ಕ್ರೀಡೆ

IND vs AUS: ಮುಗ್ಗರಿಸಿದ ಭಾರತ; ಆಸ್ಟ್ರೇಲಿಯಾಕ್ಕೆ 10 ವಿಕೆಟ್ ಗೆಲುವು

ವಿಶಾಖಪಟ್ಟಣ: ಇಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

ಈ ಮೂಲಕ ರೋಹಿತ್ ಶರ್ಮಾ ಬಳಗ ಮುಖಭಂಗಕ್ಕೊಳಗಾಗಿದೆ. ಅತ್ತ ಸ್ಟೀವ್ ಸ್ಮಿತ್ ಬಳಗವು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1ರ ಅಂತರದ ಸಮಬಲ ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತ, 26 ಓವರ್‌ಗಳಲ್ಲಿ 117 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.

ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ, ಇನ್ನೂ 234 ಎಸೆತಗಳು ಬಾಕಿ ಉಳಿದಿರುವಂತೆಯೇ 11 ಓವರ್‌ಗಳಲ್ಲಿ ಗುರಿ ತಲುಪಿತು. ಮಿಚೆಲ್ ಮಾರ್ಷ್ (ಅಜೇಯ 66, ಎಸೆತ 36 , ಸಿಕ್ಸರ್ 6, ಬೌಂಡರಿ 6) ಹಾಗೂ ಟ್ರಾವಿಸ್ ಹೆಡ್ (ಅಜೇಯ 51, ಎಸೆತ 30, ಬೌಂಡರಿ 10) ಬಿರುಸಿನ ಅರ್ಧಶತಕ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಸರಣಿಯ ಅಂತಿಮ ಪಂದ್ಯವು ಮಾರ್ಚ್ 22ರಂದು ಚೆನ್ನೈಯಲ್ಲಿ ನಡೆಯಲಿದೆ.

ಸ್ಟಾರ್ಕ್ ದಾಳಿಗೆ ತತ್ತರಿಸಿದ ಭಾರತ…
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತದ ಆರಂಭ ಉತ್ತಮವಾಗಿರಲಿಲ್ಲ. 32 ರನ್ ಗಳಿಸುವಷ್ಟರಲ್ಲಿ ಆರಂಭಿಕರಾದ ಶುಭಮನ್ ಗಿಲ್ (0) ಹಾಗೂ ನಾಯಕ ರೋಹಿತ್ ಶರ್ಮಾ (13) ವಿಕೆಟ್‌ಗಳು ನಷ್ಟವಾದವು.

ಅತಿಥೇಯರನ್ನು ಮಿಚೆಲ್ ಮಾರಕವಾಗಿ ಕಾಡಿದರು. ಪರಿಣಾಮ 49 ರನ್‌ಗೆ ಐದು ವಿಕೆಟ್ ಕಳೆದುಕೊಂಡಿತು.

ಸೂರ್ಯಕುಮಾರ್ ಯಾದವ್ ಸತತ ಎರಡನೇ ಬಾರಿಗೆ ಗೋಲ್ಡನ್ ಡೆಕ್ ಔಟ್ ಆದರು. ಕೆ.ಎಲ್. ರಾಹುಲ್ (9) ಹಾಗೂ ಹಾರ್ದಿಕ್ ಪಾಂಡ್ಯ (1) ಪ್ರಭಾವಿ ಎನಿಸಲಿಲ್ಲ.

31 ರನ್ ಗಳಿಸಿದ ವಿರಾಟ್ ಕೊಹ್ಲಿ ಭರವಸೆ ಹುಟ್ಟು ಹಾಕಿದರೂ ಅವರ ಓಟಕ್ಕೆ ನಥನ್ ಎಲ್ಲಿಸ್ ತಡೆ ಒಡ್ಡಿದರು. ಇಲ್ಲಿಂದ ಬಳಿಕ ಮಗದೊಮ್ಮೆ ಕುಸಿತ ಕಂಡ ಭಾರತ 26 ಓವರ್‌ಗಳಲ್ಲೇ ಆಲೌಟ್ ಆಯಿತು.

ಕೆಳ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ 29 ರನ್ ಗಳಿಸಿ ಔಟಾಗದೆ ಉಳಿದರು. ರವೀಂದ್ರ ಜಡೇಜ 16, ಕುಲದೀಪ್ ಯಾದವ್ 4 ರನ್ ಗಳಿಸಿ ಔಟ್ ಔದರು. ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್‌ಗೆ ಖಾತೆ ತೆರೆಯಲಾಗಲಿಲ್ಲ.

ಆಸೀಸ್ ಪರ 53 ರನ್ ತೆತ್ತ ಮಿಚೆಲ್ ಸ್ಟಾರ್ಕ್ ಐದು ವಿಕೆಟ್ ಕಬಳಿಸಿದರು. ಸೀನ್ ಅಬಾಟ್ ಮೂರು ಮತ್ತು ನಥನ್ ಎಲ್ಲಿಸ್ ಎರಡು ವಿಕೆಟ್ ಗಳಿಸಿದರು.

andolanait

Recent Posts

ಮುಂದುವರೆದ ಕಾಡಾನೆ ಹಾವಳಿ : ಒಂಟಿ ಸಲಗ ದಾಳಿಗೆ ಓರ್ವ ಬಲಿ

ರಾಮನಗರ : ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಒಂಟಿ ಸಲಗ ದಾಳಿದ ಓರ್ವ ವ್ಯಕ್ತಿ…

7 mins ago

ಟ್ರಂಪ್‌ ಗುರಿಯಾಗಿಸಿ ಗುಂಡಿನ ದಾಳಿಗೆ ಯತ್ನಿಸಿದ್ದು ಓರ್ವ ಶಿಕ್ಷಕ ! ಯಾರು ಈ ಥಾಮಸ್‌ ಅಲೆನ್‌

ವಾಷಿಂಗ್ಟನ್‌ : ವರದಿಗಾರರ ಔತಣಕೂಟದಲ್ಲಿ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿ ಅತಿಥಿಯಾಗಿ ಹೋಟೆಲ್‌ ಪ್ರವೇಶ ಮಾಡಿದ್ದ ವಿಚಾರ ಪ್ರಾಥಮಿಕ ತನಿಖೆಯಿಂದ…

43 mins ago

ಹನೂರು | ಬಾರದ ಮಳೆ ; ಮಳೆಗಾಗಿ ಮಕ್ಕಳ ವಿಶೇಷ ಪ್ರಾರ್ಥನೆ

ಹನೂರು : ಜನ ಜಾನುವಾರುಗಳಿಗೂ ಕುಡಿಯುವ ನೀರಿನ ತೊಂದರೆ ಉಂಟಾಗಿರುವ ಪರಿಣಾಮ ಗ್ರಾಮದಲ್ಲಿರುವ ಮಕ್ಕಳೆಲ್ಲರೂ ಸೇರಿ ಮಳೆರಾಯನಿಗೆ ಪ್ರಾರ್ಥನೆ ಮಾಡಿರುವಂತಹ…

1 hour ago

ಸ್ವಿಸ್‌ ವಿಮಾನದಲ್ಲಿ ಬೆಂಕಿ, 6 ಮಂದಿಗೆ ಗಾಯ ; ತಪ್ಪಿದ ದುರಂತ

ನವದೆಹಲಿ : ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ…

2 hours ago

ಅಕ್ರಮ ಭೂ ಪರಿಹಾರ ವಿತರಣೆ ಸಾಬೀತು : ವಸೂಲಿಗೆ ಕ್ರಮವಹಿಸಲು ಆದೇಶ

ಮಂಡ್ಯ : ತಾಲೂಕಿನ ಬೂದನೂರು ಗ್ರಾಪಂ ವ್ಯಾಪ್ತಿಯ ಬ್ಯಾಂಕ್ ಕಾಲೋನಿ ಪಂಚಾಯತಿ ರಸ್ತೆಗೆ 41 ಲಕ್ಷ ರೂ ಅಕ್ರಮ ಪರಿಹಾರ…

2 hours ago

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ : ಡಿ.ಕೆ.ಶಿವಕುಮಾರ್‌

ಬೆಂಗಳೂರು : ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…

2 hours ago