ಕ್ರೀಡೆ

IND vs AUS: ಮುಗ್ಗರಿಸಿದ ಭಾರತ; ಆಸ್ಟ್ರೇಲಿಯಾಕ್ಕೆ 10 ವಿಕೆಟ್ ಗೆಲುವು

ವಿಶಾಖಪಟ್ಟಣ: ಇಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

ಈ ಮೂಲಕ ರೋಹಿತ್ ಶರ್ಮಾ ಬಳಗ ಮುಖಭಂಗಕ್ಕೊಳಗಾಗಿದೆ. ಅತ್ತ ಸ್ಟೀವ್ ಸ್ಮಿತ್ ಬಳಗವು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1ರ ಅಂತರದ ಸಮಬಲ ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತ, 26 ಓವರ್‌ಗಳಲ್ಲಿ 117 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.

ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ, ಇನ್ನೂ 234 ಎಸೆತಗಳು ಬಾಕಿ ಉಳಿದಿರುವಂತೆಯೇ 11 ಓವರ್‌ಗಳಲ್ಲಿ ಗುರಿ ತಲುಪಿತು. ಮಿಚೆಲ್ ಮಾರ್ಷ್ (ಅಜೇಯ 66, ಎಸೆತ 36 , ಸಿಕ್ಸರ್ 6, ಬೌಂಡರಿ 6) ಹಾಗೂ ಟ್ರಾವಿಸ್ ಹೆಡ್ (ಅಜೇಯ 51, ಎಸೆತ 30, ಬೌಂಡರಿ 10) ಬಿರುಸಿನ ಅರ್ಧಶತಕ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಸರಣಿಯ ಅಂತಿಮ ಪಂದ್ಯವು ಮಾರ್ಚ್ 22ರಂದು ಚೆನ್ನೈಯಲ್ಲಿ ನಡೆಯಲಿದೆ.

ಸ್ಟಾರ್ಕ್ ದಾಳಿಗೆ ತತ್ತರಿಸಿದ ಭಾರತ…
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತದ ಆರಂಭ ಉತ್ತಮವಾಗಿರಲಿಲ್ಲ. 32 ರನ್ ಗಳಿಸುವಷ್ಟರಲ್ಲಿ ಆರಂಭಿಕರಾದ ಶುಭಮನ್ ಗಿಲ್ (0) ಹಾಗೂ ನಾಯಕ ರೋಹಿತ್ ಶರ್ಮಾ (13) ವಿಕೆಟ್‌ಗಳು ನಷ್ಟವಾದವು.

ಅತಿಥೇಯರನ್ನು ಮಿಚೆಲ್ ಮಾರಕವಾಗಿ ಕಾಡಿದರು. ಪರಿಣಾಮ 49 ರನ್‌ಗೆ ಐದು ವಿಕೆಟ್ ಕಳೆದುಕೊಂಡಿತು.

ಸೂರ್ಯಕುಮಾರ್ ಯಾದವ್ ಸತತ ಎರಡನೇ ಬಾರಿಗೆ ಗೋಲ್ಡನ್ ಡೆಕ್ ಔಟ್ ಆದರು. ಕೆ.ಎಲ್. ರಾಹುಲ್ (9) ಹಾಗೂ ಹಾರ್ದಿಕ್ ಪಾಂಡ್ಯ (1) ಪ್ರಭಾವಿ ಎನಿಸಲಿಲ್ಲ.

31 ರನ್ ಗಳಿಸಿದ ವಿರಾಟ್ ಕೊಹ್ಲಿ ಭರವಸೆ ಹುಟ್ಟು ಹಾಕಿದರೂ ಅವರ ಓಟಕ್ಕೆ ನಥನ್ ಎಲ್ಲಿಸ್ ತಡೆ ಒಡ್ಡಿದರು. ಇಲ್ಲಿಂದ ಬಳಿಕ ಮಗದೊಮ್ಮೆ ಕುಸಿತ ಕಂಡ ಭಾರತ 26 ಓವರ್‌ಗಳಲ್ಲೇ ಆಲೌಟ್ ಆಯಿತು.

ಕೆಳ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ 29 ರನ್ ಗಳಿಸಿ ಔಟಾಗದೆ ಉಳಿದರು. ರವೀಂದ್ರ ಜಡೇಜ 16, ಕುಲದೀಪ್ ಯಾದವ್ 4 ರನ್ ಗಳಿಸಿ ಔಟ್ ಔದರು. ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್‌ಗೆ ಖಾತೆ ತೆರೆಯಲಾಗಲಿಲ್ಲ.

ಆಸೀಸ್ ಪರ 53 ರನ್ ತೆತ್ತ ಮಿಚೆಲ್ ಸ್ಟಾರ್ಕ್ ಐದು ವಿಕೆಟ್ ಕಬಳಿಸಿದರು. ಸೀನ್ ಅಬಾಟ್ ಮೂರು ಮತ್ತು ನಥನ್ ಎಲ್ಲಿಸ್ ಎರಡು ವಿಕೆಟ್ ಗಳಿಸಿದರು.

andolanait

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

6 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

6 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

7 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

7 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

7 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

7 hours ago