ಕ್ರೀಡೆ

IND vs AUS: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸರಣಿ ಸೋಲಿನ ಮುಖಭಂಗ

ಚೆನ್ನೈ: ಆಸ್ಟ್ರೇಲಿಯಾ ವಿರುದ್ದ ಚೆನ್ನೈಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಸೋಲು ಅನುಭವಿಸಿದ ಭಾರತ ತವರಿನಲ್ಲಿ ಸರಣಿ ಸೋಲಿನ ಮುಖಭಂಗಕ್ಕೊಳಗಾಗಿದೆ.

ಅಂತಿಮ ಏಕದಿನದಲ್ಲಿ 21 ರನ್ ಅಂತರದ ಗೆಲುವು ದಾಖಲಿಸಿದ ಸ್ಟೀವ್ ಸ್ಮಿತ್ ನಾಯಕತ್ವದ ಕಾಂಗರೂ ಪಡೆ 2-1ರ ಅಂತರದಲ್ಲಿ ಸರಣಿ ಗೆಲುವು ದಾಖಲಿಸಿದೆ.

ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 49 ಓವರ್‌ಗಳಲ್ಲಿ 269 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.

ಬಳಿಕ ಗುರಿ ಬೆನ್ನಟ್ಟಿದ ಭಾರತ, ವಿರಾಟ್ ಕೊಹ್ಲಿ (54) ಅರ್ಧಶತಕದ ಹೊರತಾಗಿಯೂ 49.1 ಓವರ್‌ಗಳಲ್ಲಿ 248 ರನ್‌ಗಳಿಗೆ ಆಲೌಟ್ ಆಯಿತು.

72 ಎಸೆತಗಳನ್ನು ಎದುರಿಸಿದ ಕೊಹ್ಲಿ ಎರಡು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 54 ರನ್ ಗಳಿಸಿದರು.

ಹಾರ್ದಿಕ್ ಪಾಂಡ್ಯ ಆಲ್‌ರೌಂಡ್ ಪ್ರದರ್ಶನ ನೀಡಿದರೂ (40 ರನ್ ಹಾಗೂ 3 ವಿಕೆಟ್) ಯಾವುದೇ ಪ್ರಯೋಜನ ಆಗಲಿಲ್ಲ.

ಶುಭಮನ್ ಗಿಲ್ 37, ಕೆ.ಎಲ್. ರಾಹುಲ್ 32, ನಾಯಕ ರೋಹಿತ್ ಶರ್ಮಾ 30 ರನ್ ಗಳಿಸಿದರು.

ಸೂರ್ಯಕುಮಾರ್ ಕುಮಾರ್ ಸತತ ಮೂರನೇ ಸಲವೂ ಗೋಲ್ಡನ್ ಡಕ್ ಔಟ್ ಆದರು.

ಆಸ್ಟ್ರೇಲಿಯಾದ ಪರ ಆ್ಯಡಂ ಜಾಂಪಾ ನಾಲ್ಕು ಹಾಗೂ ಅಶ್ಟನ್ ಅಗರ್ ಎರಡು ವಿಕೆಟ್ ಕಬಳಿಸಿದರು.

ಈ ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ, ಯಾವುದೇ ಬ್ಯಾಟರ್ ಅರ್ಧಶತಕ ಗಳಿಸದ ಹೊರತಾಗಿಯೂ ಸವಾಲಿನ ಮೊತ್ತ ಪೇರಿಸಲು ಯಶಸ್ವಿಯಾಯಿತು.

ಮಿಚೆಲ್ ಮಾರ್ಷ್ 47, ಅಲೆಕ್ಸ್ ಕ್ಯಾರಿ 38, ಟ್ರಾವಿಸ್ ಹೆಡ್ 33, ಮಾರ್ನಸ್ ಲಾಬುಶೇನ್ 28, ಸೀನ್ ಅಬಾಟ್ 26, ಮಾರ್ಕಸ್ ಸ್ಟೋಯಿನಿಸ್ 25, ಆಶ್ಟನ್ ಅಗರ್ 17, ಮಿಚೆಲ್ ಸ್ಟಾರ್ಸ್ 10 ಹಾಗೂ ಆ್ಯಡಂ ಜಾಂಪಾ ಅಜೇಯ 10 ರನ್ ಗಳಿಸಿದರು.

ನಾಯಕ ಸ್ಟೀವ್ ಮಿತ್ ಖಾತೆ ತೆರೆಯುವಲ್ಲಿ ವಿಫಲರಾದರು. ಭಾರತದ ಪರ ಹಾರ್ದಿಕ್ ಪಾಂಡ್ಯ ಹಾಗೂ ಕುಲದೀಪ್ ಯಾದವ್ ತಲಾ ಮೂರು ಮತ್ತು ಮೊಹಮ್ಮದ್ ಸಿರಾಜ್ ಹಾಗೂ ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್‌ಗಳನ್ನು ಗಳಿಸಿದರು.

ಮೊದಲ ಏಕದಿನ ಪಂದ್ಯದಲ್ಲಿ ಭಾರತ ಜಯಿಸಿದ್ದರೆ ಅಂತಿಮ ಎರಡು ಪಂದ್ಯಗಳಲ್ಲಿ ಸೋಲಿನ ಮುಖಭಂಗಕ್ಕೊಳಗಾಗಿದೆ.

andolanait

Recent Posts

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

31 mins ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

35 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

41 mins ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

53 mins ago

ಶತಮಾನದ ದೇವರಾಜ ಶಾಲೆಯ ಶೋಕಗೀತೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…

56 mins ago

ಅಭದ್ರತೆ ಹಾದಿಯಲಿ ವಿಕಸಿತ ಭಾರತದತ್ತ ‘ಆನಿ (ಆಮೆ) ನಡಿಗೆ’

ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…

1 hour ago