ಕ್ರೀಡೆ

ಅಂತಿಮ ಎಸೆತದಲ್ಲಿ ರಿಂಕು ಬಾರಿಸಿದ ಸಿಕ್ಸರ್‌ ಯಾಕೆ ಕೌಂಟ್‌ ಆಗಲಿಲ್ಲ? ಇಲ್ಲಿದೆ ಮಾಹಿತಿ

ನಿನ್ನೆ ( ನವೆಂಬರ್‌ 23 ) ವಿಶಾಖಪಟ್ಟಣದ ವೈಎಸ್‌ ರಾಜಶೇಖರ ರೆಡ್ಡಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್‌ ಇಂಡಿಯಾ 2 ವಿಕೆಟ್‌ಗಳ ರೋಚಕ ಜಯವನ್ನು ಸಾಧಿಸಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ತಂಡ ಸ್ಟೀವನ್‌ ಸ್ಮಿತ್‌ ಅವರ ಅರ್ಧಶತಕ ಹಾಗೂ ಜೋಶ್‌ ಇಂಗ್ಲಿಸ್‌ ಅವರ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 208 ರನ್‌ ಗಳಿಸಿ ಭಾರತಕ್ಕೆ ಗೆಲ್ಲಲು 209 ರನ್‌ಗಳ ಬೃಹತ್‌ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್‌ ಇಂಡಿಯಾ 19.5 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 209 ರನ್‌ ಕಲೆಹಾಕಿ ಗೆಲುವನ್ನು ಕಂಡು ಸರಣಿಯಲ್ಲಿ ಶುಭಾರಂಭ ಮಾಡಿತು.

ತಂಡದ ಪರ ಇಶಾನ್‌ ಕಿಶನ್‌ 39 ಎಸೆತಗಳಲ್ಲಿ 58 ರನ್‌ ಬಾರಿಸಿದರೆ, ನಾಯಕ ಸೂರ್ಯಕುಮಾರ್‌ ಯಾದವ್‌ 42 ಎಸೆತಗಳಲ್ಲಿ 80 ರನ್‌ ಬಾರಿಸಿದರು. ಅಂತಿಮ ಹಂತದಲ್ಲಿ ಅಬ್ಬರಿಸಿದ ರಿಂಕು ಸಿಂಗ್‌ 14 ಎಸೆತಗಳಲ್ಲಿ 4 ಬೌಂಡರಿ ಸಹಿತ ಅಜೇಯ 22 ರನ್‌ ಬಾರಿಸಿ ತಂಡದ ಗೆಲುವಿಗೆ ಕಾಣಿಕೆ ನೀಡಿದರು.

ಇನ್ನು ಭಾರತಕ್ಕೆ ಗೆಲ್ಲಲು ಅಂತಿಮ ಎಸೆತದಲ್ಲಿ 1 ರನ್‌ ಬಾರಿಸಬೇಕಾದ ಅಗತ್ಯವಿತ್ತು. ಈ ಸಂದರ್ಭದಲ್ಲಿ ರಿಂಕು ಸಿಂಗ್‌ ಬ್ಯಾಟಿಂಗ್‌ ಮಾಡುತ್ತಿದ್ದರು ಹಾಗೂ ಸೀನ್‌ ಅಬಟ್‌ ಬೌಲಿಂಗ್‌ ಮಾಡಿದರು. ಸೀನ್‌ ಅಬಟ್‌ ಎಸೆದ ಅಂತಿಮ ಎಸೆತಕ್ಕೆ ರಿಂಕು ಸಿಂಗ್‌ ಭರ್ಜರಿ ಸಿಕ್ಸರ್‌ ಬಾರಿಸುವ ಮೂಲಕ ತಮ್ಮ ಹಳೆಯ ಐಪಿಎಲ್‌ ಪಂದ್ಯಗಳನ್ನು ನೆನಪಿಸಿಬಿಟ್ಟರು. ಆದರೆ ರಿಂಕು ಸಿಂಗ್‌ ಬಾರಿಸಿದ ಈ ಸಿಕ್ಸರ್‌ ಗಣನೆಗೆ ಬಾರಲೇ ಇಲ್ಲ. ಏಕೆಂದರೆ ಸೀನ್‌ ಅಬಟ್‌ ಎಸೆದ ಆ ಎಸೆತ ನೋ ಬಾಲ್‌ ಆಗಿತ್ತು. ಗೆಲುವಿಗೆ ಒಂದೇ ರನ್‌ ಅಗತ್ಯವಿದ್ದ ಕಾರಣ ನೋ ಬಾಲ್‌ ಮೊದಲು ಗಣನೆಗೆ ಬಂದು ಭಾರತ ಜಯ ಸಾಧಿಸಿತು ಹಾಗೂ ರಿಂಕು ಸಿಂಗ್‌ ಬಾರಿಸಿದ ಸಿಕ್ಸರ್‌ ರನ್‌ ಕೌಂಟ್‌ಗೆ ಅರ್ಹತೆ ಪಡೆಯಲಿಲ್ಲ. ಆದರೂ ಸಹ ರಿಂಕು ಸಿಂಗ್‌ ಬಾರಿಸಿದ ಆ ಸಿಕ್ಸರ್‌ ಕ್ರಿಕೆಟ್‌ ಅಭಿಮಾನಿಗಳ ಫೇವರಿಟ್‌ ಆಗಿದೆ.

andolana

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

3 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

4 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

4 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

4 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago