ಕ್ರೀಡೆ

IND vs END 1st test: ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್‌ನಲ್ಲಿ 246ಕ್ಕೆ ಆಲ್‌ಔಟ್‌

ಹೈದರಾಬಾದ್: ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ತಂಡ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 246ರನ್ ಗೆ ಆಲೌಟ್ ಆಗಿದೆ.

ಭಾರತೀಯ ಸ್ಪಿನ್ನರ್ ಗಳ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ 246ರನ್ ಗಳಿಗೆ ಆಲೌಟ್ ಆಗಿದೆ. ಇಂಗ್ಲೆಂಡ್ ಪರ ಆಲ್ ರೌಂಡರ್ ಬೆನ್ ಸ್ಟೋಕ್ಸ್ 70 ರನ್ ಗಳಿಸಿದರೆ, ಡಕೆಟ್ 35 ರನ್, ಝ್ಯಾಕ್ ಕ್ರಾಲಿ 20, ಜಾನಿ ಬೇರ್ ಸ್ಟೋ 37, ಜೋ ರೂಟ್ 29, ಟಾಮ್ ಹಾರ್ಟ್ಲೇ 23 ರನ್ ಗಳಿಸಿದರು.

ಪಂದ್ಯದ ಆರಂಭದಿಂದಲೂ ಕರಾರುವಕ್ಕಾದ ದಾಳಿ ಮಾಡಿದ ಭಾರತೀಯ ಬೌಲರ್ ಗಳು 128 ರನ್ ಗಳಿಗೆ 5 ವಿಕೆಟ್ ಕಬಳಿಸಿದ್ದರು. ಈ ಹೊತ್ತಿನಲ್ಲಿ ಸಂಕಷ್ಟದಲ್ಲಿದ್ದ ಇಂಗ್ಲೆಂಡ್ ತಂಡಕ್ಕೆ ಆಲ್ರೌಂಡರ್ ಬೆನ್ ಸ್ಟೋಕ್ಸ್ ನೆರವಾದರು. 88 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 6 ಬೌಂಡರಿಗಳ ನೆರವಿನಿಂದ ಸ್ಟೋಕ್ಸ್ 70ರನ್ ಸಿಡಿಸಿದರು. ಅವರಿಗೆ ತಂಡದ ಇತರೆ ಆಟಗಾರರಿಂದ ಸಾಥ್ ದೊರೆಯಲಿಲ್ಲ. ಸ್ಟೋಕ್ಸ್ ಕೂಡ 70 ರನ್ ಗಳಿಸಿ ಬುಮ್ರಾಗೆ ಕ್ಲೀನ್ ಬೋಲ್ಡ್ ಆಗುವ ಮೂಲಕ ವಿಕೆಟ್ ಒಪ್ಪಿಸಿದರು

ಆ ಮೂಲಕ ಇಂಗ್ಲೆಂಡ್ ತಂಡ 246ರನ್ ಗೆ ಆಲೌಟ್ ಆಯಿತು. ಭಾರತ ತಂಡದ ಪರ ರವೀಂದ್ರ ಜಡೇಜಾ ಮತ್ತು ಆರ್ ಅಶ್ವಿನ್ ತಲಾ 3 ವಿಕೆಟ್ ಪಡೆದರೆ, ಬುಮ್ರಾ ಮತ್ತು ಅಕ್ಸರ್ ಪಟೇಲ್ ತಲಾ 2 ವಿಕೆಟ್ ಕಬಳಿಸಿದರು.

andolanait

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

2 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

2 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

3 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

3 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

4 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

5 hours ago