ಕ್ರೀಡೆ

ಅಂತಿಮ ಎಸೆತದಲ್ಲಿ ರಿಂಕು ಬಾರಿಸಿದ ಸಿಕ್ಸರ್‌ ಯಾಕೆ ಕೌಂಟ್‌ ಆಗಲಿಲ್ಲ? ಇಲ್ಲಿದೆ ಮಾಹಿತಿ

ನಿನ್ನೆ ( ನವೆಂಬರ್‌ 23 ) ವಿಶಾಖಪಟ್ಟಣದ ವೈಎಸ್‌ ರಾಜಶೇಖರ ರೆಡ್ಡಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್‌ ಇಂಡಿಯಾ 2 ವಿಕೆಟ್‌ಗಳ ರೋಚಕ ಜಯವನ್ನು ಸಾಧಿಸಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ತಂಡ ಸ್ಟೀವನ್‌ ಸ್ಮಿತ್‌ ಅವರ ಅರ್ಧಶತಕ ಹಾಗೂ ಜೋಶ್‌ ಇಂಗ್ಲಿಸ್‌ ಅವರ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 208 ರನ್‌ ಗಳಿಸಿ ಭಾರತಕ್ಕೆ ಗೆಲ್ಲಲು 209 ರನ್‌ಗಳ ಬೃಹತ್‌ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್‌ ಇಂಡಿಯಾ 19.5 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 209 ರನ್‌ ಕಲೆಹಾಕಿ ಗೆಲುವನ್ನು ಕಂಡು ಸರಣಿಯಲ್ಲಿ ಶುಭಾರಂಭ ಮಾಡಿತು.

ತಂಡದ ಪರ ಇಶಾನ್‌ ಕಿಶನ್‌ 39 ಎಸೆತಗಳಲ್ಲಿ 58 ರನ್‌ ಬಾರಿಸಿದರೆ, ನಾಯಕ ಸೂರ್ಯಕುಮಾರ್‌ ಯಾದವ್‌ 42 ಎಸೆತಗಳಲ್ಲಿ 80 ರನ್‌ ಬಾರಿಸಿದರು. ಅಂತಿಮ ಹಂತದಲ್ಲಿ ಅಬ್ಬರಿಸಿದ ರಿಂಕು ಸಿಂಗ್‌ 14 ಎಸೆತಗಳಲ್ಲಿ 4 ಬೌಂಡರಿ ಸಹಿತ ಅಜೇಯ 22 ರನ್‌ ಬಾರಿಸಿ ತಂಡದ ಗೆಲುವಿಗೆ ಕಾಣಿಕೆ ನೀಡಿದರು.

ಇನ್ನು ಭಾರತಕ್ಕೆ ಗೆಲ್ಲಲು ಅಂತಿಮ ಎಸೆತದಲ್ಲಿ 1 ರನ್‌ ಬಾರಿಸಬೇಕಾದ ಅಗತ್ಯವಿತ್ತು. ಈ ಸಂದರ್ಭದಲ್ಲಿ ರಿಂಕು ಸಿಂಗ್‌ ಬ್ಯಾಟಿಂಗ್‌ ಮಾಡುತ್ತಿದ್ದರು ಹಾಗೂ ಸೀನ್‌ ಅಬಟ್‌ ಬೌಲಿಂಗ್‌ ಮಾಡಿದರು. ಸೀನ್‌ ಅಬಟ್‌ ಎಸೆದ ಅಂತಿಮ ಎಸೆತಕ್ಕೆ ರಿಂಕು ಸಿಂಗ್‌ ಭರ್ಜರಿ ಸಿಕ್ಸರ್‌ ಬಾರಿಸುವ ಮೂಲಕ ತಮ್ಮ ಹಳೆಯ ಐಪಿಎಲ್‌ ಪಂದ್ಯಗಳನ್ನು ನೆನಪಿಸಿಬಿಟ್ಟರು. ಆದರೆ ರಿಂಕು ಸಿಂಗ್‌ ಬಾರಿಸಿದ ಈ ಸಿಕ್ಸರ್‌ ಗಣನೆಗೆ ಬಾರಲೇ ಇಲ್ಲ. ಏಕೆಂದರೆ ಸೀನ್‌ ಅಬಟ್‌ ಎಸೆದ ಆ ಎಸೆತ ನೋ ಬಾಲ್‌ ಆಗಿತ್ತು. ಗೆಲುವಿಗೆ ಒಂದೇ ರನ್‌ ಅಗತ್ಯವಿದ್ದ ಕಾರಣ ನೋ ಬಾಲ್‌ ಮೊದಲು ಗಣನೆಗೆ ಬಂದು ಭಾರತ ಜಯ ಸಾಧಿಸಿತು ಹಾಗೂ ರಿಂಕು ಸಿಂಗ್‌ ಬಾರಿಸಿದ ಸಿಕ್ಸರ್‌ ರನ್‌ ಕೌಂಟ್‌ಗೆ ಅರ್ಹತೆ ಪಡೆಯಲಿಲ್ಲ. ಆದರೂ ಸಹ ರಿಂಕು ಸಿಂಗ್‌ ಬಾರಿಸಿದ ಆ ಸಿಕ್ಸರ್‌ ಕ್ರಿಕೆಟ್‌ ಅಭಿಮಾನಿಗಳ ಫೇವರಿಟ್‌ ಆಗಿದೆ.

andolana

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

2 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

2 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

2 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

2 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

11 hours ago