ಹೈದರಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊಲದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಪಿನ್ ಜೋಡಿಗಳಾದ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಅವರು ಟೀಂ ಇಂಡಿಯಾ ಪರವಾಗಿ ನೂತನ ದಾಖಲೆ ನಿರ್ಮಿಸಿದ್ದಾರೆ.
ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಜಡ್ಡು-ಅಶ್ವಿನ್ ಜೋಡಿ 500+ ವಿಕೆಟ್ಗಳನನ್ನು ಕಬಳಿಸುವ ಮೂಲಕ ಅತಿಹೆಚ್ಚು ವಿಕೆಟ್ ಪಡೆ ಟೀಂ ಇಂಡಿಯಾ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಮೊಲದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ನ ಬೆನ್ ಡಕೆಟ್ (35) ರನ್ನು ಎಲ್ಬಿಡಬ್ಲ್ಯೂ ಬಲೆಗೆ ಬೀಳಿಸುವ ಮೂಲಕ ಟೀಂ ಇಂಡಿಯಾ ಪರವಾಗಿ ಮೊದಲ ಯಶಸ್ಸು ತಂದುಕೊಟ್ಟಿದ್ದರು. ಇದರ ಬೆನ್ನಲ್ಲೇ ರವೀಂದ್ರ ಜಡೇಜಾ ಒಲಿ ಪೋಪ್ (1) ವಿಕೆಟ್ ಕಬಳಿಸಿದರು. ಈ ಎರಡು ವಿಕೆಟ್ಗಳನ್ನು ಪಡೆದು ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಪಡೆದ ಜೋಡಿ ಎಂಬ ದಾಖಲೆ ಅಶ್ವಿನ್-ಜಡೇಜಾ ಪಾಲಾಯಿತು.
ಇದಕ್ಕು ಮೊದಲು ಟೀಂ ಇಂಡಿಯಾ ಪರವವಾಗಿ ಈ ದಾಖಲೆಯನ್ನು ಅನಿಲ್ ಕುಂಬ್ಳೆ ಹಾಗೂ ಹರ್ಭಜನ್ ಸಿಂಗ್ ತಮ್ಮ ಹೆಸರಿಗೆ ಬರೆದುಕೊಂಡದ್ದರು. 54 ಟೆಸ್ಟ್ ಪಂದ್ಯಗಳನ್ನಾಡಿದ್ದ ಕುಂಬ್ಳೆ-ಭಜ್ಜಿ ಜೋಡಿ ಒಟ್ಟು 501 ವಿಕೆಟ್ ಕಬಳಿಸಿ ಬರೆದಿದ್ದ ದಾಖಲೆಯನ್ನು, ಇದೀಗ ಜಡ್ಡು-ಅಶ್ವಿನ್ ಜೋಡಿ ಅಳಿಸಿಹಾಕಿದ್ದಾರೆ.
ಟೀಂ ಇಂಡಿಯಾ ಪರವಾಗಿ 50 ಟೆಸ್ಟ್ ಪಂದ್ಯಗಳಲ್ಲಿ ಜೊತೆಯಾಗಿ ಬೌಲಿಂಗ್ ಮಾಡಿರುವ ಅಶ್ವಿನ್-ಜಡೇಜಾ ಜೋಡಿಯು ಇದೀಗ 502 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದ ಪರವಾಗಿ ಅತೀಹೆಚ್ಚು ವಿಕೆಟ್ ಕಿತ್ತ ಯಶಸ್ವಿ ಬೌಲಿಂಗ್ ಜೋಡಿ ಎಂಬ ದಾಖಲೆ ಬರೆದಿದ್ದಾರೆ.
ಟೆಸ್ಟ್ ಕ್ರಿಕೆಟ್ನ ಅತ್ಯಂತ ಯಶಸ್ವಿ ಜೋಡಿ ಎಂಬ ವಿಶ್ವ ದಾಖಲೆ ಇರುವುದು ಇಂಗ್ಲೆಂಡ್ ವೇಗಿಗಳಾದ ಜೇಮ್ಸ್ ಅ್ಯಂಡರ್ಸನ್ ಹಾಗೂ ಸ್ಟುವರ್ಟ್ ಬ್ರಾಡ್ ಹೆಸರಿನಲ್ಲಿ. ಜೊತೆಯಾಗಿ 138 ಟೆಸ್ಟ್ ಪಂದ್ಯಗಳನ್ನಾಡಿರುವ ಈ ಜೋಡಿ ಒಟ್ಟು 1039 ವಿಕೆಟ್ಗಳನ್ನು ಕಬಳಿಸಿ ವರ್ಲ್ಡ್ ರೆಕಾರ್ಡ್ನ್ನು ತನ್ನದಾಗಿಸಿಕೊಂಡಿದೆ.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…