ಕ್ರೀಡೆ

IND vs AUS: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸರಣಿ ಸೋಲಿನ ಮುಖಭಂಗ

ಚೆನ್ನೈ: ಆಸ್ಟ್ರೇಲಿಯಾ ವಿರುದ್ದ ಚೆನ್ನೈಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಸೋಲು ಅನುಭವಿಸಿದ ಭಾರತ ತವರಿನಲ್ಲಿ ಸರಣಿ ಸೋಲಿನ ಮುಖಭಂಗಕ್ಕೊಳಗಾಗಿದೆ.

ಅಂತಿಮ ಏಕದಿನದಲ್ಲಿ 21 ರನ್ ಅಂತರದ ಗೆಲುವು ದಾಖಲಿಸಿದ ಸ್ಟೀವ್ ಸ್ಮಿತ್ ನಾಯಕತ್ವದ ಕಾಂಗರೂ ಪಡೆ 2-1ರ ಅಂತರದಲ್ಲಿ ಸರಣಿ ಗೆಲುವು ದಾಖಲಿಸಿದೆ.

ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 49 ಓವರ್‌ಗಳಲ್ಲಿ 269 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.

ಬಳಿಕ ಗುರಿ ಬೆನ್ನಟ್ಟಿದ ಭಾರತ, ವಿರಾಟ್ ಕೊಹ್ಲಿ (54) ಅರ್ಧಶತಕದ ಹೊರತಾಗಿಯೂ 49.1 ಓವರ್‌ಗಳಲ್ಲಿ 248 ರನ್‌ಗಳಿಗೆ ಆಲೌಟ್ ಆಯಿತು.

72 ಎಸೆತಗಳನ್ನು ಎದುರಿಸಿದ ಕೊಹ್ಲಿ ಎರಡು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 54 ರನ್ ಗಳಿಸಿದರು.

ಹಾರ್ದಿಕ್ ಪಾಂಡ್ಯ ಆಲ್‌ರೌಂಡ್ ಪ್ರದರ್ಶನ ನೀಡಿದರೂ (40 ರನ್ ಹಾಗೂ 3 ವಿಕೆಟ್) ಯಾವುದೇ ಪ್ರಯೋಜನ ಆಗಲಿಲ್ಲ.

ಶುಭಮನ್ ಗಿಲ್ 37, ಕೆ.ಎಲ್. ರಾಹುಲ್ 32, ನಾಯಕ ರೋಹಿತ್ ಶರ್ಮಾ 30 ರನ್ ಗಳಿಸಿದರು.

ಸೂರ್ಯಕುಮಾರ್ ಕುಮಾರ್ ಸತತ ಮೂರನೇ ಸಲವೂ ಗೋಲ್ಡನ್ ಡಕ್ ಔಟ್ ಆದರು.

ಆಸ್ಟ್ರೇಲಿಯಾದ ಪರ ಆ್ಯಡಂ ಜಾಂಪಾ ನಾಲ್ಕು ಹಾಗೂ ಅಶ್ಟನ್ ಅಗರ್ ಎರಡು ವಿಕೆಟ್ ಕಬಳಿಸಿದರು.

ಈ ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ, ಯಾವುದೇ ಬ್ಯಾಟರ್ ಅರ್ಧಶತಕ ಗಳಿಸದ ಹೊರತಾಗಿಯೂ ಸವಾಲಿನ ಮೊತ್ತ ಪೇರಿಸಲು ಯಶಸ್ವಿಯಾಯಿತು.

ಮಿಚೆಲ್ ಮಾರ್ಷ್ 47, ಅಲೆಕ್ಸ್ ಕ್ಯಾರಿ 38, ಟ್ರಾವಿಸ್ ಹೆಡ್ 33, ಮಾರ್ನಸ್ ಲಾಬುಶೇನ್ 28, ಸೀನ್ ಅಬಾಟ್ 26, ಮಾರ್ಕಸ್ ಸ್ಟೋಯಿನಿಸ್ 25, ಆಶ್ಟನ್ ಅಗರ್ 17, ಮಿಚೆಲ್ ಸ್ಟಾರ್ಸ್ 10 ಹಾಗೂ ಆ್ಯಡಂ ಜಾಂಪಾ ಅಜೇಯ 10 ರನ್ ಗಳಿಸಿದರು.

ನಾಯಕ ಸ್ಟೀವ್ ಮಿತ್ ಖಾತೆ ತೆರೆಯುವಲ್ಲಿ ವಿಫಲರಾದರು. ಭಾರತದ ಪರ ಹಾರ್ದಿಕ್ ಪಾಂಡ್ಯ ಹಾಗೂ ಕುಲದೀಪ್ ಯಾದವ್ ತಲಾ ಮೂರು ಮತ್ತು ಮೊಹಮ್ಮದ್ ಸಿರಾಜ್ ಹಾಗೂ ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್‌ಗಳನ್ನು ಗಳಿಸಿದರು.

ಮೊದಲ ಏಕದಿನ ಪಂದ್ಯದಲ್ಲಿ ಭಾರತ ಜಯಿಸಿದ್ದರೆ ಅಂತಿಮ ಎರಡು ಪಂದ್ಯಗಳಲ್ಲಿ ಸೋಲಿನ ಮುಖಭಂಗಕ್ಕೊಳಗಾಗಿದೆ.

andolanait

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago