ಕ್ರೀಡೆ

IND vs AUS: ಮುಗ್ಗರಿಸಿದ ಭಾರತ; ಆಸ್ಟ್ರೇಲಿಯಾಕ್ಕೆ 10 ವಿಕೆಟ್ ಗೆಲುವು

ವಿಶಾಖಪಟ್ಟಣ: ಇಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

ಈ ಮೂಲಕ ರೋಹಿತ್ ಶರ್ಮಾ ಬಳಗ ಮುಖಭಂಗಕ್ಕೊಳಗಾಗಿದೆ. ಅತ್ತ ಸ್ಟೀವ್ ಸ್ಮಿತ್ ಬಳಗವು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1ರ ಅಂತರದ ಸಮಬಲ ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತ, 26 ಓವರ್‌ಗಳಲ್ಲಿ 117 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.

ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ, ಇನ್ನೂ 234 ಎಸೆತಗಳು ಬಾಕಿ ಉಳಿದಿರುವಂತೆಯೇ 11 ಓವರ್‌ಗಳಲ್ಲಿ ಗುರಿ ತಲುಪಿತು. ಮಿಚೆಲ್ ಮಾರ್ಷ್ (ಅಜೇಯ 66, ಎಸೆತ 36 , ಸಿಕ್ಸರ್ 6, ಬೌಂಡರಿ 6) ಹಾಗೂ ಟ್ರಾವಿಸ್ ಹೆಡ್ (ಅಜೇಯ 51, ಎಸೆತ 30, ಬೌಂಡರಿ 10) ಬಿರುಸಿನ ಅರ್ಧಶತಕ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಸರಣಿಯ ಅಂತಿಮ ಪಂದ್ಯವು ಮಾರ್ಚ್ 22ರಂದು ಚೆನ್ನೈಯಲ್ಲಿ ನಡೆಯಲಿದೆ.

ಸ್ಟಾರ್ಕ್ ದಾಳಿಗೆ ತತ್ತರಿಸಿದ ಭಾರತ…
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತದ ಆರಂಭ ಉತ್ತಮವಾಗಿರಲಿಲ್ಲ. 32 ರನ್ ಗಳಿಸುವಷ್ಟರಲ್ಲಿ ಆರಂಭಿಕರಾದ ಶುಭಮನ್ ಗಿಲ್ (0) ಹಾಗೂ ನಾಯಕ ರೋಹಿತ್ ಶರ್ಮಾ (13) ವಿಕೆಟ್‌ಗಳು ನಷ್ಟವಾದವು.

ಅತಿಥೇಯರನ್ನು ಮಿಚೆಲ್ ಮಾರಕವಾಗಿ ಕಾಡಿದರು. ಪರಿಣಾಮ 49 ರನ್‌ಗೆ ಐದು ವಿಕೆಟ್ ಕಳೆದುಕೊಂಡಿತು.

ಸೂರ್ಯಕುಮಾರ್ ಯಾದವ್ ಸತತ ಎರಡನೇ ಬಾರಿಗೆ ಗೋಲ್ಡನ್ ಡೆಕ್ ಔಟ್ ಆದರು. ಕೆ.ಎಲ್. ರಾಹುಲ್ (9) ಹಾಗೂ ಹಾರ್ದಿಕ್ ಪಾಂಡ್ಯ (1) ಪ್ರಭಾವಿ ಎನಿಸಲಿಲ್ಲ.

31 ರನ್ ಗಳಿಸಿದ ವಿರಾಟ್ ಕೊಹ್ಲಿ ಭರವಸೆ ಹುಟ್ಟು ಹಾಕಿದರೂ ಅವರ ಓಟಕ್ಕೆ ನಥನ್ ಎಲ್ಲಿಸ್ ತಡೆ ಒಡ್ಡಿದರು. ಇಲ್ಲಿಂದ ಬಳಿಕ ಮಗದೊಮ್ಮೆ ಕುಸಿತ ಕಂಡ ಭಾರತ 26 ಓವರ್‌ಗಳಲ್ಲೇ ಆಲೌಟ್ ಆಯಿತು.

ಕೆಳ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ 29 ರನ್ ಗಳಿಸಿ ಔಟಾಗದೆ ಉಳಿದರು. ರವೀಂದ್ರ ಜಡೇಜ 16, ಕುಲದೀಪ್ ಯಾದವ್ 4 ರನ್ ಗಳಿಸಿ ಔಟ್ ಔದರು. ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್‌ಗೆ ಖಾತೆ ತೆರೆಯಲಾಗಲಿಲ್ಲ.

ಆಸೀಸ್ ಪರ 53 ರನ್ ತೆತ್ತ ಮಿಚೆಲ್ ಸ್ಟಾರ್ಕ್ ಐದು ವಿಕೆಟ್ ಕಬಳಿಸಿದರು. ಸೀನ್ ಅಬಾಟ್ ಮೂರು ಮತ್ತು ನಥನ್ ಎಲ್ಲಿಸ್ ಎರಡು ವಿಕೆಟ್ ಗಳಿಸಿದರು.

andolanait

Recent Posts

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಅಕ್ರಮ ತಡೆಗೆ ಹದ್ದಿನ ಕಣ್ಣು

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್‌ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ…

29 seconds ago

ರಾಮನಗರ| ಜಿಮ್‌ ಟ್ರೇನರ್‌ಗೆ ಪ್ರೇಯಸಿಯಿಂದಲೇ ಚಾಕು ಇರಿತ

ರಾಮನಗರ: ಜಿಮ್‌ ಟ್ರೇನರ್‌ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ…

13 mins ago

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ರಿಲೀಫ್‌

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ಬಗ್‌ ರಿಲೀಫ್‌ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು…

29 mins ago

ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ…

38 mins ago

ಹೈಕೋರ್ಟ್‌ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಕಲಬುರ್ಗಿ…

50 mins ago

ಶಾಸಕ ವಿನಯ್‌ ಕುಲಕರ್ಣಿಗೆ ಬಿಗ್‌ ರಿಲೀಫ್:‌ ಜಾಮೀನು ಮಂಜೂರು

ನವದೆಹಲಿ: ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ ಜಾಮೀನು…

60 mins ago