ಕ್ರೀಡೆ

ಅಂತಿಮ ಎಸೆತದಲ್ಲಿ ರಿಂಕು ಬಾರಿಸಿದ ಸಿಕ್ಸರ್‌ ಯಾಕೆ ಕೌಂಟ್‌ ಆಗಲಿಲ್ಲ? ಇಲ್ಲಿದೆ ಮಾಹಿತಿ

ನಿನ್ನೆ ( ನವೆಂಬರ್‌ 23 ) ವಿಶಾಖಪಟ್ಟಣದ ವೈಎಸ್‌ ರಾಜಶೇಖರ ರೆಡ್ಡಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್‌ ಇಂಡಿಯಾ 2 ವಿಕೆಟ್‌ಗಳ ರೋಚಕ ಜಯವನ್ನು ಸಾಧಿಸಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ತಂಡ ಸ್ಟೀವನ್‌ ಸ್ಮಿತ್‌ ಅವರ ಅರ್ಧಶತಕ ಹಾಗೂ ಜೋಶ್‌ ಇಂಗ್ಲಿಸ್‌ ಅವರ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 208 ರನ್‌ ಗಳಿಸಿ ಭಾರತಕ್ಕೆ ಗೆಲ್ಲಲು 209 ರನ್‌ಗಳ ಬೃಹತ್‌ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್‌ ಇಂಡಿಯಾ 19.5 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 209 ರನ್‌ ಕಲೆಹಾಕಿ ಗೆಲುವನ್ನು ಕಂಡು ಸರಣಿಯಲ್ಲಿ ಶುಭಾರಂಭ ಮಾಡಿತು.

ತಂಡದ ಪರ ಇಶಾನ್‌ ಕಿಶನ್‌ 39 ಎಸೆತಗಳಲ್ಲಿ 58 ರನ್‌ ಬಾರಿಸಿದರೆ, ನಾಯಕ ಸೂರ್ಯಕುಮಾರ್‌ ಯಾದವ್‌ 42 ಎಸೆತಗಳಲ್ಲಿ 80 ರನ್‌ ಬಾರಿಸಿದರು. ಅಂತಿಮ ಹಂತದಲ್ಲಿ ಅಬ್ಬರಿಸಿದ ರಿಂಕು ಸಿಂಗ್‌ 14 ಎಸೆತಗಳಲ್ಲಿ 4 ಬೌಂಡರಿ ಸಹಿತ ಅಜೇಯ 22 ರನ್‌ ಬಾರಿಸಿ ತಂಡದ ಗೆಲುವಿಗೆ ಕಾಣಿಕೆ ನೀಡಿದರು.

ಇನ್ನು ಭಾರತಕ್ಕೆ ಗೆಲ್ಲಲು ಅಂತಿಮ ಎಸೆತದಲ್ಲಿ 1 ರನ್‌ ಬಾರಿಸಬೇಕಾದ ಅಗತ್ಯವಿತ್ತು. ಈ ಸಂದರ್ಭದಲ್ಲಿ ರಿಂಕು ಸಿಂಗ್‌ ಬ್ಯಾಟಿಂಗ್‌ ಮಾಡುತ್ತಿದ್ದರು ಹಾಗೂ ಸೀನ್‌ ಅಬಟ್‌ ಬೌಲಿಂಗ್‌ ಮಾಡಿದರು. ಸೀನ್‌ ಅಬಟ್‌ ಎಸೆದ ಅಂತಿಮ ಎಸೆತಕ್ಕೆ ರಿಂಕು ಸಿಂಗ್‌ ಭರ್ಜರಿ ಸಿಕ್ಸರ್‌ ಬಾರಿಸುವ ಮೂಲಕ ತಮ್ಮ ಹಳೆಯ ಐಪಿಎಲ್‌ ಪಂದ್ಯಗಳನ್ನು ನೆನಪಿಸಿಬಿಟ್ಟರು. ಆದರೆ ರಿಂಕು ಸಿಂಗ್‌ ಬಾರಿಸಿದ ಈ ಸಿಕ್ಸರ್‌ ಗಣನೆಗೆ ಬಾರಲೇ ಇಲ್ಲ. ಏಕೆಂದರೆ ಸೀನ್‌ ಅಬಟ್‌ ಎಸೆದ ಆ ಎಸೆತ ನೋ ಬಾಲ್‌ ಆಗಿತ್ತು. ಗೆಲುವಿಗೆ ಒಂದೇ ರನ್‌ ಅಗತ್ಯವಿದ್ದ ಕಾರಣ ನೋ ಬಾಲ್‌ ಮೊದಲು ಗಣನೆಗೆ ಬಂದು ಭಾರತ ಜಯ ಸಾಧಿಸಿತು ಹಾಗೂ ರಿಂಕು ಸಿಂಗ್‌ ಬಾರಿಸಿದ ಸಿಕ್ಸರ್‌ ರನ್‌ ಕೌಂಟ್‌ಗೆ ಅರ್ಹತೆ ಪಡೆಯಲಿಲ್ಲ. ಆದರೂ ಸಹ ರಿಂಕು ಸಿಂಗ್‌ ಬಾರಿಸಿದ ಆ ಸಿಕ್ಸರ್‌ ಕ್ರಿಕೆಟ್‌ ಅಭಿಮಾನಿಗಳ ಫೇವರಿಟ್‌ ಆಗಿದೆ.

andolana

Recent Posts

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…

14 mins ago

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

48 mins ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

5 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

5 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

5 hours ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

5 hours ago