ಕ್ರೀಡೆ

IND vs AUS: ರೋಹಿತ್ ಬಳಗಕ್ಕೆ 270 ರನ್ ಗುರಿ ನೀಡಿದ ಆಸ್ಟ್ರೇಲಿಯಾ

ಚೆನ್ನೈ: ಇಲ್ಲಿನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 49 ಓವರ್‌ಗಳಲ್ಲಿ 269 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿದೆ.

ಈ ಮೂಲಕ ಸರಣಿ ಗೆಲ್ಲಲು ರೋಹಿತ್ ಶರ್ಮಾ ಬಳಗವು 270 ರನ್ ಗಳಿಸಬೇಕಿದೆ.

ಆಸ್ಟ್ರೇಲಿಯಾ ಪರ ಮಿಚೆಲ್ ಮಾರ್ಷ್ 47, ಅಲೆಕ್ಸ್ ಕ್ಯಾರಿ 38, ಟ್ರಾವಿಸ್ ಹೆಡ್ 33, ಮಾರ್ನಸ್ ಲಾಬುಶೇನ್ 28, ಸೀನ್ ಅಬಾಟ್ 26, ಮಾರ್ಕಸ್ ಸ್ಟೋಯಿನಿಸ್ 25, ಆಶ್ಚನ್ ಅಗರ್ 17, ಮಿಚೆಲ್ ಸ್ಟಾರ್ಸ್ 10 ಹಾಗೂ ಆ್ಯಡಂ ಜಾಂಪಾ ಅಜೇಯ 10 ರನ್ ಗಳಿಸಿದರು.

ನಾಯಕ ಸ್ಟೀವ್ ಮಿತ್ ಖಾತೆ ತೆರೆಯುವಲ್ಲಿ ವಿಫಲರಾದರು. ಭಾರತದ ಪರ ಹಾರ್ದಿಕ್ ಪಾಂಡ್ಯ ಹಾಗೂ ಕುಲದೀಪ್ ಯಾದವ್ ತಲಾ ಮೂರು ಮತ್ತು ಮೊಹಮ್ಮದ್ ಸಿರಾಜ್ ಹಾಗೂ ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್‌ಗಳನ್ನು ಗಳಿಸಿದರು.

ಮಾರ್ಷ್ ಹಾಗೂ ಹೆಡ್ ಮೊದಲ ವಿಕೆಟ್‌ಗೆ 68 ರನ್ ಗಳಿಸಿದರು. ಈ ಹಂತದಲ್ಲಿ ಹಾರ್ದಿಕ್ ತಿರುಗೇಟು ನೀಡಿದರು. ಪರಿಣಾಮ ಆಸ್ಟ್ರೇಲಿಯಾ 138 ರನ್ನಿಗೆ ಐದು ವಿಕೆಟ್ ಕಳೆದುಕೊಂಡಿತು. ಆದರೆ ಕೆಳ ಕ್ರಮಾಂಕದಲ್ಲಿ ಆಸೀಸ್ ಆಟಗಾರರ ಉಪಯುಕ್ತ ಬ್ಯಾಟಿಂಗ್ ನೆರವಿನಿಂದ ಸ್ಪರ್ಧಾತ್ಮಕ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಯಿತು.

ಮೊದಲ ಏಕದಿನ ಪಂದ್ಯದಲ್ಲಿ ಭಾರತ ಜಯಿಸಿದ್ದರೆ ಎರಡನೇ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿತ್ತು. ಇತ್ತಂಡಗಳ ಪಾಲಿಗೆ ಈ ಪಂದ್ಯ ನಿರ್ಣಾಯಕವೆನಿಸಿದೆ.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

13 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

13 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

14 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

14 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

15 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

16 hours ago