ಕ್ರೀಡೆ

IND vs ENG 1st test: ನೂತನ ದಾಖಲೆ ಬರೆದ ಅಶ್ವಿನ್‌-ಜಡೇಜಾ ಜೋಡಿ

ಹೈದರಾಬಾದ್‌: ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಮೊಲದ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಪಿನ್‌ ಜೋಡಿಗಳಾದ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್‌ ಅಶ್ವಿನ್‌ ಅವರು ಟೀಂ ಇಂಡಿಯಾ ಪರವಾಗಿ ನೂತನ ದಾಖಲೆ ನಿರ್ಮಿಸಿದ್ದಾರೆ.

ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಜಡ್ಡು-ಅಶ್ವಿನ್‌ ಜೋಡಿ 500+ ವಿಕೆಟ್​ಗಳನನ್ನು ಕಬಳಿಸುವ ಮೂಲಕ ಅತಿಹೆಚ್ಚು ವಿಕೆಟ್‌ ಪಡೆ ಟೀಂ ಇಂಡಿಯಾ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಮೊಲದ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ನ ಬೆನ್ ಡಕೆಟ್​ (35) ರನ್ನು ಎಲ್​ಬಿಡಬ್ಲ್ಯೂ ಬಲೆಗೆ ಬೀಳಿಸುವ ಮೂಲಕ ಟೀಂ ಇಂಡಿಯಾ ಪರವಾಗಿ ಮೊದಲ ಯಶಸ್ಸು ತಂದುಕೊಟ್ಟಿದ್ದರು. ಇದರ ಬೆನ್ನಲ್ಲೇ ರವೀಂದ್ರ ಜಡೇಜಾ ಒಲಿ ಪೋಪ್ (1) ವಿಕೆಟ್ ಕಬಳಿಸಿದರು. ಈ ಎರಡು ವಿಕೆಟ್​ಗಳನ್ನು ಪಡೆದು ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಪಡೆದ ಜೋಡಿ ಎಂಬ ದಾಖಲೆ ಅಶ್ವಿನ್-ಜಡೇಜಾ ಪಾಲಾಯಿತು.

ಇದಕ್ಕು ಮೊದಲು ಟೀಂ ಇಂಡಿಯಾ ಪರವವಾಗಿ ಈ ದಾಖಲೆಯನ್ನು ಅನಿಲ್ ಕುಂಬ್ಳೆ ಹಾಗೂ ಹರ್ಭಜನ್ ಸಿಂಗ್ ತಮ್ಮ ಹೆಸರಿಗೆ ಬರೆದುಕೊಂಡದ್ದರು. 54 ಟೆಸ್ಟ್ ಪಂದ್ಯಗಳನ್ನಾಡಿದ್ದ ಕುಂಬ್ಳೆ-ಭಜ್ಜಿ ಜೋಡಿ ಒಟ್ಟು 501 ವಿಕೆಟ್ ಕಬಳಿಸಿ ಬರೆದಿದ್ದ ದಾಖಲೆಯನ್ನು, ಇದೀಗ ಜಡ್ಡು-ಅಶ್ವಿನ್‌ ಜೋಡಿ ಅಳಿಸಿಹಾಕಿದ್ದಾರೆ.

ಟೀಂ ಇಂಡಿಯಾ ಪರವಾಗಿ 50 ಟೆಸ್ಟ್​ ಪಂದ್ಯಗಳಲ್ಲಿ ಜೊತೆಯಾಗಿ ಬೌಲಿಂಗ್ ಮಾಡಿರುವ ಅಶ್ವಿನ್-ಜಡೇಜಾ ಜೋಡಿಯು ಇದೀಗ 502 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ ಭಾರತದ ಪರವಾಗಿ ಅತೀಹೆಚ್ಚು ವಿಕೆಟ್‌ ಕಿತ್ತ ಯಶಸ್ವಿ ಬೌಲಿಂಗ್ ಜೋಡಿ ಎಂಬ ದಾಖಲೆ ಬರೆದಿದ್ದಾರೆ.

ಟೆಸ್ಟ್ ಕ್ರಿಕೆಟ್​ನ ಅತ್ಯಂತ ಯಶಸ್ವಿ ಜೋಡಿ ಎಂಬ ವಿಶ್ವ ದಾಖಲೆ ಇರುವುದು ಇಂಗ್ಲೆಂಡ್​ ವೇಗಿಗಳಾದ ಜೇಮ್ಸ್​ ಅ್ಯಂಡರ್ಸನ್ ಹಾಗೂ ಸ್ಟುವರ್ಟ್ ಬ್ರಾಡ್ ಹೆಸರಿನಲ್ಲಿ. ಜೊತೆಯಾಗಿ 138 ಟೆಸ್ಟ್ ಪಂದ್ಯಗಳನ್ನಾಡಿರುವ ಈ ಜೋಡಿ ಒಟ್ಟು 1039 ವಿಕೆಟ್​ಗಳನ್ನು ಕಬಳಿಸಿ ವರ್ಲ್ಡ್​ ರೆಕಾರ್ಡ್‌ನ್ನು ತನ್ನದಾಗಿಸಿಕೊಂಡಿದೆ.

andolanait

Recent Posts

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

23 mins ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

25 mins ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

26 mins ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

28 mins ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…

36 mins ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

40 mins ago