ಢಾಕಾ: ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ನಾಯಕ ರೋಹಿತ್ ಶರ್ಮಾ ಅವರ ಎಡಗೈಗೆ ಗಾಯವಾಗಿದ್ದು, ಸ್ಕ್ಯಾನಿಂಗ್ಗಾಗಿ ಆಸ್ಪತ್ರೆಗೆ ತೆರಳಿದ್ದಾರೆ.
ಈ ಕುರಿತು ಬಿಸಿಸಿಐ ಟ್ವೀಟ್ನಲ್ಲಿ ತಿಳಿಸಿದೆ. ಶೇರ್ ಬಾಂಗ್ಲಾ ರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.
ಬಾಂಗ್ಲಾದೇಶ ಇನ್ನಿಂಗ್ಸ್ನ ಎರಡನೇ ಓವರ್ನಲ್ಲಿ ಮೊಹಮ್ಮದ್ ಸಿರಾಜ್ ಎಸೆದ ಚೆಂಡು ಬಾಂಗ್ಲಾ ಆರಂಭಿಕ ಬ್ಯಾಟರ್ ಅನಾಮುಲ್ ಹಕ್ ಅವರ ಬ್ಯಾಟ್ಗೆ ಸವರಿ ಸ್ಲಿಪ್ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ರೋಹಿತ್ ಶರ್ಮಾ ಅವರತ್ತ ರಭಸದಿಂದ ಸಾಗಿತ್ತು. ಆದರೆ ಕ್ಯಾಚ್ ಅನ್ನು ಕೈಚೆಲ್ಲಿದ ರೋಹಿತ್, ಎಡಗೈಗೆ ಗಾಯಮಾಡಿಕೊಂಡಿದ್ದರು. ರೋಹಿತ್ ಅನುಪಸ್ಥಿತಿಯಲ್ಲಿ ಕೆ.ಎಲ್. ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ತಕ್ಷಣವೇ ರೋಹಿತ್ ಮೈದಾನ ತೊರೆದರು. ಬಳಿಕ ಈ ಕುರಿತು ಮಾಹಿತಿ ನೀಡಿರುವ ಬಿಸಿಸಿಐ, ಸ್ಕ್ಯಾನಿಂಗ್ಗಾಗಿ ತೆರಳಿದ್ದಾರೆ ಎಂದು ತಿಳಿಸಿದೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…