ಕ್ರೀಡೆ

IND vs AUS: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸರಣಿ ಸೋಲಿನ ಮುಖಭಂಗ

ಚೆನ್ನೈ: ಆಸ್ಟ್ರೇಲಿಯಾ ವಿರುದ್ದ ಚೆನ್ನೈಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಸೋಲು ಅನುಭವಿಸಿದ ಭಾರತ ತವರಿನಲ್ಲಿ ಸರಣಿ ಸೋಲಿನ ಮುಖಭಂಗಕ್ಕೊಳಗಾಗಿದೆ.

ಅಂತಿಮ ಏಕದಿನದಲ್ಲಿ 21 ರನ್ ಅಂತರದ ಗೆಲುವು ದಾಖಲಿಸಿದ ಸ್ಟೀವ್ ಸ್ಮಿತ್ ನಾಯಕತ್ವದ ಕಾಂಗರೂ ಪಡೆ 2-1ರ ಅಂತರದಲ್ಲಿ ಸರಣಿ ಗೆಲುವು ದಾಖಲಿಸಿದೆ.

ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 49 ಓವರ್‌ಗಳಲ್ಲಿ 269 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.

ಬಳಿಕ ಗುರಿ ಬೆನ್ನಟ್ಟಿದ ಭಾರತ, ವಿರಾಟ್ ಕೊಹ್ಲಿ (54) ಅರ್ಧಶತಕದ ಹೊರತಾಗಿಯೂ 49.1 ಓವರ್‌ಗಳಲ್ಲಿ 248 ರನ್‌ಗಳಿಗೆ ಆಲೌಟ್ ಆಯಿತು.

72 ಎಸೆತಗಳನ್ನು ಎದುರಿಸಿದ ಕೊಹ್ಲಿ ಎರಡು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 54 ರನ್ ಗಳಿಸಿದರು.

ಹಾರ್ದಿಕ್ ಪಾಂಡ್ಯ ಆಲ್‌ರೌಂಡ್ ಪ್ರದರ್ಶನ ನೀಡಿದರೂ (40 ರನ್ ಹಾಗೂ 3 ವಿಕೆಟ್) ಯಾವುದೇ ಪ್ರಯೋಜನ ಆಗಲಿಲ್ಲ.

ಶುಭಮನ್ ಗಿಲ್ 37, ಕೆ.ಎಲ್. ರಾಹುಲ್ 32, ನಾಯಕ ರೋಹಿತ್ ಶರ್ಮಾ 30 ರನ್ ಗಳಿಸಿದರು.

ಸೂರ್ಯಕುಮಾರ್ ಕುಮಾರ್ ಸತತ ಮೂರನೇ ಸಲವೂ ಗೋಲ್ಡನ್ ಡಕ್ ಔಟ್ ಆದರು.

ಆಸ್ಟ್ರೇಲಿಯಾದ ಪರ ಆ್ಯಡಂ ಜಾಂಪಾ ನಾಲ್ಕು ಹಾಗೂ ಅಶ್ಟನ್ ಅಗರ್ ಎರಡು ವಿಕೆಟ್ ಕಬಳಿಸಿದರು.

ಈ ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ, ಯಾವುದೇ ಬ್ಯಾಟರ್ ಅರ್ಧಶತಕ ಗಳಿಸದ ಹೊರತಾಗಿಯೂ ಸವಾಲಿನ ಮೊತ್ತ ಪೇರಿಸಲು ಯಶಸ್ವಿಯಾಯಿತು.

ಮಿಚೆಲ್ ಮಾರ್ಷ್ 47, ಅಲೆಕ್ಸ್ ಕ್ಯಾರಿ 38, ಟ್ರಾವಿಸ್ ಹೆಡ್ 33, ಮಾರ್ನಸ್ ಲಾಬುಶೇನ್ 28, ಸೀನ್ ಅಬಾಟ್ 26, ಮಾರ್ಕಸ್ ಸ್ಟೋಯಿನಿಸ್ 25, ಆಶ್ಟನ್ ಅಗರ್ 17, ಮಿಚೆಲ್ ಸ್ಟಾರ್ಸ್ 10 ಹಾಗೂ ಆ್ಯಡಂ ಜಾಂಪಾ ಅಜೇಯ 10 ರನ್ ಗಳಿಸಿದರು.

ನಾಯಕ ಸ್ಟೀವ್ ಮಿತ್ ಖಾತೆ ತೆರೆಯುವಲ್ಲಿ ವಿಫಲರಾದರು. ಭಾರತದ ಪರ ಹಾರ್ದಿಕ್ ಪಾಂಡ್ಯ ಹಾಗೂ ಕುಲದೀಪ್ ಯಾದವ್ ತಲಾ ಮೂರು ಮತ್ತು ಮೊಹಮ್ಮದ್ ಸಿರಾಜ್ ಹಾಗೂ ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್‌ಗಳನ್ನು ಗಳಿಸಿದರು.

ಮೊದಲ ಏಕದಿನ ಪಂದ್ಯದಲ್ಲಿ ಭಾರತ ಜಯಿಸಿದ್ದರೆ ಅಂತಿಮ ಎರಡು ಪಂದ್ಯಗಳಲ್ಲಿ ಸೋಲಿನ ಮುಖಭಂಗಕ್ಕೊಳಗಾಗಿದೆ.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

2 hours ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

2 hours ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

2 hours ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

2 hours ago

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

2 hours ago

ದೇವನೂರಿಗೆ ಆಗಮಿಸಿದ ಪಂಪ

ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…

2 hours ago