ನಿನ್ನೆ ( ನವೆಂಬರ್ 23 ) ವಿಶಾಖಪಟ್ಟಣದ ವೈಎಸ್ ರಾಜಶೇಖರ ರೆಡ್ಡಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 2 ವಿಕೆಟ್ಗಳ ರೋಚಕ ಜಯವನ್ನು ಸಾಧಿಸಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ಸ್ಟೀವನ್ ಸ್ಮಿತ್ ಅವರ ಅರ್ಧಶತಕ ಹಾಗೂ ಜೋಶ್ ಇಂಗ್ಲಿಸ್ ಅವರ ಶತಕದ ನೆರವಿನಿಂದ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿ ಭಾರತಕ್ಕೆ ಗೆಲ್ಲಲು 209 ರನ್ಗಳ ಬೃಹತ್ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 19.5 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 209 ರನ್ ಕಲೆಹಾಕಿ ಗೆಲುವನ್ನು ಕಂಡು ಸರಣಿಯಲ್ಲಿ ಶುಭಾರಂಭ ಮಾಡಿತು.
ತಂಡದ ಪರ ಇಶಾನ್ ಕಿಶನ್ 39 ಎಸೆತಗಳಲ್ಲಿ 58 ರನ್ ಬಾರಿಸಿದರೆ, ನಾಯಕ ಸೂರ್ಯಕುಮಾರ್ ಯಾದವ್ 42 ಎಸೆತಗಳಲ್ಲಿ 80 ರನ್ ಬಾರಿಸಿದರು. ಅಂತಿಮ ಹಂತದಲ್ಲಿ ಅಬ್ಬರಿಸಿದ ರಿಂಕು ಸಿಂಗ್ 14 ಎಸೆತಗಳಲ್ಲಿ 4 ಬೌಂಡರಿ ಸಹಿತ ಅಜೇಯ 22 ರನ್ ಬಾರಿಸಿ ತಂಡದ ಗೆಲುವಿಗೆ ಕಾಣಿಕೆ ನೀಡಿದರು.
ಇನ್ನು ಭಾರತಕ್ಕೆ ಗೆಲ್ಲಲು ಅಂತಿಮ ಎಸೆತದಲ್ಲಿ 1 ರನ್ ಬಾರಿಸಬೇಕಾದ ಅಗತ್ಯವಿತ್ತು. ಈ ಸಂದರ್ಭದಲ್ಲಿ ರಿಂಕು ಸಿಂಗ್ ಬ್ಯಾಟಿಂಗ್ ಮಾಡುತ್ತಿದ್ದರು ಹಾಗೂ ಸೀನ್ ಅಬಟ್ ಬೌಲಿಂಗ್ ಮಾಡಿದರು. ಸೀನ್ ಅಬಟ್ ಎಸೆದ ಅಂತಿಮ ಎಸೆತಕ್ಕೆ ರಿಂಕು ಸಿಂಗ್ ಭರ್ಜರಿ ಸಿಕ್ಸರ್ ಬಾರಿಸುವ ಮೂಲಕ ತಮ್ಮ ಹಳೆಯ ಐಪಿಎಲ್ ಪಂದ್ಯಗಳನ್ನು ನೆನಪಿಸಿಬಿಟ್ಟರು. ಆದರೆ ರಿಂಕು ಸಿಂಗ್ ಬಾರಿಸಿದ ಈ ಸಿಕ್ಸರ್ ಗಣನೆಗೆ ಬಾರಲೇ ಇಲ್ಲ. ಏಕೆಂದರೆ ಸೀನ್ ಅಬಟ್ ಎಸೆದ ಆ ಎಸೆತ ನೋ ಬಾಲ್ ಆಗಿತ್ತು. ಗೆಲುವಿಗೆ ಒಂದೇ ರನ್ ಅಗತ್ಯವಿದ್ದ ಕಾರಣ ನೋ ಬಾಲ್ ಮೊದಲು ಗಣನೆಗೆ ಬಂದು ಭಾರತ ಜಯ ಸಾಧಿಸಿತು ಹಾಗೂ ರಿಂಕು ಸಿಂಗ್ ಬಾರಿಸಿದ ಸಿಕ್ಸರ್ ರನ್ ಕೌಂಟ್ಗೆ ಅರ್ಹತೆ ಪಡೆಯಲಿಲ್ಲ. ಆದರೂ ಸಹ ರಿಂಕು ಸಿಂಗ್ ಬಾರಿಸಿದ ಆ ಸಿಕ್ಸರ್ ಕ್ರಿಕೆಟ್ ಅಭಿಮಾನಿಗಳ ಫೇವರಿಟ್ ಆಗಿದೆ.
ಪ್ರಸಾದ್ ಲಕ್ಕೂರು ಅಂತಿಮ ಹಂತದಲ್ಲಿ ಮೇಲ್ಸೇತುವೆ, ಲಿಫ್ಟ್, ಎಸ್ಕಲೇಟರ್ ಅಳವಡಿಕೆ; ಆಧುನೀಕರಣಗೊಂಡ ನಿಲ್ದಾಣ ೨ ತಿಂಗಳಲ್ಲಿ ಸೇವೆಗೆ ಚಾಮರಾಜನಗರ: ಗಡಿ…
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…