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿ ಕೈವಶಪಡಿಸಿಕೊಂಡಿತು.
ಇಂದೋರ್ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಫ್ಘಾನಿಸ್ತಾನ ನಿಗದಿತ ಓವರ್ನಲ್ಲಿ 172 ರನ್ ಕಲೆಹಾಕಿ ಸರ್ವಪತನ ಕಂಡಿತು. ಇದನ್ನು ಚೇಸ್ ಮಾಡಿದ ಭಾರತ ತಂಡ 15.4 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 173ರನ್ ಬಾರಿಸಿ ಗಲುವಿನ ನಗೆ ಬೀರಿತು.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ ಪರ ಗುರ್ಬಾಜ್ 14, ನಬಿ 57, ಮೊಹಮ್ಮದ್ ನಬಿ 14, ನಜಿಬುಲ್ಲಾ 23 ಹಾಗೂ ಮುಜಿಬ್ 21 ರನ್ ಗಳಿಸಿ ಔಟಾದರು.
ಟೀಂ ಇಂಡಿಯಾ ಪರ ಅರ್ಷದೀಪ್ ಸಿಂಗ್ 3, ರವಿ ಬಿಷ್ಣೋಯ್ ಮತ್ತು ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದರೆ ಶಿವಂ ದುಬೆ 1 ವಿಕೆಟ್ ಕಬಳಿಸಿದರು.
ಇನ್ನು ಆಫ್ಘಾನ್ ನೀಡಿದ 173 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಆರಂಭಿಕ ಆಘಾತ ಅನುಭವಿಸಿತು. ನಾಯಕ ರೋಹಿತ್ ಶರ್ಮಾ ಮತ್ತೊಂದು ಇನ್ನಿಂಗ್ಸ್ನಲ್ಲಿ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದರು. ಇನ್ನು ವಿರಾಟ್ ಕೊಹ್ಲಿ 29 ರನ್ ಬಾರಿಸಿ ನಿರ್ಗಮಿಸಿದರು. ಆದರೆ ಯುವ ಬ್ಯಾಟರ್ಗಳಾದ ಯಶಸ್ವಿ ಜೈಸ್ವಾಲ್ 68 ಹಾಗೂ ಶಿವಂ ದುಬೆ ಅಜೇಯ 63ರನ್ ನೆರವಿನಿಂದ ಟೀಂ ಇಂಡಿಯಾ 6 ವಿಕೆಟ್ಗಳ ಅಂತರದಿಂದ ಗೆದ್ದು ಬೀಗಿತು.
ಆಫ್ಘಾನ್ ಪರ ಕರೀಂ ಜನತ್ 2, ಫಾರೂಕಿ ಮತ್ತು ನವೀನ್ ಉಲ್ ಹಕ್ ತಲಾ 1 ವಿಕೆಟ್ ಪಡೆದರು.
ಪಂದ್ಯ ಶ್ರೇಷ್ಠ: ಅರ್ಶ್ದೀಪ್ ಸಿಂಗ್
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…
ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ…
ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…
ಕ್ಯಾರಕಾಸ್ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…
ಪ್ರೊ.ಬಿ.ಜಯಪ್ರಕಾಶ್ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…