ಕ್ರೀಡೆ

IND vs AUS 2ನೇ ಟಿ20: ಭಾರತಕ್ಕೆ 44 ರನ್‌ ಗೆಲುವು

ತಿರುವನಂತಪುರಂ : ಜೈಸ್ವಾಲ್‌, ಗಾಯಕ್ವಾಡ್‌ ಮತ್ತು ಇಶಾನ್‌ ಕಿಸಾನ್‌ ಆವರ ಅಮೊಘ ಅರ್ಧ ಶತಕ ಮತ್ತು ರವಿ ಬಿಷ್ನೋಯಿ ಹಾಗೂ ಪ್ರಸಿದ್ದ್‌ ಕೃಷ್ಣ ಅವರ ಬೌಲಿಂಗ್‌ ದಾಳಿಗೆ ನಲುಗಿದ ಮ್ಯಾಥ್ಯೂ ವೇಡ್‌ ಪಡೆ ಸತತ ಎರಡನೇ ಸೋಲಿನ ಕಹಿ ಉಂಡಿತು.

ಇಲ್ಲಿನ ಗ್ರೀನ್‌ಫೀಲ್ಡ್‌ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ 20 ಓವರ್‌ ಬ್ಯಾಟಿಂಗ್‌ ಮಾಡಿ 4 ವಿಕೆಟ್‌ ಕಳೆದಕೊಂಡು 235 ರನ್‌ಗಳ ಬೃಹತ್‌ ಗುರಿಯನ್ನು ನೀಡಿತ್ತು, ಈ ಮೊತ್ತ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ 191 ರನ್‌ ಕಲೆಹಾಕಿ, 44 ರನ್‌ಗಳ ಹೀನಾಯ ಸೋಲು ಅನುಭವಿಸಿತು. ಭಾರತ ತಂಡ ಗೆಲುವು ಪಡೆಯುವ ಮೂಲಕ ಸೀರಿಸ್‌ನಲ್ಲಿ 2-0 ಸತತ ಎರಡನೇ ಗೆಲುವು ದಾಖಲಿಸಿತು.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಸೂರ್ಯಕುಮಾರ್‌ ಬಳಗಕ್ಕೆ ಭರ್ಜರಿ ಆರಂಭ ದೊರೆಯಿತು. ಆಸೀಸ್‌ ಬೌಲರ್‌ಗಳನ್ನು ಮನಬಂದಂತೆ ಚಚ್ಚಿದ ಯಶಸ್ವಿ ಜೈಸ್ವಾಲ್‌ ಮತ್ತು ಋತುರಾಜ್‌ ಗಾಯಕ್ವಾಡ್‌ ಪವರ್‌ ಪ್ಲೇ ಒಳಗಡೆಯೇ 77 ರನ್‌ ಬಾರಿಸಿದರು. ಕೇವಲ ೩೫ ಎಸೆತ ಎದುರಿಸಿದ ಜೈಸ್ವಾಲ್‌ 9 ಬೌಂಡರಿ ಹಾಗೂ 2 ಸಿಕ್ಸರ್‌ ಮೂಲಕ 53 ರನ್‌ ಗಳಿಸಿದರೇ, ಇತ್ತ 43 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ ಮೂಲಕ 58 ರನ್‌ ಕಲೆಹಾಕಿದರು. ಪವರ್‌ ಪ್ಲೇ ಒಳಗಡೆಯೇ ಅರ್ಧ ಶತಕ ಮಾಡಿ ನಿರ್ಗಮಿಸಿದ ಜೈಸ್ವಾಲ್‌ ಅವರ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ ಇಶಾನ್‌ ಅವರು 32 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್‌ ಮೂಲಕ 52 ರನ್‌ ಬಾರಿಸಿದರು.

ಕೊನೆಯಲ್ಲಿ ಆಕ್ರಮಣಕಾರಿ ಆಟವಾಡಿದ ರಿಂಕು ಸಿಂಗ್‌ ಅವರು ಕೇವಲ 9 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್‌ ಮೂಲಕ 31 ರನ್‌ ಗಳಿಸಿದರು.

ಆಸೀಸ್‌ ಪರ ನಥನ್‌ ಏಲಿಸ್‌3, ಸ್ಟೋಯ್ನಿಸ್‌ 1 ವಿಕೆಟ್‌ ಪಡೆದರು.

235 ರನ್‌ಗ ಬೃಹತ್‌ ಮೊತ್ತ ಬೆನ್ನಟ್ಟಿದ ಆಸೀಸ್‌ ತಂಡಕ್ಕೆ ನಿರೀಕ್ಷಿತ ಆರಂಭ ದೊರೆಯಲಿಲ್ಲ, ತಂಡ 35 ರನ್‌ ಗಳಿಸುವಷ್ಟರಲ್ಲೇ ಮ್ಯಾಥ್ಯೂ ಶಾರ್ಟ್‌ (19) ಪ್ರಸಿದ್ಧ್‌ ಅವರಿಗೆ ವಿಕೆಟ್‌ ಒಪ್ಪಿಸಿ ಹೊರ ನಡೆದರು. ಸ್ಟೀವ್‌ ಸ್ಮತ್‌ (19), ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಜೋಶ್‌ ಇಂಗ್ಲಿಸ್‌ ಕೇವಲ 1 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಗ್ಲೇನ್‌ ಮ್ಯಾಕ್ಸ್‌ವೆಲ್‌ (12), ಬೇಗನೇ ವಿಕೆಟ್‌ ಒಪ್ಪಿಸಿದರು.

ನಂತರ ಜೊತೆಯಾದ ಸ್ಟೋಯ್ನಿಸ್‌(45) ಮತ್ತು ಟಿಮ್‌ ಡೆವಿಡ್‌(37) ಜೊತೆಗೂಡಿ 81 ರನ್‌ಗಳ ಜೊತೆಯಾಟವಾಡಿ ತಂಡಕ್ಕೆ ಚೇತರಿಕೆ ನೀಡಿದರು. ಕೊನೆಯಲ್ಲಿ ನಾಯಕ ಮ್ಯಾಥ್ಯೂ ವೇಡ್‌ ಅವರು 23 ಎಸೆತಗಳಲ್ಲಿ 43 ರನ್‌ ಗಳಿಸಿ ಕೊನೆಯಲ್ಲಿ ಹೋರಾಟ ನಡೆಸಿದರು. ಬೇರಾರಿಂದಲೂ ದಿಟ್ಟ ಹೋರಾಟ ನಡೆಯಲಿಲ್ಲ. ಅಂತಿಮವಾಗಿ ಆಸೀಸ್‌ 191 ರನ್‌ ಗಳಿಸಿ 44 ರನ್‌ಗಳಿಂದ ಸೋಲೊಪ್ಪಿಕೊಂಡಿತು.

ಭಾರತ ಪರ ಪ್ರಸಿದ್ಧ್‌ ಕೃಷ್ಣ ಮತ್ತು ರವಿ ಬಿಷ್ನೋಯಿ ತಲಾ 3 ವಿಕೆಟ್‌ ಪಡೆದರು.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

2 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

2 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

2 hours ago