ಕ್ರೀಡೆ

IND vs ENG 1st test: ನೂತನ ದಾಖಲೆ ಬರೆದ ಅಶ್ವಿನ್‌-ಜಡೇಜಾ ಜೋಡಿ

ಹೈದರಾಬಾದ್‌: ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಮೊಲದ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಪಿನ್‌ ಜೋಡಿಗಳಾದ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್‌ ಅಶ್ವಿನ್‌ ಅವರು ಟೀಂ ಇಂಡಿಯಾ ಪರವಾಗಿ ನೂತನ ದಾಖಲೆ ನಿರ್ಮಿಸಿದ್ದಾರೆ.

ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಜಡ್ಡು-ಅಶ್ವಿನ್‌ ಜೋಡಿ 500+ ವಿಕೆಟ್​ಗಳನನ್ನು ಕಬಳಿಸುವ ಮೂಲಕ ಅತಿಹೆಚ್ಚು ವಿಕೆಟ್‌ ಪಡೆ ಟೀಂ ಇಂಡಿಯಾ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಮೊಲದ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ನ ಬೆನ್ ಡಕೆಟ್​ (35) ರನ್ನು ಎಲ್​ಬಿಡಬ್ಲ್ಯೂ ಬಲೆಗೆ ಬೀಳಿಸುವ ಮೂಲಕ ಟೀಂ ಇಂಡಿಯಾ ಪರವಾಗಿ ಮೊದಲ ಯಶಸ್ಸು ತಂದುಕೊಟ್ಟಿದ್ದರು. ಇದರ ಬೆನ್ನಲ್ಲೇ ರವೀಂದ್ರ ಜಡೇಜಾ ಒಲಿ ಪೋಪ್ (1) ವಿಕೆಟ್ ಕಬಳಿಸಿದರು. ಈ ಎರಡು ವಿಕೆಟ್​ಗಳನ್ನು ಪಡೆದು ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಪಡೆದ ಜೋಡಿ ಎಂಬ ದಾಖಲೆ ಅಶ್ವಿನ್-ಜಡೇಜಾ ಪಾಲಾಯಿತು.

ಇದಕ್ಕು ಮೊದಲು ಟೀಂ ಇಂಡಿಯಾ ಪರವವಾಗಿ ಈ ದಾಖಲೆಯನ್ನು ಅನಿಲ್ ಕುಂಬ್ಳೆ ಹಾಗೂ ಹರ್ಭಜನ್ ಸಿಂಗ್ ತಮ್ಮ ಹೆಸರಿಗೆ ಬರೆದುಕೊಂಡದ್ದರು. 54 ಟೆಸ್ಟ್ ಪಂದ್ಯಗಳನ್ನಾಡಿದ್ದ ಕುಂಬ್ಳೆ-ಭಜ್ಜಿ ಜೋಡಿ ಒಟ್ಟು 501 ವಿಕೆಟ್ ಕಬಳಿಸಿ ಬರೆದಿದ್ದ ದಾಖಲೆಯನ್ನು, ಇದೀಗ ಜಡ್ಡು-ಅಶ್ವಿನ್‌ ಜೋಡಿ ಅಳಿಸಿಹಾಕಿದ್ದಾರೆ.

ಟೀಂ ಇಂಡಿಯಾ ಪರವಾಗಿ 50 ಟೆಸ್ಟ್​ ಪಂದ್ಯಗಳಲ್ಲಿ ಜೊತೆಯಾಗಿ ಬೌಲಿಂಗ್ ಮಾಡಿರುವ ಅಶ್ವಿನ್-ಜಡೇಜಾ ಜೋಡಿಯು ಇದೀಗ 502 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ ಭಾರತದ ಪರವಾಗಿ ಅತೀಹೆಚ್ಚು ವಿಕೆಟ್‌ ಕಿತ್ತ ಯಶಸ್ವಿ ಬೌಲಿಂಗ್ ಜೋಡಿ ಎಂಬ ದಾಖಲೆ ಬರೆದಿದ್ದಾರೆ.

ಟೆಸ್ಟ್ ಕ್ರಿಕೆಟ್​ನ ಅತ್ಯಂತ ಯಶಸ್ವಿ ಜೋಡಿ ಎಂಬ ವಿಶ್ವ ದಾಖಲೆ ಇರುವುದು ಇಂಗ್ಲೆಂಡ್​ ವೇಗಿಗಳಾದ ಜೇಮ್ಸ್​ ಅ್ಯಂಡರ್ಸನ್ ಹಾಗೂ ಸ್ಟುವರ್ಟ್ ಬ್ರಾಡ್ ಹೆಸರಿನಲ್ಲಿ. ಜೊತೆಯಾಗಿ 138 ಟೆಸ್ಟ್ ಪಂದ್ಯಗಳನ್ನಾಡಿರುವ ಈ ಜೋಡಿ ಒಟ್ಟು 1039 ವಿಕೆಟ್​ಗಳನ್ನು ಕಬಳಿಸಿ ವರ್ಲ್ಡ್​ ರೆಕಾರ್ಡ್‌ನ್ನು ತನ್ನದಾಗಿಸಿಕೊಂಡಿದೆ.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago