ಕ್ರೀಡೆ

IND vs END 1st test: ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್‌ನಲ್ಲಿ 246ಕ್ಕೆ ಆಲ್‌ಔಟ್‌

ಹೈದರಾಬಾದ್: ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ತಂಡ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 246ರನ್ ಗೆ ಆಲೌಟ್ ಆಗಿದೆ.

ಭಾರತೀಯ ಸ್ಪಿನ್ನರ್ ಗಳ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ 246ರನ್ ಗಳಿಗೆ ಆಲೌಟ್ ಆಗಿದೆ. ಇಂಗ್ಲೆಂಡ್ ಪರ ಆಲ್ ರೌಂಡರ್ ಬೆನ್ ಸ್ಟೋಕ್ಸ್ 70 ರನ್ ಗಳಿಸಿದರೆ, ಡಕೆಟ್ 35 ರನ್, ಝ್ಯಾಕ್ ಕ್ರಾಲಿ 20, ಜಾನಿ ಬೇರ್ ಸ್ಟೋ 37, ಜೋ ರೂಟ್ 29, ಟಾಮ್ ಹಾರ್ಟ್ಲೇ 23 ರನ್ ಗಳಿಸಿದರು.

ಪಂದ್ಯದ ಆರಂಭದಿಂದಲೂ ಕರಾರುವಕ್ಕಾದ ದಾಳಿ ಮಾಡಿದ ಭಾರತೀಯ ಬೌಲರ್ ಗಳು 128 ರನ್ ಗಳಿಗೆ 5 ವಿಕೆಟ್ ಕಬಳಿಸಿದ್ದರು. ಈ ಹೊತ್ತಿನಲ್ಲಿ ಸಂಕಷ್ಟದಲ್ಲಿದ್ದ ಇಂಗ್ಲೆಂಡ್ ತಂಡಕ್ಕೆ ಆಲ್ರೌಂಡರ್ ಬೆನ್ ಸ್ಟೋಕ್ಸ್ ನೆರವಾದರು. 88 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 6 ಬೌಂಡರಿಗಳ ನೆರವಿನಿಂದ ಸ್ಟೋಕ್ಸ್ 70ರನ್ ಸಿಡಿಸಿದರು. ಅವರಿಗೆ ತಂಡದ ಇತರೆ ಆಟಗಾರರಿಂದ ಸಾಥ್ ದೊರೆಯಲಿಲ್ಲ. ಸ್ಟೋಕ್ಸ್ ಕೂಡ 70 ರನ್ ಗಳಿಸಿ ಬುಮ್ರಾಗೆ ಕ್ಲೀನ್ ಬೋಲ್ಡ್ ಆಗುವ ಮೂಲಕ ವಿಕೆಟ್ ಒಪ್ಪಿಸಿದರು

ಆ ಮೂಲಕ ಇಂಗ್ಲೆಂಡ್ ತಂಡ 246ರನ್ ಗೆ ಆಲೌಟ್ ಆಯಿತು. ಭಾರತ ತಂಡದ ಪರ ರವೀಂದ್ರ ಜಡೇಜಾ ಮತ್ತು ಆರ್ ಅಶ್ವಿನ್ ತಲಾ 3 ವಿಕೆಟ್ ಪಡೆದರೆ, ಬುಮ್ರಾ ಮತ್ತು ಅಕ್ಸರ್ ಪಟೇಲ್ ತಲಾ 2 ವಿಕೆಟ್ ಕಬಳಿಸಿದರು.

andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

13 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago