ಢಾಕಾ: ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ನಾಯಕ ರೋಹಿತ್ ಶರ್ಮಾ ಅವರ ಎಡಗೈಗೆ ಗಾಯವಾಗಿದ್ದು, ಸ್ಕ್ಯಾನಿಂಗ್ಗಾಗಿ ಆಸ್ಪತ್ರೆಗೆ ತೆರಳಿದ್ದಾರೆ.
ಈ ಕುರಿತು ಬಿಸಿಸಿಐ ಟ್ವೀಟ್ನಲ್ಲಿ ತಿಳಿಸಿದೆ. ಶೇರ್ ಬಾಂಗ್ಲಾ ರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.
ಬಾಂಗ್ಲಾದೇಶ ಇನ್ನಿಂಗ್ಸ್ನ ಎರಡನೇ ಓವರ್ನಲ್ಲಿ ಮೊಹಮ್ಮದ್ ಸಿರಾಜ್ ಎಸೆದ ಚೆಂಡು ಬಾಂಗ್ಲಾ ಆರಂಭಿಕ ಬ್ಯಾಟರ್ ಅನಾಮುಲ್ ಹಕ್ ಅವರ ಬ್ಯಾಟ್ಗೆ ಸವರಿ ಸ್ಲಿಪ್ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ರೋಹಿತ್ ಶರ್ಮಾ ಅವರತ್ತ ರಭಸದಿಂದ ಸಾಗಿತ್ತು. ಆದರೆ ಕ್ಯಾಚ್ ಅನ್ನು ಕೈಚೆಲ್ಲಿದ ರೋಹಿತ್, ಎಡಗೈಗೆ ಗಾಯಮಾಡಿಕೊಂಡಿದ್ದರು. ರೋಹಿತ್ ಅನುಪಸ್ಥಿತಿಯಲ್ಲಿ ಕೆ.ಎಲ್. ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ತಕ್ಷಣವೇ ರೋಹಿತ್ ಮೈದಾನ ತೊರೆದರು. ಬಳಿಕ ಈ ಕುರಿತು ಮಾಹಿತಿ ನೀಡಿರುವ ಬಿಸಿಸಿಐ, ಸ್ಕ್ಯಾನಿಂಗ್ಗಾಗಿ ತೆರಳಿದ್ದಾರೆ ಎಂದು ತಿಳಿಸಿದೆ.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…