ಚೆನ್ನೈ: ಇಲ್ಲಿನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 49 ಓವರ್ಗಳಲ್ಲಿ 269 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿದೆ.
ಈ ಮೂಲಕ ಸರಣಿ ಗೆಲ್ಲಲು ರೋಹಿತ್ ಶರ್ಮಾ ಬಳಗವು 270 ರನ್ ಗಳಿಸಬೇಕಿದೆ.
ಆಸ್ಟ್ರೇಲಿಯಾ ಪರ ಮಿಚೆಲ್ ಮಾರ್ಷ್ 47, ಅಲೆಕ್ಸ್ ಕ್ಯಾರಿ 38, ಟ್ರಾವಿಸ್ ಹೆಡ್ 33, ಮಾರ್ನಸ್ ಲಾಬುಶೇನ್ 28, ಸೀನ್ ಅಬಾಟ್ 26, ಮಾರ್ಕಸ್ ಸ್ಟೋಯಿನಿಸ್ 25, ಆಶ್ಚನ್ ಅಗರ್ 17, ಮಿಚೆಲ್ ಸ್ಟಾರ್ಸ್ 10 ಹಾಗೂ ಆ್ಯಡಂ ಜಾಂಪಾ ಅಜೇಯ 10 ರನ್ ಗಳಿಸಿದರು.
ನಾಯಕ ಸ್ಟೀವ್ ಮಿತ್ ಖಾತೆ ತೆರೆಯುವಲ್ಲಿ ವಿಫಲರಾದರು. ಭಾರತದ ಪರ ಹಾರ್ದಿಕ್ ಪಾಂಡ್ಯ ಹಾಗೂ ಕುಲದೀಪ್ ಯಾದವ್ ತಲಾ ಮೂರು ಮತ್ತು ಮೊಹಮ್ಮದ್ ಸಿರಾಜ್ ಹಾಗೂ ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್ಗಳನ್ನು ಗಳಿಸಿದರು.
ಮಾರ್ಷ್ ಹಾಗೂ ಹೆಡ್ ಮೊದಲ ವಿಕೆಟ್ಗೆ 68 ರನ್ ಗಳಿಸಿದರು. ಈ ಹಂತದಲ್ಲಿ ಹಾರ್ದಿಕ್ ತಿರುಗೇಟು ನೀಡಿದರು. ಪರಿಣಾಮ ಆಸ್ಟ್ರೇಲಿಯಾ 138 ರನ್ನಿಗೆ ಐದು ವಿಕೆಟ್ ಕಳೆದುಕೊಂಡಿತು. ಆದರೆ ಕೆಳ ಕ್ರಮಾಂಕದಲ್ಲಿ ಆಸೀಸ್ ಆಟಗಾರರ ಉಪಯುಕ್ತ ಬ್ಯಾಟಿಂಗ್ ನೆರವಿನಿಂದ ಸ್ಪರ್ಧಾತ್ಮಕ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಯಿತು.
ಮೊದಲ ಏಕದಿನ ಪಂದ್ಯದಲ್ಲಿ ಭಾರತ ಜಯಿಸಿದ್ದರೆ ಎರಡನೇ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿತ್ತು. ಇತ್ತಂಡಗಳ ಪಾಲಿಗೆ ಈ ಪಂದ್ಯ ನಿರ್ಣಾಯಕವೆನಿಸಿದೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…